
ಬೆಂಗಳೂರು (ಜೂ.21): ವೇಗವಾಗಿ ಬಂದ ಪಿಕಪ್ ವಾಹನ ನಿಯಂತ್ರಣ ಕಳೆದುಕೊಂಡು ಅಂಗಡಿಗೆ ನುಗ್ಗಿದ ಘಟನೆ ಬೆಂಗಳೂರಿನ ಸುಬ್ರಹ್ಮಣ್ಯನಗರ ಮುಖ್ಯ ರಸ್ತೆಯಲ್ಲಿ ನಡೆದಿದೆ.
ನಿನ್ನೆ ಸುಮಾರು ಮಧ್ಯಾಹ್ನ 2.30 ಕ್ಕೆ ನಡೆದಿರುವ ಅಪಘಾತ, ಘಟನೆಯಲ್ಲಿ ಓರ್ವನ ಕಾಲು ಕಟ್ ಆಗಿದೆ. ಅಪಘಾತದ ವೇಳೆ ಫುಟ್ಪಾತ್ ಪಕ್ಕದಲ್ಲಿ ಗಾಡಿ ನಿಲ್ಲಿಸಿಕೊಂಡು ನಿಂತಿದ್ದ ವಾಹನ ಸವಾರ. ಈ ವೇಳೆ ಬೈಕ್ ಸವಾರನಿಗೆ ಗುದ್ದಿ ಗೂಳಿಯಂತೆ ಅಂಗಡಿಗೆ ನುಗ್ಗಿದ ಪಿಕಪ್ ವಾಹನ. ಗಾಯಾಳುವನ್ನು ಸ್ಥಳೀಯರ ಸಹಾಯದಿಂದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವೇಗ ಮೀತಿ ಮೀರಿದ್ದರಿಂದ ಅಪಘಾತ ಸಂಭವಿಸಿದೆ.
ಘಟನೆ ದೃಶ್ಯ ಸಿಸಿಟಿವಿಯಯಲ್ಲಿ ಸೆರೆಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಅಪಘಾತ ಘಟನೆ ಸಂಬಂಧ ಮಲ್ಲೇಶ್ವರಂ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸ್ಕೂಟಿ-ಪಿಕಪ್ ವಾಹನ ನಡುವೆ ಭೀಕರ ಅಪಘಾತ; ಮಹಿಳೆ ದುರ್ಮರಣ!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ