ಇಳಕಲ್ಲನಲ್ಲಿ ಪಿಗ್ಮಿ ಸಂಗ್ರಹಕಾರನ ಕೊಲೆ: ಕಾರಣ..?

Kannadaprabha News   | Asianet News
Published : Oct 29, 2020, 12:18 PM IST
ಇಳಕಲ್ಲನಲ್ಲಿ ಪಿಗ್ಮಿ ಸಂಗ್ರಹಕಾರನ ಕೊಲೆ: ಕಾರಣ..?

ಸಾರಾಂಶ

ಬಿಡಿಸಿಸಿ ಬ್ಯಾಂಕಿನಲ್ಲಿ ಪಿಗ್ಮಿ ಸಂಗ್ರಹಕಾರನಾಗಿ ಕಾರ್ಯ ನಿರ್ವಹಿಸುತಿದ್ದವನ ಕೊಲೆ| ಬಾಗಲಕೋಟೆ ಇಳಕಲ್ಲನಲ್ಲಿ ನಡೆದ ಘಟನೆ| ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ| 

ಇಳಕಲ್ಲ(ಅ.29): ನಗರದ ಹುಚನೂರ ಕ್ರಾಸ್‌ ಹತ್ತಿರ ವ್ಯಕ್ತಿಯೋರ್ವನ ಕೊಲೆ ಮಾಡಿದ ಘಟನೆ ಬುಧವಾರ ಸಂಭವಿಸಿದೆ. ನಗರದ ನಿವಾಸಿ, ಮೂಲತಃ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕು ಬಸವರಾಜ ದೊಡ್ಡಪ್ಪ ಬಿರಾದಾರ (42) ಕೊಲೆಗೀಡಾದ ದುರ್ದೈವಿ. 

ಈತ ಇಳಕಲ್ಲ ನಗರದ ಬಿಡಿಸಿಸಿ ಬ್ಯಾಂಕಿನಲ್ಲಿ ಪಿಗ್ಮಿ ಸಂಗ್ರಹಕಾರನಾಗಿ ಕಾರ್ಯ ನಿರ್ವಹಿಸುತಿದ್ದನು ಎಂದು ತಿಳಿದು ಬಂದಿದೆ. ವ್ಯಕ್ತಿ ಕೊಲೆ ಬಗ್ಗೆ ನಿಖರ ಕಾರಣ ತಿಳಿದು ಬಂದಿಲ್ಲ. 

ಬೆಂಗಳೂರಿನಲ್ಲಿ ಕೊಲೆ, ಉತ್ತರ ಪ್ರದೇಶದಲ್ಲಿ ಹಂತಕ: ಡಿಎನ್‌ಎ ಟೆಸ್ಟ್‌ನಿಂದ ಸುಳಿವು!

ಘಟನಾ ಸ್ಥಳಕ್ಕೆ ಬಾಗಲಕೋಟೆ ಎಸ್ಪಿ ಜಗಲಾಸರ್‌, ಸಿಪಿಐ ಅಯ್ಯನಗೌಡ, ನಗರ ಪಿಎಸ್‌ಐ ರಮೇಶ ಜಲಗೇರಿ ಭೇಟಿ ನೀಡಿ ಪರಿಶೀಲಿಸಿದರು. ಈ ಕುರಿತು ಇಳಕಲ್ಲ ಶಹರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಗ್ರ್ಯಾಮಿ ಪ್ರಶಸ್ತಿ ವಿಜೇತ ಖ್ಯಾತ ಸಂಗೀತ ನಿರ್ದೇಶಕ ರಿಕ್ಕಿ ಕೇಜ್ ಬೆಂಗಳೂರು ಮನೆಯಿಂದ ಡೆಲಿವರಿ ಬಾಯ್ಸ್ ಕಳ್ಳತನ!
5 ಸಾವಿರ ಕೊಡ್ತೀನಿ ರೂಮ್‌ಗೆ ಬಾ ಅಂದ್ರು? ಬ್ರಹ್ಮಾನಂದ ಗುರೂಜಿಯ ವಿಡಿಯೋ ವೈರಲ್