ತುಮಕೂರು: ಸ್ಥಳ ಮಹಜರು ಮಾಡುವ ವೇಳೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನ, ರೌಡಿ ಶೀಟರ್‌ ಮೇಲೆ ಪೊಲೀಸ್‌ ಫೈರಿಂಗ್‌.

Published : Jul 26, 2024, 08:47 PM ISTUpdated : Jul 27, 2024, 10:26 AM IST
ತುಮಕೂರು: ಸ್ಥಳ ಮಹಜರು ಮಾಡುವ ವೇಳೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನ, ರೌಡಿ ಶೀಟರ್‌ ಮೇಲೆ ಪೊಲೀಸ್‌ ಫೈರಿಂಗ್‌.

ಸಾರಾಂಶ

ಪ್ರಕರಣವೊಂದರ ಸ್ಥಳ ಮಹಜರು ಮಾಡಲು ರೌಡಿ ಶೀಟರ್‌ ಮನು ಎಂಬಾತನನ್ನು ಸ್ಥಳಕ್ಕೆ ಕರೆದೊಯ್ಯಲಾಗಿತ್ತು.  ಈ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ತುಮಕೂರು ನಗರ ಪೊಲೀಸ್ ಠಾಣೆ ಸಿಪಿಐ ದಿನೇಶ್ ಅವರು ರೌಡಿಶೀಟರ್ ಮನು ಕಾಲಿಗೆ ಗುಂಡು ಹಾರಿಸಿದ್ದಾರೆ. 

ತುಮಕೂರು(ಜು.26):  ಪ್ರಕರಣವೊಂದರ ಸ್ಥಳ ಮಹಜರು ಮಾಡಲು ಸ್ಥಳಕ್ಕೆ ಕರೆದೊಯ್ದ ವೇಳೆ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಮೇಲೆ ಪೊಲೀಸರು ಫೈರಿಂಗ್‌ ಮಾಡಿದ್ದಾರೆ. ಘಟನೆ ನಡೆದಿರೋದು ತುಮಕೂರು ನಗರದ ದಿಬ್ಬೂರು ಬಳಿ ಇಂದು(ಶುಕ್ರವಾರ) ನಡೆದಿದೆ. 

ಪ್ರಕರಣವೊಂದರ ಸ್ಥಳ ಮಹಜರು ಮಾಡಲು ರೌಡಿ ಶೀಟರ್‌ ಮನು ಎಂಬಾತನನ್ನು ಸ್ಥಳಕ್ಕೆ ಕರೆದೊಯ್ಯಲಾಗಿತ್ತು.  ಈ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ತುಮಕೂರು ನಗರ ಪೊಲೀಸ್ ಠಾಣೆ ಸಿಪಿಐ ದಿನೇಶ್ ಅವರು ರೌಡಿಶೀಟರ್ ಮನು ಕಾಲಿಗೆ ಗುಂಡು ಹಾರಿಸಿದ್ದಾರೆ. ಹೀಗಾಗಿ ರೌಡಿ ಶೀಟರ್ ಕಾಲಿಗೆ ಗುಂಡೇಟು ತಗುಲಿದೆ. ಘಟನೆಯಲ್ಲಿ ಪೊಲೀಸರೂ ಕೂಡ ಗಾಯಗೊಂಡಿದ್ದಾರೆ. 

ಚಿಕ್ಕಮಗಳೂರು: ಕಾಡು ಹಂದಿ ಬೇಟೆಗೆ ತೆರಳಿದ ಯುವಕರು, ಗುಂಡೇಟಿನಿಂದ ಓರ್ವ ಸಾವು..?

ಪೊಲೀಸರಿಗೆ ಶರಣಾಗುವಂತೆ ಸಿಪಿಐ ದಿನೇಶ್ ಅವರು ಎರಡು ಬಾರಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆದರೆ, ರೌಡಿ ಶೀಟರ್‌ ಮನು ಪೊಲೀಸರಿಗೆ ಶರಣಾಗದೇ ಹಲ್ಲೆ ನಡೆಸಿ ಎಸ್ಕೇಪ್ ಆಗಲು ಯತ್ನಿಸಿದ್ದನು. ಈ ವೇಳೆ ಆತ್ಮರಕ್ಷಣೆಗಾಗಿ ರೌಡಿಶೀಟರ್ ಮನು ಕಾಲಿಗೆ ಗುಂಡು ಹೊಡೆದು ಪೊಲೀಸರು ಬಂಧಿಸಿದ್ದಾರೆ. ಗಾಯಾಳು ಪೊಲೀಸ್ ಸಿಬ್ಬಂದಿ ಹಾಗೂ ರೌಡಿಶೀಟರ್ ಮನುಗೆ ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ
ಮಧುಗಿರಿ: ಕದ್ದ ಎಟಿಎಂ ಭಾರ ಇದೆ ಎಂದು ರಸ್ತೆಯಲ್ಲೇ ಬಿಟ್ಟು ಹೋದರು