ಉಗ್ರರಿಗೆ ಆಶ್ರಯ: ಚಾಮರಾಜನಗರದಲ್ಲಿ ಇಬ್ಬರು ಮೌಲ್ವಿಗಳ ಬಂಧನ

Published : Jan 12, 2020, 06:44 PM IST
ಉಗ್ರರಿಗೆ ಆಶ್ರಯ: ಚಾಮರಾಜನಗರದಲ್ಲಿ ಇಬ್ಬರು ಮೌಲ್ವಿಗಳ ಬಂಧನ

ಸಾರಾಂಶ

 ಉಗ್ರರಿಗೆ ಆಶ್ರಯ ನೀಡುವುದು ಅಥವಾ ಸಹಾಯ ಸಹಕಾರ ಮಾಡುವುದು ಕೂಡ ದೇಶದ್ರೋಹಿ ಕೆಲಸ. ದೇಶದ್ರೋಹಿ ಆರೋಪದ ಮೇಲೆ ಪೊಲೀಸರು ಇಂತವರನ್ನು ಮುಲಾಜಿಲ್ಲದೆ ಬಂಧಿಸುತ್ತಾರೆ. ಇಂತದ್ದೇ ಒಂದು ಘಟನೆ ಚಾಮರಾಜನಗರದಲ್ಲಿ ಬೆಳಕಿಗೆ ಬಂದಿದೆ. 

ಚಾಮರಾಜನಗರ, [ಜ.12]: ಶಂಕಿತ ಉಗ್ರರಿಗೆ ಆಶ್ರಯ ನೀಡಿ, ಉಗ್ರರೊಂದಿಗೆ ನಿರಂತರ ಸಂಪರ್ಕ ಹೊಂದಿದ್ದ ಶಂಕೆಯ ಹಿನ್ನಲೆಯಲ್ಲಿ ಚಾಮರಾಜನಗರದಲ್ಲಿ ಇಬ್ಬರು ಮುಸ್ಲಿಂ ಮೌಲ್ವಿಗಳನ್ನು ಪೊಲೀಸರು ಬಂಧಿಸಿದ್ದಾರೆ. 

ಬಂಧಿತರ ಹೆಸರು, ವಿವರ ಮಾತ್ರ ತಿಳಿದುಬಂದಿಲ್ಲ. ಉಗ್ರ ಚಟುವಟಿಕೆಯಲ್ಲಿ ತೊಡಗಿದ್ದ ಶಂಕಿತ ಭಯೋತ್ಪಾದಕರೊಂದಿಗೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ಕೇರಳದ ಮೂವರು ಶಂಕಿತ ಉಗ್ರರನ್ನು ಭಯೋತ್ಪಾದಕ ನಿಗ್ರಹದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಗುಂಡ್ಲುಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಂಧಿಸಲಾಗಿದೆ.

ದ. ಭಾರತದಲ್ಲಿ ಉಗ್ರ ಜಾಲ, ಶಂಕಿತ ಉಗ್ರರು ಬಿಚ್ಚಿಟ್ರು ಸ್ಫೋಟಕ ಸತ್ಯ! 

ಬಂಧಿತರಿಂದ ಪೊಲೀಸರು ವಿಚಾರಣೆಗೊಳಪಡಿಸಿದಾಗ ತಾವು ತಂಗಿರುವ ಬಗ್ಗೆ ಬಾಯ್ಬಿಟ್ಟಿದ್ದಾರೆ. ಮಾಹಿತಿ ಮೇರೆಗೆ ಪೊಲೀಸರು, ಇಬ್ಬರು ಮೌಲ್ವಿಗಳನ್ನ ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದ್ದಾರೆ.

ಮತ್ತೊಂದೆಡೆ ಕೇರಳದ ಕಣ್ಣೂರಿನಲ್ಲಿ ಜಿಹಾದಿಗಳಿಗೆ ಟ್ರೈನಿಂಗ್ ನೀಡಿದ್ದು RSS ನಾಯಕರ ಹತ್ಯೆಗೆ ತರಬೇತಿ ನೀಡಲಾಗುತ್ತಿದೆ ಎನ್ನು ವ ಸ್ಫೋಟ ಮಾಹಿತಿ ಸಿಕ್ಕಿದೆ. ಇದರಲ್ಲಿ ಬೆಂಗಳೂರಿನ ಮೂವರು ಯುವಕರು ಸಹ ಭಾಗಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಒಟ್ಟಿನಲ್ಲಿ ಕರ್ನಾಟಕದಲ್ಲಿ ಭಯೋತ್ಪಾದಕ ಜಾಲ ಹಬ್ಬಿಕೊಳ್ಳುತ್ತಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಉತ್ತರಕನ್ನಡ: ನೀರು ಕೇಳುವ ನೆಪದಲ್ಲಿ ವೃದ್ಧೆಯ ಚಿನ್ನದ ಸರ ಎಗರಿಸಿ ಖದೀಮರು ಎಸ್ಕೇಪ್!
ನಟಿ ಶಿಲ್ಪಾ ಶೆಟ್ಟಿ ಒಡೆತನದ ಪಬ್‌ನಲ್ಲಿ ಉದ್ಯಮಿಯಿಂದ ಗಲಾಟೆ; ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನ!