
ಬೀದರ್(ಮಾ.21): ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ದರೋಡೆಕೋರರ ಮೇಲೆ ಸಿಪಿಐ ಗಾಳಿಯಲ್ಲಿ ಗುಂಡು ಹಾರಿಸಿದ ಘಟನೆ ಬೀದರ್ ನಗರದ ಮೈಕೂರ್ನ ರಿಂಗ್ ರೋಡ್ನಲ್ಲಿ ಇಂದು(ಮಂಗಳವಾರ) ನಡೆದಿದೆ.
ಹಲವು ದರೋಡೆ ಪ್ರಕರಣದಲ್ಲಿ ಭಾಗಿಯಾಗಿದ್ದ ಖದೀಮರ ಹೆಡೆಮುರಿ ಕಟ್ಟಲ್ಲು ಪೊಲೀಸರು ಮುಂದಾಗಿದ್ದರು. ಈ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಇಬ್ಬರು ಖದೀಮರು ಯತ್ನಿಸಿದ್ದರು. ಈ ವೇಳೆ ಸಿಪಿಐ ಯಾತನೂರ್ ಅವರು ಗಾಳಿಯಲ್ಲಿ ಒಂದು ಸುತ್ತಿನ ಗುಂಡು ಹಾರಿಸಿದ್ದಾರೆ.
Chikkamagaluru: ಅನಧಿಕೃತ ಬಂದೂಕುಗಳ ವಶದ ಬೆನ್ನಲ್ಲೇ ಮೀಸಲು ಅರಣ್ಯದಲ್ಲಿ 60ಕ್ಕೂ ಹೆಚ್ಚು ಫೈರಿಂಗ್ ಕಾಟ್ರೇಜ್ ಪತ್ತೆ
ಖಚಿತ ಮಾಹಿತಿ ಮೇರೆಗೆ ದರೋಡೆಕೋರರ ಮೇಲೆ ಪೊಲೀಸ್ ದಾಳಿ ಮಾಡಿದ್ದಾರೆ. ಓರ್ವ ಆರೋಪಿಯನ್ನ ಬಂಧಿಸಿದ್ದು, ಮತ್ತೊರ್ವ ಆರೋಪಿ ಪರಾರಿಯಾಗಿದ್ದಾನೆ. ಬೀದರ್ ರೂರಲ್ ಸಿಪಿಐ ಮಲ್ಲಿಕಾರ್ಜುನ ಯಾತನೂರ್, ಪಿಎಸ್ಐ ನಾಗೇಂದ್ರ ಮತ್ತು ಸಿಬ್ಬಂದಿಯಿಂದ ಕಾರ್ಯಾಚರಣೆ ನಡೆದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ