
ಬೆಂಗಳೂರು(ಅ.13): ರಿಯಲ್ ಎಸ್ಟೇಟ್ ಕಂಪನಿಯೊಂದಕ್ಕೆ ಕನ್ನಡ ಚಲನಚಿತ್ರ ರಂಗ ಖ್ಯಾತ ನಟಿ ಪ್ರಣೀತಾ ಸುಭಾಷ್ ಅವರನ್ನು ರಾಯಭಾರಿಯಾಗಿಸುವುದಾಗಿ ನಂಬಿಸಿ ಕಿಡಿಗೇಡಿಗಳು 13.5 ಲಕ್ಷ ವಂಚಿಸಿರುವ ಘಟನೆ ನಡೆದಿದೆ.
ವಸಂತ ನಗರದ ಎಸ್ವಿ ಗ್ರೂಪ್ ಆ್ಯಂಡ್ ಡೆವಲಪರ್ಸ್ ಕಂಪನಿಯ ವ್ಯವಸ್ಥಾಪಕ ಅಮರನಾಥ್ ರೆಡ್ಡಿ ಮೋಸ ಹೋಗಿದ್ದು, ಈ ಕೃತ್ಯ ಸಂಬಂಧ ಚೆನ್ನೈ ಮೂಲದ ಮೊಹಮ್ಮದ್ ಜುನಾಯತ್ ಹಾಗೂ ವರ್ಷಾ ಸೇರಿದಂತೆ ಇತರರ ವಿರುದ್ಧ ಹೈಗ್ರೌಂಡ್ಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನೆರೆಯಿಂದ ಕಷ್ಟಕ್ಕೊಳಗಾದ ಉಡುಪಿ ನೇಕಾರರ ನೆರವಿಗೆ ಪ್ರಣೀತಾ ಸುಭಾಷ್
ಕೆಲ ದಿನಗಳ ಹಿಂದೆ ತನ್ನ ಕಂಪನಿ ಪ್ರಚಾರಕ್ಕೆ ಚಲನಚಿತ್ರ ನಟಿಯರನ್ನು ರಾಯಭಾರಿಯಾಗಿ ಮಾಡಿಕೊಳ್ಳಲು ಎಸ್ವಿ ಗ್ರೂಪ್ನ ಅಮರನಾಥ್ ರೆಡ್ಡಿ ಯೋಜಿಸಿದ್ದರು. ಆಗ ತಮ್ಮ ಸ್ನೇಹಿತ ಪ್ರಶಾಂತ್ ಮೂಲಕ ಅವರಿಗೆ ಜುನಾಯತ್ ಪರಿಚಯವಾಗಿದೆ. ಆ ವೇಳೆ ರೆಡ್ಡಿ ಅವರಿಗೆ ತನಗೆ ನಟಿ ಪ್ರಣೀತಾ ಮ್ಯಾನೇಜರ್ ಜತೆ ಸ್ನೇಹವಿದೆ ಎಂದು ಆತ ಹೇಳಿದ್ದ. ಈ ಮಾತು ನಂಬಿದ ಅವರು, ತಮ್ಮ ಕಂಪನಿಗೆ ಪ್ರಣೀತಾ ಅವರನ್ನು ರಾಯಭಾರಿ ಮಾಡಿಸುವಂತೆ ಕೋರಿದ್ದರು. ಇದಕ್ಕಾಗಿ ಚೆನ್ನೈನಿಂದ ಬೆಂಗಳೂರಿಗೆ ಬರುವ ಸಲುವಾಗಿ ಜುನಾಯತ್ ಮತ್ತು ವರ್ಷಾ ವಿಮಾನ ಪಯಣದ ಖರ್ಚು ವೆಚ್ಚ ಭರಿಸಿದ್ದರು.
ಅ.6ರಂದು ನಗರಕ್ಕೆ ಬಂದಿದ್ದ ಆರೋಪಿಗಳನ್ನು ಖಾಸಗಿ ಹೋಟೆಲ್ವೊಂದರಲ್ಲಿ ರೆಡ್ಡಿ ಭೇಟಿಯಾಗಿದ್ದರು. ಆಗ ವರ್ಷಾಳನ್ನು ಪ್ರಣೀತಾ ಅವರ ಮ್ಯಾನೇಜರ್ ಎಂದು ಜುನಾಯತ್ ಪರಿಚಯಿಸಿದ್ದ. ಈ ವೇಳೆ ವರ್ಷಾ, ನೀವು ಹಣ ಕೊಟ್ಟರೆ 20 ನಿಮಿಷದೊಳಗೆ ಒಪ್ಪಂದ ಕಾಗದ ಪತ್ರಗಳನ್ನು ಸಿದ್ಧಪಡಿಸುತ್ತೇನೆ ಎಂದಿದ್ದಳು. ಈ ಮಾತಿಗೆ ಸಮ್ಮತಿಸಿದ ರೆಡ್ಡಿ ಅವರು, ಕೂಡಲೇ ಆರೋಪಿಗಳಿಗೆ 13.50 ಲಕ್ಷ ನೀಡಿದ್ದರು. ಹಣ ಪಡೆದ ಬಳಿಕ ಅವರು ಮತ್ತೆ ಸಂಪರ್ಕಕ್ಕೆ ಸಿಗದೆ ತಪ್ಪಿಸಿಕೊಂಡಿದ್ದಾರೆ. ಕೊನೆಗೆ ರೆಡ್ಡಿ ಅವರಿಗೆ ಮೋಸ ಹೋಗಿರುವುದು ಅರವಿಗೆ ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ