ಹೊಸದುರ್ಗ: ಸರ್ಕಾರಿ ಭೂಮಿಯಲ್ಲೇ ಗಾಂಜಾ ಬೆಳೆದ ಭೂಪ..!

Kannadaprabha News   | Asianet News
Published : Aug 10, 2020, 03:46 PM IST
ಹೊಸದುರ್ಗ: ಸರ್ಕಾರಿ ಭೂಮಿಯಲ್ಲೇ ಗಾಂಜಾ ಬೆಳೆದ ಭೂಪ..!

ಸಾರಾಂಶ

ಶೇಂಗಾ ಹಾಗೂ ಜೋಳದ ಬೆಳೆಯ ನಡುವೆ ಗಾಂಜಾ ಬೆಳೆ ಬೆಳೆದಿದ್ದ ಆರೋಪಿ| ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಸಿದ್ದಪ್ಪನಹಟ್ಟಿಯಲ್ಲಿ 20 ಕೆಜಿ ಗಾಂಜಾ ವಶ| ತಲೆಮರೆಸಿಕೊಂಡ ಅರೋಪಿ| 

ಹೊಸದುರ್ಗ(ಆ.10): ಅಕ್ರಮವಾಗಿ ಬೆಳೆದಿದ್ದ ಸುಮಾರು 20 ಕೆ.ಜಿ.ಗಾಂಜಾ ಬೆಳೆಯನ್ನು ತಾಲೂಕಿನ ಸಿದ್ದಪ್ಪನಹಟ್ಟಿಯಲ್ಲಿ ಭಾನುವಾರ ಹೊಸದುರ್ಗ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸಿದ್ದಪ್ಪನಹಟ್ಟಿ ಗ್ರಾಮದ ಅಂಜನಪ್ಪ ಎಂಬಾತ ಸರ್ಕಾರಿ ಭೂಮಿಯಲ್ಲಿ ಕೃಷಿ ಮಾಡಿಕೊಂಡಿದ್ದು, ಶೇಂಗಾ ಹಾಗೂ ಜೋಳದ ಬೆಳೆಯ ನಡುವೆ ಗಾಂಜಾ ಬೆಳೆದಿದ್ದ ಎನ್ನಲಾಗಿದೆ. ಸಾರ್ವಜನಿಕರಿಂದ ಬಂದ ಖಚಿತ ಮಾಹಿತಿ ಆಧರಿಸಿ ಜಮೀನಿನ ಮೇಲೆ ದಾಳಿ ನಡೆಸಿದ ಪೊಲೀಸರು 20 ಕೆ.ಜಿ.ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. 

ಚಿಕ್ಕಮಗಳೂರು: ಪೊಲೀಸರ ದಾಳಿ, 12.50 ಲಕ್ಷ ಮೌಲ್ಯದ 50 ಕೆ.ಜಿ ಗಾಂಜಾ ಜಪ್ತಿ

ಆರೋಪಿ ಅಂಜನಪ್ಪ ತಲೆಮರೆಸಿಕೊಂಡಿದ್ದು ಆತನ ಪತ್ತೆಗೆ ಬಲೆ ಬೀಸಿದ್ದಾರೆ. ಸ್ಥಳಕ್ಕೆ ತಹಸೀಲ್ದಾರ್‌ ತಿಪ್ಪೆಸ್ವಾಮಿ, ಪಿಎಸ್‌ಐ ಶಿವಕುಮಾರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಹೊಸದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬಾಲಿವುಡ್ ನಿರ್ದೇಶಕ ವಿಕ್ರಂ ಭಟ್, ಪತ್ನಿ ಶ್ವೇತಾಂಬರಿ ಭಟ್ ಬಂಧನ; ಅಂತಿಂಥ ವಂಚನೆ ಕೇಸಲ್ಲ ಇದು ಅಂತೀರಾ?!
ಕೊಪ್ಪಳ: ಹಸೆಮಣೆ ಏರಬೇಕಿದ್ದ ಜೋಡಿ ಮಸಣಕ್ಕೆ - ಪ್ರಿ-ವೆಡ್ಡಿಂಗ್ ಶೂಟಿಂಗ್ ಮುಗಿಸಿ ವಾಪಸಾಗುವಾಗ ಭೀಕರ ದುರಂತ!