ಸಾಲ ತೀರಿಸಲು ವೃದ್ಧೆಯ ಕೈಕಾಲು ಕಟ್ಟಿ ಸರ ಕಿತ್ತ ಖದೀಮರು..!

Kannadaprabha News   | Asianet News
Published : Aug 06, 2020, 09:59 AM IST
ಸಾಲ ತೀರಿಸಲು ವೃದ್ಧೆಯ ಕೈಕಾಲು ಕಟ್ಟಿ ಸರ ಕಿತ್ತ ಖದೀಮರು..!

ಸಾರಾಂಶ

ಗೆಳತಿಯೊಂದಿಗೆ ಕಷ್ಟ ಹೇಳಿಕೊಂಡಿದ್ದ ಖದೀಮ| ಪಕ್ಕದ ಮನೆಯನ್ನೇ ಟಾರ್ಗೆಟ್‌ ಮಾಡಿದ ಚಾಲಾಕಿ ಕಳ್ಳಿ|  ಆರೋಪಿಗಳಿಂದ ಬೈಕ್‌ ಹಾಗೂ ಹಣ ವಶ|

ಬೆಂಗಳೂರು(ಆ.06): ತಮ್ಮ ಪರಿಚಿತ ವೃದ್ಧೆಯ ಕೈ ಕಾಲು ಕಟ್ಟಿಹಾಕಿ ಚಿನ್ನಾಭರಣ ದೋಚಿದ್ದ ಮಹಿಳೆ ಹಾಗೂ ಆಕೆಯ ಗೆಳೆಯನನ್ನು ಪೀಣ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ಎಚ್‌.ಕಿಶೋರ್‌ ಕುಮಾರ್‌ ಹಾಗೂ ಚಿಕ್ಕಬಿದರಕಲ್ಲು ನಿವಾಸಿ ಲೀಲಾವತಿ ನಾಗ್‌ ಬಂಧಿತರಾಗಿದ್ದು, ಆರೋಪಿಗಳಿಂದ ಬೈಕ್‌ ಹಾಗೂ ಹಣ ವಶಪಡಿಸಿಕೊಳ್ಳಲಾಗಿದೆ. ಕೆಲ ದಿನಗಳ ಹಿಂದೆ ಚನ್ನನಾಯಕನಪಾಳ್ಯದಲ್ಲಿ 68 ವರ್ಷದ ವೃದ್ಧೆ ವೆಂಕಟಲಕ್ಷ್ಮಮ್ಮ ಮನೆಯಲ್ಲಿ ಕಳ್ಳತನವಾಗಿತ್ತು. ಈ ಬಗ್ಗೆ ತನಿಖೆ ಕೈಗೆತ್ತಿಕೊಂಡ ಪೊಲೀಸರು, ಅನುಮಾನದ ಮೇರೆಗೆ ಅಜ್ಜಿ ಪರಿಚಿತ ಲೀಲಾವತಿಯನ್ನು ವಶಕ್ಕೆ ಪಡೆದಾಗ ಸತ್ಯ ಬಯಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಕೊಲೆ ಪ್ರಕರಣ: ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದವನಿಗೆ ಗುಂಡೇಟು

ಬಳ್ಳಾರಿ ಜಿಲ್ಲೆ ಕಂಪ್ಲಿ ತಾಲೂಕಿನ ಲೀಲಾವತಿಯು ಕೌಟುಂಬಿಕ ಕಾರಣಗಳ ಹಿನ್ನೆಲೆಯಲ್ಲಿ ಪತಿಯಿಂದ ಪ್ರತ್ಯೇಕವಾಗಿ ಚಿಕ್ಕಬಿದರಕಲ್ಲು ಗ್ರಾಮದಲ್ಲಿ ವಾಸವಾಗಿದ್ದಳು. ಕೆಲ ತಿಂಗಳ ಹಿಂದೆ ಆಕೆಗೆ ತನ್ನ ತಾಲೂಕಿನ ಕಿಶೋರ್‌ ಪರಿಚಯವಾಗಿತ್ತು. ನಗರದಲ್ಲಿ ಆತ ಕೂಡಾ ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದು, ಇತ್ತೀಚೆಗೆ ಉದ್ಯೋಗವಿಲ್ಲದೆ ಊರು ಸೇರಿದ್ದ. ಈ ಸ್ನೇಹದಲ್ಲೇ ಕಿಶೋರ್‌, ತನ್ನ ಆರ್ಥಿಕ ಪರಿಸ್ಥಿತಿ ಬಗ್ಗೆ ಗೆಳತಿ ಬಳಿ ಹೇಳಿಕೊಂಡಿದ್ದ. ಸಾಲ ಮಾಡಿಕೊಂಡಿದ್ದೇನೆ. ಸಹಾಯ ಮಾಡುವಂತೆ ಆತ ಕೇಳಿಕೊಂಡಿದ್ದ ಎಂದು ಪೊಲೀಸರು ಹೇಳಿದ್ದಾರೆ.

ತನ್ನ ಮನೆ ಹತ್ತಿರದ ಏಕಾಂಗಿಯಾಗಿ ನೆಲೆಸಿರುವ ವೆಂಕಟಲಕ್ಷ್ಮಮ್ಮ ಮನೆಯಲ್ಲಿ ಕಳ್ಳತನಕ್ಕೆ ಸಂಚು ರೂಪಿಸಿದ್ದಳು. ಅಂತೆಯೇ ಕಂಪ್ಲಿಯಿಂದ ಕಿಶೋರ್‌ನನ್ನು ಕರೆಸಿಕೊಂಡ ಆಕೆ, ಜು.23ರಂದು ಸಂಜೆ ಅಜ್ಜಿ ಮನೆಗೆ ನುಗ್ಗಿದ್ದರು. ಅಜ್ಜಿ ಕೈ-ಕಾಲು ಕಟ್ಟಿಹಾಕಿ 50 ಸಾವಿರ ಮೌಲ್ಯದ ಸರ ಕಿತ್ತು ಪರಾರಿಯಾಗಿದ್ದರು. ಬಳಿಕ ಸ್ಥಳೀಯ ಸಿಸಿಟಿವಿ ಕ್ಯಾಮೆರಾದ ದೃಶ್ಯಾವಳಿ ಹಾಗೂ ಅಜ್ಜಿ ನೀಡಿದ ಹೇಳಿಕೆ ಮಾಹಿತಿ ಆಧರಿಸಿ ಆರೋಪಿಗಳನ್ನು ಪತ್ತೆ ಹಚ್ಚಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಕೃತ್ಯದಲ್ಲಿ ತಲೆಮರೆಸಿಕೊಂಡಿರುವ ಮತ್ತೊಬ್ಬ ಆರೋಪಿ ಪತ್ತೆಗೆ ತನಿಖೆಗೆ ನಡೆದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕ್ಯಾಸ್ಟ್ರೋಲ್ ಬ್ರಾಂಡ್‌ನ ನಕಲಿ ಎಂಜಿನ್ ಆಯಿಲ್ ಉತ್ಪಾದನೆ ಮಾಡುತ್ತಿದ್ದ ಘಟಕದ ಮೇಲೆ ದಾಳಿ
ಕೋಲಾರ: ಅಪ್ಪ- ಅಮ್ಮನ ವಿಚ್ಚೇದನಕ್ಕೆ ಮನನೊಂದು 26 ವರ್ಷದ ಪುತ್ರ ಆತ್ಮ*ಹತ್ಯೆ!