
ಬೆಳಗಾವಿ(ಅ.16): ಲಾಡ್ಜ್ನಲ್ಲಿ ಹೈಟೆಕ್ ವೇಶ್ಯಾವಾಟಿಕೆ ನಡೆಸುತ್ತಿದ್ದ ಅಡ್ಡೆ ಮೇಲೆ ಪೊಲೀಸರ ದಾಳಿ ಮಾಡಿದ ಘಟನೆಬೆಳಗಾವಿ ಜಿಲ್ಲೆಯ ಖಾನಾಪುರ ಪಟ್ಟಣದಲ್ಲಿ ಇಂದು(ಬುಧವಾರ) ನಡೆದಿದೆ. ದಾಳಿ ವೇಳೆ 11 ಗ್ರಾಹಕರನ್ನು ವಶಕ್ಕೆ ಪಡೆದು ಐವರು ಮಹಿಳೆಯನ್ನು ಪೊಲೀಸರು ರಕ್ಷಿಸಿದ್ದಾರೆ.
ಖಾನಾಪುರ ಪಟ್ಟಣದ ಆಮಂತ್ರಣ ಲಾಡ್ಜ್ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ರಕ್ಷಣೆಗೆ ಒಳಗಾದ ಮಹಿಳೆಯರನ್ನು ಬೆಳಗಾವಿ ಸಾಂತ್ವಾನ ಕೇಂದ್ರಕ್ಕೆ ರವಾನೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಲಾಡ್ಜ್ ಮಾಲೀಕ ವಿನಾಯಕ ಮಾಂಜರೇಕರ ವಿರುದ್ಧ ದೂರು ದಾಖಲಾಗಿದೆ. ಖಾನಾಪುರ ಠಾಣೆಯ ಪಿಐ ಮಂಜುನಾಥ ನಾಯ್ಕ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಖಚಿತ ಮಾಹಿತಿ ಮೇರೆಗೆ ಲಾಡ್ಜ್ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ