
ಹಾಸನ (ಜು.1): ಎಸ್ಪಿ ಕಚೇರಿ ಆವರಣದಲ್ಲೇ ಪತ್ನಿಯನ್ನು ಕೊಂದು ಪೊಲೀಸ್ ಕಾನ್ಸ್ ಟೇಬಲ್ ಕ್ರೌರ್ಯ ಮೆರೆದಿದ್ದಾನೆ. ಎಸ್ಪಿ ಕಚೇರಿ ಗೆ ಬಂದ ಪತ್ನಿಯನ್ನು ಚಾಕುವಿನಿಂದ ಇರಿದು ಪತ್ನಿಯನ್ನು ಕೊಲೆ ಮಾಡಿದ್ದಾನೆ.
ಲೋಕನಾಥ್ ಪತ್ನಿ ಮಮತಾಗೆ ಚಾಕುವಿನಿಂದ ಇರಿದ ಪೊಲೀಸ್ ಕಾನ್ಸ್ ಟೇಬಲ್ ಆಗಿದ್ದು, ಶಾಂತಿಗ್ರಾಮ ಸರ್ಕಲ್ ಇನ್ಸ್ ಪೆಕ್ಟರ್ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ, ಕಳೆದ ಕೆಲವು ದಿನಗಳಿಂದ ಗಂಡ ಹೆಂಡತಿ ಗಲಾಟೆ ಮಾಡಿಕೊಂಡಿದ್ದರು.
ಪರಪ್ಪನ ಅಗ್ರಹಾರದಲ್ಲಿ ನಿಯಮ ಉಲ್ಲಂಘನೆ, ದರ್ಶನ್ ನೋಡಲು ಬಂದ ತಾಯಿ, ತಮ್ಮ ಕುಟುಂಬಕ್ಕೆ ರಾಜಾತಿಥ್ಯ!
ಈ ಹಿನ್ನೆಲೆಯಲ್ಲಿ ಗಂಡನ ವಿರುದ್ಧ ದೂರು ನೀಡಲು ಪತ್ನಿ ಮಮತಾ ಹಾಸನ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಬಂದಿದ್ದರು. ಈ ವೇಳೆ ಗಂಡ ಲೋಕನಾಥ್ ಪತ್ನಿಗೆ ಚಾಕುವಿನಿಂದ ಇರಿದಿದ್ದಾನೆ. ಪತಿಯಿಂದ ಚಾಕು ಇರಿತಕ್ಕೆ ಒಳಗಾದ ಮಮತಾಳನ್ನು ತಕ್ಷಣ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಮತಾ ಸಾವನ್ನಪ್ಪಿದ್ದಾಳೆ.
5ಕೋಟಿ ಸಾಲಕ್ಕೆ ಬಡ್ಡಿ ಸೇರಿಸಿ 13 ಕೋಟಿ ಹಿಂತಿರುಗಿಸುವಂತೆ ಕನ್ನಡ ನಿರ್ಮಾಪಕ ಪುಷ್ಕರ್ಗೆ ಕೊಲೆ ಬೆದರಿಕೆ!
24 ವರ್ಷಗಳ ಪೊಲೀಸ್ ಇಲಾಖೆಯಲ್ಲಿರುವ ಅರಕಲಗೂಡು ಮೂಲದ ಲೋಕನಾಥ್ ಮತ್ತು ಹಾಸನ ಮೂಲದ ಮಮತಾ ಪ್ರೀತಿಸಿ ಮದುವೆಯಾಗಿ 19 ವರ್ಷಗಳ ಕಾಲ ಒಟ್ಟಿಗೆ ಜೀವನ ನಡೆಸಿದ್ದರು. ಇವರಿಗೆ ಇಬ್ಬರು ಮಕ್ಕಳಿದ್ದಾರೆ. ಓರ್ವ ಮಗ ಪಿಯುಸಿ ಮತ್ತು ಮತ್ತೋರ್ವ 9ನೇ ತರಗತಿ ಓದುತ್ತಿದ್ದಾನೆ. ಆದರೆ ಕಳೆದ ನಾಲ್ಕೈದು ದಿನಗಳಿಂದ ಗಲಾಟೆ ಜಾಸ್ತಿ ಆದ ಹಿನ್ನೆಲೆಯಲ್ಲಿ ಎಸ್ಪಿ ಕಚೇರಿಗೆ ದೂರು ಕೊಡಲು ಪತ್ನಿ ಬಂದಾಗ ಹಿಂದಿನಿಂದ ಬಂದ ಪೇದೆ ಡ್ರ್ಯಾಗರ್ನಿಂದ ಇರಿದು ಕೃತ್ಯ ಮೆರೆದಿದ್ದು, ಸದ್ಯ ಕೊಲೆ ಆರೋಪಿ ಲೋಕನಾಥ್ನನ್ನು ಬಂಧಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ