ಕಲಬುರಗಿಯಲ್ಲಿ ಬೆಳಂಬೆಳಗ್ಗೆ ಗುಂಡಿನ ಸದ್ದು: ಬೆಚ್ಚಿಬಿದ್ದ ಜನತೆ

Suvarna News   | Asianet News
Published : Oct 07, 2020, 09:01 AM IST
ಕಲಬುರಗಿಯಲ್ಲಿ ಬೆಳಂಬೆಳಗ್ಗೆ ಗುಂಡಿನ ಸದ್ದು: ಬೆಚ್ಚಿಬಿದ್ದ ಜನತೆ

ಸಾರಾಂಶ

ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಗುಂಡಿನ ದಾಳಿ| ಕಲಬುರಗಿ ನಗರದ ಹೊರವಲಯದ ತಾಜ ಸುಲ್ತಾನಪೂರ ಬಳಿ ನಡೆದ ಘಟನೆ| ಯುಪಿ ಮೂಲದ ಯುವಕನ ಕೊಲೆ ಮಾಡಿ ದರೋಡೆ ಮಾಡಿದ್ದ ಪ್ರಕರಣದ ಆರೋಪಿ ಮೋದಿನ್ ಮೇಲೆ ಫೈರಿಂಗ್| 

ಬೆಂಗಳೂರು(ಅ.07): ಇಂದು(ಬುಧವಾರ) ಬೆಳಂಬೆಳಗ್ಗೆ ನಗರದಲ್ಲಿ ಗುಂಡಿನ ಸದ್ದು ಕೇಳಿ ಬಂದಿದೆ. ಹೌದು, ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರು ಫೈರಿಂಗ್ ನಡೆಸಿದ ಘಟನೆ ನಗರದ ಹೊರವಲಯದ ತಾಜ ಸುಲ್ತಾನಪೂರ ಬಳಿ ನಡೆದ ನಡೆದಿದೆ.

ಕಳೆದ ಆಗಸ್ಟ್ 25ರಂದು ಕಲಬುರಗಿಯಲ್ಲಿ ಯುಪಿ ಮೂಲದ ಯುವಕನ ಕೊಲೆ ಪ್ರಕರಣದ ಆರೋಪಿಯಾಗಿದ್ದ ಮೋದಿನ್‌ನನ್ನ ಬಂಧಿಸುವ ವೇಳೆ ಫೈರಿಂಗ್‌ ನಡೆದಿದೆ. ಮೋದಿನ್‌ನನ್ನ ಬಂಧಿಸಿ ಚಾಕು ಜಪ್ತಿಗೆ ತೆರಳಿದ್ದ ವೇಳೆ ಪೋಲಿಸರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಓಡಿ ಹೋಗಲು ಯತ್ನಿಸಿದ್ದಾನೆ. ಹೀಗಾಗಿ ಆತ್ಮರಕ್ಷಣೆಗಾಗಿ ಪೊಲೀಸರು ಆರೋಪಿ ಮೋದಿನ್‌ ಕಾಲಿಗೆ ಗುಂಡು ಹೊಡೆದಿದ್ದಾರೆ. ಮೋದಿನ್ ಕಾಲಿಗೆ ತಗುಲಿದ ಎರಡು ಗುಂಡು ತಗುಲಿವೆ. 

ಕಲಬುರಗಿ ತಾಂಡಾ ಕಾಮುಕರು... ಗಂಡ-ಹೆಂಡತಿ  ಕೊಲೆ ನೋಡಿದ ಮಗು ಮಾಡಿದ್ದೇನು?

ಘಟನೆಯಲ್ಲಿ ಕಲಬುರಗಿ ಗ್ರಾಮೀಣ ಪೊಲೀಸ್ ಠಾಣೆಯ ಇಬ್ಬರು ಪೇದೆಗಳು ಗಾಯಗೊಂಡಿದ್ದಾರೆ.ಗಾಯಾಳು ಪೊಲೀಸರು ಕಲಬುರಗಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಪೋಲಿಸರ ಗುಂಡೇಟಿನಿಂದ ಗಾಯಗೊಂಡ ಆರೋಪಿ ಮೋದಿನ್‌ನ್ನ ಸರ್ಕಾರಿ ಆಸ್ಪತ್ರೆಲ್ಲಿ ದಾಖಲಿಸಲಾಗಿದೆ. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!
ಬೆಂಗಳೂರು ವಿಜಯ್ ಗುರೂಜಿ ಗ್ಯಾಂಗ್ ಸಮೇತ ಅರೆಸ್ಟ್; ಟೆಕ್ಕಿಗೆ ಲೈಂಗಿಕ ಶಕ್ತಿ ಹೆಚ್ಚಿಸೋದಾಗಿ ₹40 ಲಕ್ಷ ವಂಚನೆ!