ಕಲಬುರಗಿಯ ಸುಪರ್ ಮಾರ್ಕೆಟ್‌ ತರಕಾರಿ ಮಾರುಕಟ್ಟೆ ಬಳಿ ಫೈರಿಂಗ್‌: ಬೆಚ್ಚಿಬಿದ್ದ ಜನತೆ

Published : Feb 06, 2023, 12:30 AM IST
ಕಲಬುರಗಿಯ ಸುಪರ್ ಮಾರ್ಕೆಟ್‌ ತರಕಾರಿ ಮಾರುಕಟ್ಟೆ ಬಳಿ ಫೈರಿಂಗ್‌: ಬೆಚ್ಚಿಬಿದ್ದ ಜನತೆ

ಸಾರಾಂಶ

ತಲವಾರ್ ಹಿಡಿದು ಜನರನ್ನು ಹೆದರಿಸುತ್ತಿದ್ದ ಕಿಡಿಗೇಡಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ ಘಟನೆ ನಗರದ ಸುಪರ್ ಮಾರ್ಕೆಟ್‌ ತರಕಾರಿ ಮಾರುಕಟ್ಟೆ ಬಳಿ ನಡೆದಿದೆ. 

ಕಲಬುರಗಿ(ಫೆ.06):  ತಲವಾರ್ ಹಿಡಿದು ಜನರನ್ನು ಹೆದರಿಸುತ್ತಿದ್ದ ಕಿಡಿಗೇಡಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ ಘಟನೆ ನಗರದ ಸುಪರ್ ಮಾರ್ಕೆಟ್‌ ತರಕಾರಿ ಮಾರುಕಟ್ಟೆ ಬಳಿ ನಿನ್ನೆ(ಭಾನುವಾರ) ನಡೆದಿದೆ. ಕಲಬುರಗಿ ನಗರದ ಸುಪರ್ ಮಾರ್ಕೆಟ್ ತರಕಾರಿ ಮಾರುಕಟ್ಟೆ ಬಳಿ ರಾತ್ರಿ 9 ಗಂಟೆ ಸುಮಾರಿಗೆ ಘಟನೆ ನಡೆದಿದೆ. 

ವ್ಯಕ್ತಿಯೋರ್ವ ತಲವಾರು ಹಿಡಿದು ಜನರತ್ತ ಬೀಸುತ್ತಿದ್ದ, ಈ ಸಂದರ್ಭದಲ್ಲಿ ಪೊಲೀಸರು ಸ್ಥಳಕ್ಕೆ ಬಂದು ಆತನ ನಿಯಂತ್ರಿಸಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರ ಮೇಲೆಯೇ ದಾಳಿಗೆ ಮುಂದಾಗಿದ್ದನು. ಹೀಗಾಗಿ ಸಾರ್ವಜನಿಕರ ರಕ್ಷಣೆಗಾಗಿ ಚೌಕ್ ಠಾಣೆ ಪಿ.ಎಸ್.ಐ ಕೋತ್ವಾಲ್ ಮೂರು ಸುತ್ತು ಗುಂಡು ಹಾರಿಸಿದ್ದಾರೆ. ಎರಡು ಗುಂಡು ಆರೋಪಿಯ ಕಾಲಿಗೆ ತಗುಲಿ ಗಂಭೀರವಾಗಿ ಗಾಯಗೊಂಡಿದ್ದಾನೆ. 

ಸಕಲೇಶಪುರ: ಮೀನು ಹಿಡಿಯುತ್ತಿದ್ದವರ ಮೇಲೆ ಗುಂಡಿನ ದಾಳಿ, ಓರ್ವನ ಸಾವು

ಗಾಯಗೊಂಡ ಅಬ್ದುಲ್ ಜಾಫರ್ ಸಾಬ್ ಎಂಬ ಆರೋಪಿಯನ್ನು ಕಲಬುರಗಿಯ ಬಸವೇಶ್ವರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅತ್ಯಂತ ಜನನಿಬಿಡ ಪ್ರದೇಶದಲ್ಲಿ ನಡೆದ ಘಟನೆಯಿಂದ ಜನರು ಭಯಭೀತರಾಗಿದ್ದರು. ಹಲವರು ಅಂಗಡಿ ಬಂದ್ ಮಾಡಿಕೊಂಡು ಮನೆಗೆ ತೆರಳಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸ್ ಕಮಿಷನರ್ ಚೇತನ್ ಆರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ
ಭಜರಂಗ ದಳ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಗಣೇಶ್ ಭೀಕರ ಹ*ತ್ಯೆಗೆ ಕಾರಣ ಏನು?