
ಕಾರವಾರ, (ಮಾ.10): ವೇಶ್ಯವಾಟಿಕೆ ದಂಧೆ ನಡೆಯುತ್ತಿದ್ದ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಿ, ಇಬ್ಬರು ಮಹಿಳೆಯರನ್ನ ರಕ್ಷಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ಮರಾಠಿಕೊಪ್ಪದಲ್ಲಿ ಘಟನೆ ನಡೆದಿದ್ದು, ಶಿರಸಿಯ ಮರಾಠಿಕೊಪ್ಪದ ಸಾವಿತ್ರಿ ಶಂಕರ ಭಟ್ (56), ಅಗಸೆಬಾಗಿಲಿನ ರಾಮಚಂದ್ರ ಗಜಾನನ ನಾಯ್ಕ (59), ಹೊನ್ನಾವರದ ಲಕ್ಷ್ಮೀಕಾಂತ ನಾಯ್ಕ(22) ಹಾಗೂ ಹುಬ್ಬಳ್ಳಿಯ ಆನಂದ ರೋಣಿಮಠ (57) ಬಂಧಿತ ಆರೋಪಿಗಳು.
ಸ್ಪಾ ಹೆಸರಲ್ಲಿ ಬೆತ್ತಲಾಟ: ಸಿಸಿಬಿ ಪೊಲೀಸ್ರಿಂದ ಬಯಲಾಯ್ತು ಅಸಲಿ ಆಟ
ಆರೋಪಿಗಳಿಂದ 2,850 ರೂ. ನಗದು ಮತ್ತು 4 ಮೊಬೈಲ್ ಗಳನ್ನು ಜಪ್ತಿ ಮಾಡಲಾಗಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಸಾವಿತ್ರಿ ಭಟ್ ಹಾಗೂ ರಾಮಚಂದ್ರ ನಾಯ್ಕ ಹಣ ಗಳಿಸುವ ಉದ್ದೇಶದಿಂದ ಒತ್ತಾಯ ಪೂರ್ವಕವಾಗಿ ಇಬ್ಬರು ಮಹಿಳೆಯರನ್ನು ವೇಶ್ಯಾವಾಟಿಕೆಯಲ್ಲಿ ತೊಡಗಿಸಿಕೊಂಡಿದ್ದರು ಎನ್ನಲಾಗಿದೆ.
ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಸಂತ್ರಸ್ತೆಯರನ್ನು ರಕ್ಷಿಸಿದ್ದಾರೆ. ಶಿರಸಿ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 370, 109 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ