ಜೂಜಾಡುವಾಗ ಸಿಕ್ಕಿಬಿದ್ದ ಪೊಲೀಸರು..!

Kannadaprabha News   | Asianet News
Published : Oct 28, 2020, 08:27 AM IST
ಜೂಜಾಡುವಾಗ ಸಿಕ್ಕಿಬಿದ್ದ ಪೊಲೀಸರು..!

ಸಾರಾಂಶ

ಜೂಜು ಅಡ್ಡೆ ಮೇಲೆ ದಾಳಿ| ಸಿಕ್ಕಿಬಿದ್ದ ಏಳು ಮಂದಿ ಕಾನ್‌ಸ್ಟೇಬಲ್‌ಗಳು| ಆರೋಪಿತರ ವಿರುದ್ಧ ಕಾನೂನು ಕ್ರಮ| ಜೂಜು ಅಡ್ಡೆಗಳ ಮೇಲೆ ನಿಯಂತ್ರಿಸಬೇಕಾದ ಪೊಲೀಸರೇ ಈಗ ಜೂಜಾಟ ಪ್ರಕರಣದಲ್ಲಿ ಆರೋಪಿಗಳಾಗಿದ್ದಾರೆ|   

ಬೆಂಗಳೂರು(ಅ.28):  ಕೆಲ ದಿನಗಳ ಹಿಂದೆ ಜೆ.ಪಿ.ನಗರ ಸಮೀಪ ಹೋಟೆಲ್‌ವೊಂದರ ಜೂಜು ಅಡ್ಡೆ ಮೇಲೆ ಪುಟ್ಟೇನಹಳ್ಳಿ ಪೊಲೀಸರು ದಾಳಿ ನಡೆಸಿದಾಗ ಅದೇ ಠಾಣೆಯ ಏಳು ಮಂದಿ ಕಾನ್‌ಸ್ಟೇಬಲ್‌ಗಳು ಸಿಕ್ಕಿಬಿದ್ದಿದ್ದಾರೆ.

ಈ ಸಂಬಂಧ ‘ಕನ್ನಡಪ್ರಭ’ ಜತೆ ಮಾತನಾಡಿದ ದಕ್ಷಿಣ ವಿಭಾಗದ ಡಿಸಿಪಿ ಹರೀಶ್‌ ಪಾಂಡೆ ಅವರು, ಅ.19 ರಂದು ಪುಟ್ಟೇನಹಳ್ಳಿಯ 27ನೇ ಅಡ್ಡರಸ್ತೆಯ ನಂದಿನಿ ಹೋಟೆಲ್‌ನಲ್ಲಿ ಜೂಜಾಡುತ್ತಿರುವ ಬಗ್ಗೆ ಮಾಹಿತಿ ಲಭಿಸಿತು. ಅದರನ್ವಯ ಪೊಲೀಸರು ದಾಳಿ ನಡೆಸಿದ್ದರು. ಆ ವೇಳೆ ಜೂಜಾಡುತ್ತಿದ್ದ ಪುಟ್ಟೇನಹಳ್ಳಿ ಠಾಣೆ 7 ಮಂದಿ ಕಾನ್‌ಸ್ಟೇಬಲ್‌ಗಳು ಸಿಕ್ಕಿಬಿದ್ದಿದ್ದಾರೆ ಎಂದರು.

ಈ ಘಟನೆ ಕುರಿತು ಸುಬ್ರಹ್ಮಣ್ಯಪುರ ಉಪ ವಿಭಾಗದ ಎಸಿಪಿ ವರದಿ ಸಲ್ಲಿಸಿದ್ದಾರೆ. ಈ ವರದಿ ಪರಿಶೀಲಿಸಿದ ಆರೋಪಿತರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುತ್ತದೆ. ಜೂಜು ಅಡ್ಡೆಗಳ ಮೇಲೆ ನಿಯಂತ್ರಿಸಬೇಕಾದ ಪೊಲೀಸರೇ ಈಗ ಜೂಜಾಟ ಪ್ರಕರಣದಲ್ಲಿ ಆರೋಪಿಗಳಾಗಿದ್ದಾರೆ ಎಂದು ಡಿಸಿಪಿ ಬೇಸರ ವ್ಯಕ್ತಪಡಿಸಿದರು.

ಆನ್‌ಲೈನ್ ರಮ್ಮಿ, ಪೋಕರ್ ಬ್ಯಾನ್; ಸರ್ಕಾರದ ದಿಟ್ಟ ನಿರ್ಧಾರ

ಕೆಲ ದಿನಗಳ ಹಿಂದೆ ಅಂತಾರಾಜ್ಯ ಜೂಜು ಅಡ್ಡೆಗೆ ಸಹಕಾರ ನೀಡಿದ ಆರೋಪದ ಮೇರೆಗೆ ಮಹದೇವಪುರ ಠಾಣೆ ಇನ್ಸ್‌ಪೆಕ್ಟರ್‌ ಹಾಗೂ ಹೆಡ್‌ ಕಾನ್‌ಸ್ಟೇಬಲ್‌ ಅವರನ್ನು ಆಯುಕ್ತ ಕಮಲ್‌ ಪಂತ್‌ ಅಮಾನತುಗೊಳಿಸಿದ್ದರು. ಈಗ ಜೂಜು ಅಡ್ಡೆಯಲ್ಲಿ ಪೊಲೀಸರು ಪತ್ತೆಯಾಗಿರುವುದು ಇಲಾಖೆಗೆ ತೀವ್ರ ಮುಜುಗರ ಉಂಟು ಮಾಡಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕೋಲಾರ: ಅಪ್ಪ- ಅಮ್ಮನ ವಿಚ್ಚೇಧನಕ್ಕೆ ಮನನೊಂದು 26 ವರ್ಷದ ಪುತ್ರ ಆತ್ಮ*ಹತ್ಯೆ!
ಮದುವೆ ಮಾತುಕತೆಗೆಂದು ಕರೆಸಿ ಎಂಜಿನಿಯರಿಂಗ್ ವಿದ್ಯಾರ್ಥಿಯ ಮಸಣಕ್ಕೆ ಅಟ್ಟಿದ ಗರ್ಲ್‌ಫ್ರೆಂಡ್ ಮನೆಯವರು