
ಬೆಂಗಳೂರು(ಆ.06): ಕೊಲೆ ಪ್ರಕರಣದಲ್ಲಿ ಮಾರಕಾಸ್ತ್ರ ಜಪ್ತಿಗೆ ತೆರಳಿದ್ದಾಗ ತನಿಖಾ ತಂಡದ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ ರೌಡಿಯೊಬ್ಬನಿಗೆ ಕೆ.ಜಿ.ಹಳ್ಳಿ ಠಾಣೆ ಪೊಲೀಸರು ಗುಂಡು ಹೊಡೆದು ಬಂಧಿಸಿರುವ ಘಟನೆ ಬುಧವಾರ ನಡೆದಿದೆ.
ನಗರದ ಡಿ.ಜೆ.ಹಳ್ಳಿ ನಿವಾಸಿ ಅನೀಸ್ ಅಹಮ್ಮದ್ (32) ಎಂಬಾತನಿಗೆ ಗುಂಡೇಟು ಬಿದ್ದಿದ್ದು, ಕೆ.ಜಿ.ಹಳ್ಳಿಯ ರೋಲಿಂಗ್ ಮಿಲ್ ಸಮೀಪ ಈ ಗುಂಡಿನ ದಾಳಿ ನಡೆದಿದೆ. ಹಲವು ದಿನಗಳಿಂದ ಅನೀಸ್ ಅಪರಾಧ ಚಟುವಟಿಕೆಗಳಲ್ಲಿ ತೊಡಗಿದ್ದು, ಆತನ ಮೇಲೆ ಕೊಲೆ, ಕೊಲೆ ಯತ್ನ, ಜೀವ ಬೆದರಿಕೆ ಸೇರಿದಂತೆ 25ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಈ ಅಪರಾಧ ಹಿನ್ನೆಲೆಯಲ್ಲಿ ಅನೀಸ್ ವಿರುದ್ಧ ಡಿ.ಜೆ.ಹಳ್ಳಿ ಪೊಲೀಸ್ ಠಾಣೆಯಲ್ಲಿ ರೌಡಿಪಟ್ಟಿ ತೆರೆಯಲಾಗಿತ್ತು. ಕೆ.ಜಿ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಮೇ.30 ರಂದು ನಡೆದಿದ್ದ ಅಸ್ಗರ್ ಕೊಲೆ ಪ್ರಕರಣ ಸಂಬಂಧ ಅನೀಸ್ನನ್ನು ಬಂಧಿಸಲಾಗಿತ್ತು ಎಂದು ಪೂರ್ವ ವಿಭಾಗದ ಡಿಸಿಪಿ ಡಾ.ಎಸ್.ಡಿ.ಶರಣಪ್ಪ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಹುಚ್ಚು ಪ್ರೀತಿಗೆ ಹೆತ್ತ ತಾಯಿಯನ್ನೇ ಕೊಚ್ಚಿ ಕೊಂದ, ಮಂಡ್ಯದ ಮರ್ಡರ್ ಕಹಾನಿ
ಕೆ.ಜಿ.ಹಳ್ಳಿ ಹತ್ತಿರ ಹತ್ಯೆ ಕೃತ್ಯಕ್ಕೆ ಬಳಸಲಾಗಿದ್ದ ಮಾರಕಾಸ್ತ್ರ ಜಪ್ತಿ ಸಲುವಾಗಿ ಆರೋಪಿಯನ್ನು ಬುಧವಾರ ಬೆಳಗ್ಗೆ ತನಿಖಾ ತಂಡ ಕರೆದೊಯ್ದಿದಿದೆ. ಆಗ ಪೊಲೀಸರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಅನೀಸ್ ಯತ್ನಿಸಿದ್ದಾನೆ. ಈ ವೇಳೆ ಪಿಎಸ್ಐ ಶಾಜು ಅಂತೋನಿ ಹಾಗೂ ಹೆಡ್ ಕಾನ್ಸ್ಟೇಬಲ್ ಶ್ರೀನಿವಾಸ್ ಮೂರ್ತಿ ಅವರಿಗೆ ಪೆಟ್ಟಾಗಿದೆ. ಈ ಹಂತದಲ್ಲಿ ಒಂದು ಬಾರಿ ಗಾಳಿಯಲ್ಲಿ ಗುಂಡು ಹಾರಿಸಿ ಶರಣಾಗುವಂತೆ ಆರೋಪಿಗೆ ಇನ್ಸ್ಪೆಕ್ಟರ್ ಅಜಯ್ ಸಾರಥಿ ಸೂಚಿಸಿದ್ದಾರೆ. ಆದರೆ ಈ ಮಾತಿಗೆ ಮಣಿಯದೆ ಮತ್ತೆ ಹಲ್ಲೆಗೆ ಮುಂದಾದಾಗ ಆರೋಪಿ ಕಾಲಿಗೆ ಇನ್ಸ್ಪೆಕ್ಟರ್ ಗುಂಡು ಹೊಡೆದಿದ್ದಾರೆ. ಬಳಿಕ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ