Chikkamagaluru: ಗೋಮಾಂಸ ಕಡಿಯುವಾಗ ಪೊಲೀಸರಿಂದ ದಾಳಿ: ಓಡಿ ಹೋದ ಗೋಕಳ್ಳರು

Published : Apr 18, 2022, 02:01 PM IST
Chikkamagaluru: ಗೋಮಾಂಸ ಕಡಿಯುವಾಗ ಪೊಲೀಸರಿಂದ ದಾಳಿ: ಓಡಿ ಹೋದ ಗೋಕಳ್ಳರು

ಸಾರಾಂಶ

ರಾಜ್ಯದಲ್ಲಿ ಗೋಹತ್ಯಾ ನಿಷೇಧ ಕಾಯ್ದೆ ಜಾರಿಯಲ್ಲಿದೆ. ಇದರ ನಡುವೆ ಮಲೆನಾಡು, ಕರಾವಳಿ ಭಾಗದಲ್ಲಿ ನಿತ್ಯ ಗೋಕಳ್ಳತನ, ಅಕ್ರಮ ಗೋಮಾಂಸ ಮಾರಾಟ ದಂಧೆ ಎಗ್ಗಿಲ್ಲದೆ ನಡೆಯುತ್ತಿದೆ.


ವರದಿ: ಆಲ್ದೂರು ಕಿರಣ್, ಏಷ್ಯಾನೆಟ್ ಸುವರ್ಣ ನ್ಯೂಸ್, ಚಿಕ್ಕಮಗಳೂರು

ಚಿಕ್ಕಮಗಳೂರು (ಏ.18): ರಾಜ್ಯದಲ್ಲಿ (Karnataka) ಗೋಹತ್ಯಾ ನಿಷೇಧ ಕಾಯ್ದೆ ಜಾರಿಯಲ್ಲಿದೆ. ಇದರ ನಡುವೆ ಮಲೆನಾಡು, ಕರಾವಳಿ ಭಾಗದಲ್ಲಿ ನಿತ್ಯ ಗೋಕಳ್ಳತನ, ಅಕ್ರಮ ಗೋಮಾಂಸ ಮಾರಾಟ ದಂಧೆ ಎಗ್ಗಿಲ್ಲದೆ ನಡೆಯುತ್ತಿದೆ. ಮಲೆನಾಡಿನ ಭಾಗದಲ್ಲೂ ಕೂಡ ನಿರಂತರವಾಗಿ ಗೋಕಳ್ಳತನ ಅಕ್ರಮ ಗೋಮಾಂಸ ಮಾರಾಟ ನಡೆದಿದೆ ಇದಕ್ಕೆ ಪೊಲೀಸರು (Police) ಎಷ್ಟೇ ಕಡಿವಾಣ ಹಾಕಿದರೂ ಈ ಅಕ್ರಮ ದಂಧೆ  ಮಾತ್ರ ಇನ್ನೂ ನಿಂತಿಲ್ಲ. ಇದಕ್ಕೆ ಸಾಕ್ಷಿ ಎನ್ನುವಂತೆ ಮಲೆನಾಡಿನ ಜಯಪುರದಲ್ಲಿ ಪೊಲೀಸರು ಮಾರು ವೇಷದಲ್ಲಿ ಅಕ್ರಮ ಗೋಮಾಂಸದ ಅಡ್ಡೆ ಮೇಲೆ ದಾಳಿ ನಡೆಸಿರುವುದು.‌

ಗೋಮಾಂಸ ಮಾರಾಟದ ಅಡ್ಡೆ ಮೇಲೆ ಪೊಲೀಸರ ದಾಳಿ, ಆರೋಪಿಗಳು ಎಸ್ಕೇಪ್: ಗೋವುಗಳನ್ನ ಕಡಿದು ಅಕ್ರಮವಾಗಿ ಗೋ ಮಾಂಸ ಬೇರ್ಪಡಿಸುವಾಗ ದಾಳಿ ಮಾಡಿದ ಪೋಲಿಸರ ಮೇಲೆ ಹಲ್ಲೆಗೆ ಮುಂದಾಗಿ ಕತ್ತಲಲ್ಲಿ ನದಿಗೆ ಹಾರಿ ಗೋಕಳ್ಳರು ತಪ್ಪಿಸಿಕೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಹೇರೂರು ಗ್ರಾಮದಲ್ಲಿ ನಡೆದಿದೆ. ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಹೇರೂರು-ಸ್ಥಿರೂರು ಗ್ರಾಮದ ರಾಮೇಗೌಡ ಎಂಬುವರ ಕಾಫಿ ತೋಟದ ಲೈನ್‍ನಲ್ಲಿ ಅಪರಿಚಿತರು ಅಕ್ರಮವಾಗಿ ಗೋವುಗಳನ್ನ ಕಡಿದು ಮಾಂಸ ಬೇರ್ಪಡಿಸುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಬಾಳೆಹೊನ್ನೂರು ಪೋಲೀಸರು  ಮಾರುವೇಷದಲ್ಲಿ  ದಾಳಿ ನಡೆಸಿದ್ದಾರೆ.

ಕಾಫಿನಾಡಿನಲ್ಲಿ ಈಶ್ವರಪ್ಪ ವಿರುದ್ಧ ಕಾಂಗ್ರೆಸ್ ಕಹಳೆ, ಸೆಲ್ಪಿಗೆ ಯುವತಿ ಪಟ್ಟು

ಒಂದು ಕ್ವಿಂಟಾಲ್ ಗೋಮಾಂಸ ವಶಕ್ಕೆ: ಪೊಲೀಸರಿಗೆ ಸಿಕ್ಕ ಖಚಿತ ಮಾಹಿತಿ ಮೇರೆಗೆ ಮಾರುವೇಶದಲ್ಲಿ ದಾಳಿ ನಡೆಸಿದ ಸಮಯದಲ್ಲಿಸುಮಾರು ಒಂದು ಕ್ವಿಂಟಾಲ್ ಗೋಮಾಂಸವನ್ನ ವಶಪಡಿಸಿಕೊಂಡಿದ್ದಾರೆ. ಪೊಲೀಸರ ದಾಳಿ ವೇಳೆ ಎಸ್ಟೇಟ್‍ನ ಕೂಲಿ ಕಾರ್ಮಿಕರ ಲೈನ್‍ನ ಮನೆಯೊಂದರಲ್ಲಿ ಐದು ಜನ ಹಸುವನ್ನ ಕಡಿದು ಮಾಂಸವನ್ನು ಈ ವೇಳೆಯಲ್ಲಿ ಪೊಲೀಸರನ್ನ ಕಂಡ ಕೂಡಲೇ ಮಾಂಸ ಕಡಿಯುತ್ತಿದ್ದವರು ಸ್ಥಳದಿಂದ ಪರಾರಿಯಾಗಿದ್ದಾರೆ. ಪರಾರಿಯಾಗುವ ವೇಳೆ ಪೊಲೀಸರ ಜೊತೆಗೆ ಮಾತಿನ ಚಕಮಕಿ ನಡೆಸಿ ಪೊಲೀಸರ ಮೇಲೆ ದಾಳಿ ಮುಂದಾಗಿದ್ದಾರೆ.

ಕಾಳುಮೆಣಸಿಗೆ ಫುಲ್ ಡಿಮ್ಯಾಂಡ್ , ಕಳ್ಳರ ಕಾಟ ವಿಪರೀತ!

ಅದರಲ್ಲಿ ಕೆಲವರು  ಕತ್ತಲಲ್ಲಿ ನದಿಗೆ ಹಾರಿ ತಪ್ಪಿಸಿಕೊಂಡಿದ್ದಾರೆ. ಸ್ಥಳದಲ್ಲಿ ಒಂದು ಕ್ವಿಂಟಾಲ್ ಗೋ ಮಾಂಸ, ದನದ ಕತ್ತರಿಸಿದ ಒಂದು ಕಾಲು ಪತ್ತೆಯಾಗಿದೆ. ಆರೋಪಿಗಳು ಮಾಂಸ ಮಾರಾಟದ ಉದ್ದೇಶದಿಂದ ದನಗಳನ್ನು ಹಲವೆಡೆಗಳಿಂದ ಕಳವು ಮಾಡಿಕೊಂಡು ಬಂದು ಮಾಂಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಪರಾರಿಯಾದ ಆರೋಪಿಗಳ ಪತ್ತೆಗೆ ಪೊಲೀಸರು ಶೋಧಕಾರ್ಯ ನಡೆಸುತ್ತಿದ್ದಾರೆ. ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿ ಪರಾರಿಯಾದ ಗೋಕಳ್ಳರು ಕಾಫಿ ತೋಟಕ್ಕೆ ಕೆಲಸಕ್ಕೆ ಬಂದಿದ್ದ ಅಕ್ರಮ ಬಾಂಗ್ಲಾ ನಿವಾಸಿಗಳು ಎನ್ನುವ ಆರೋಪ ಕೇಳಿಬಂದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬಾಲಿವುಡ್ ನಿರ್ದೇಶಕ ವಿಕ್ರಂ ಭಟ್, ಪತ್ನಿ ಶ್ವೇತಾಂಬರಿ ಭಟ್ ಬಂಧನ; ಅಂತಿಂಥ ವಂಚನೆ ಕೇಸಲ್ಲ ಇದು ಅಂತೀರಾ?!
ಕೊಪ್ಪಳ: ಹಸೆಮಣೆ ಏರಬೇಕಿದ್ದ ಜೋಡಿ ಮಸಣಕ್ಕೆ - ಪ್ರಿ-ವೆಡ್ಡಿಂಗ್ ಶೂಟಿಂಗ್ ಮುಗಿಸಿ ವಾಪಸಾಗುವಾಗ ಭೀಕರ ದುರಂತ!