ಬಳ್ಳಾರಿ: ಮಹಿಳೆಗೆ ಪೊಲೀಸರಿಂದಲೇ ಲೈಂಗಿಕ ದೌರ್ಜನ್ಯ, ಓರ್ವ ಅರಸ್ಟ್‌, ಮತ್ತೋರ್ವ ಪರಾರಿ

Published : Dec 13, 2024, 08:06 PM IST
ಬಳ್ಳಾರಿ: ಮಹಿಳೆಗೆ ಪೊಲೀಸರಿಂದಲೇ ಲೈಂಗಿಕ ದೌರ್ಜನ್ಯ, ಓರ್ವ ಅರಸ್ಟ್‌, ಮತ್ತೋರ್ವ ಪರಾರಿ

ಸಾರಾಂಶ

ಸಂಸಾರದಲ್ಲಿ ಬಿರುಕು ಮೂಡಿ, ಪತಿಯ ವಿರುದ್ಧ ದೂರು ನೀಡಲು ಬಂದ ನೊಂದ ಮಹಿಳೆಗೆ ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಲ್ಲಿ ಇಬ್ಬರು ಪೊಲೀಸ್ ಕಾನ್ ಸ್ಟೇಬಲ್‌ಗಳ ವಿರುದ್ಧ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ಬಳ್ಳಾರಿ(ಡಿ.13):  ಠಾಣೆಗೆ ದೂರು ನೀಡಲು ಬಂದ ಮಹಿಳೆಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಕಾನ್‌ಸ್ಟೇಬಲ್ ಒಬ್ಬನನ್ನು ಬುಧವಾರ ಬಂಧಿಸಲಾಗಿದ್ದು, ಮತ್ತೋರ್ವ ಪರಾರಿಯಾಗಿದ್ದಾನೆ. ನಗರದ ಸಂಚಾರ ಠಾಣೆಯ ಕಾನ್ ಸ್ಟೇಬಲ್ ಆಜಾದ್ ಬಂಧಿತ ಆರೋಪಿ. ನಗರದ ಕೌಲ್ ಬಜಾರ್ ಠಾಣೆಯ ಹೆಡ್ ಕಾನ್‌ಸ್ಟೇಬಲ್ ಸೈಯದ್ ಇಮ್ರಾನ್ ಪರಾರಿಯಾಗಿದ್ದಾನೆ. ಈತನ ಬಂಧನಕ್ಕಾಗಿ ಬಲೆ ಬೀಸಲಾಗಿದೆ. 

ಸಂಸಾರದಲ್ಲಿ ಬಿರುಕು ಮೂಡಿ, ಪತಿಯ ವಿರುದ್ಧ ದೂರು ನೀಡಲು ಬಂದ ನೊಂದ ಮಹಿಳೆಗೆ ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಲ್ಲಿ ಇಬ್ಬರು ಪೊಲೀಸ್ ಕಾನ್ ಸ್ಟೇಬಲ್‌ಗಳ ವಿರುದ್ಧ ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ballari: ಕನಕ ದುರ್ಗಮ್ಮನಿಗೆ ಕಂಡ ವಿಜಯಲಕ್ಷ್ಮೀಯ ಕಣ್ಣೀರು, ಫಲಿಸಿದ ಪ್ರಾರ್ಥನೆ

ನಿರಂತರ ಲೈಂಗಿಕ ದೌರ್ಜನ್ಯ: 

ನಗರದ ಬಂಡಿಹಟ್ಟಿ ವೃತ್ತದ ಪದ್ಮಶ್ರೀ ಕಾಲನಿಯ 35 ವರ್ಷದ ಮಹಿಳೆಯೊಬ್ಬರು ತನ್ನ ಪತಿ ವಿರುದ್ಧ ಕೌಲ್ ಬಜಾರ್‌ ಠಾಣೆಯಲ್ಲಿ 2023ರ ಎಪ್ರಿಲ್ 19ರಂದು ದೂರು ನೀಡಲು ತೆರಳಿದ್ದರು. ಈ ವೇಳೆ ಠಾಣೆಯಲ್ಲಿದ್ದ ಹೆಡ್ ಕಾನ್‌ಸ್ಟೇಬಲ್ ಸೈಯದ್ ಇಮ್ರಾನ್, ಈ ಪ್ರಕರಣವು ಮಹಿಳಾ ಠಾಣಾ ವ್ಯಾಪ್ತಿಗೆ ಬರಲಿದ್ದು, ಸಹಾಯ ಮಾಡುವುದಾಗಿ ನೊಂದ ಮಹಿಳೆಯ ಮೊಬೈಲ್ ನಂಬ‌ರ್ ಪಡೆದಿದ್ದ. ನಂತರ ಎಪ್ರಿಲ್ 20ರಂದು ಮಹಿಳೆಗೆ ತನ್ನ ಪತಿ ಪುನಃ ಮನೆ ಖಾಲಿ ಮಾಡುವಂತೆ ಗಲಾಟೆ ಮಾಡಿದಾಗ ನೊಂದ ಮಹಿಳೆಯು ಸೈಯದ್‌ ಇಮ್ರಾನ್‌ಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. 

ಈ ವೇಳೆ ಇಮ್ರಾನ್ ₹15 ಸಾವಿರ ಧನಸಹಾಯ ಮಾಡಿದ್ದಾರೆ. ಬಳಿಕ ಆ ಹಣದಲ್ಲಿ ಮಹಿಳೆ ಕೌಲ್‌ ಬಜಾರ್‌ನಲ್ಲಿ ಮನೆಯೊಂದನ್ನು ಬಾಡಿಗೆ ಪಡೆದು ವಾಸವಾಗಿದ್ದಳು. ಈ ವೇಳೆ ಆರೋಪಿ ಇಮ್ರಾನ್‌ ಮದುವೆ ಮಾಡಿಕೊಳ್ಳುತ್ತೇನೆಂದು ನಂಬಿಸಿ ಆಕೆಯನ್ನು ಐದು ತಿಂಗಳ ಕಾಲ ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡಿದ್ದಾನೆ. 

ಪಂಚಮಸಾಲಿ ಹೋರಾಟ ಘರ್ಷಣೆಗೆ ಸಿಎಂ ಸಿದ್ದರಾಮಯ್ಯ ಕಾರಣ: ಜನಾರ್ದನ ರೆಡ್ಡಿ

ನಂತರ ಬಳ್ಳಾರಿ ಸಂಚಾರ ಠಾಣೆಯ ಸಿಬ್ಬಂದಿ ಆಜಾದ್ ನೊಂದ ಮಹಿಳೆಗೆ ಎರಡು ತಿಂಗಳೊಳಗೆ ಮದುವೆ ಮಾಡಿಕೊಳ್ಳುತ್ತೇನೆಂದು ನಂಬಿಸಿ ಆತನೂ ಲೈಂಗಿಕವಾಗಿ ಬಳಸಿಕೊಂಡಿದ್ದಾರೆ. ಈ ಇಬ್ಬರು ಮದುವೆ ಮಾಡಿಕೊಳ್ಳದೇ ನಂಬಿಕೆ ದ್ರೋಹ ಎಸಗಿದ್ದಾರೆಂದು ಮಹಿಳೆ ನಗರದ ಮಹಿಳಾ ಠಾಣೆಗೆ ಬುಧವಾರ ದೂರು ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಓರ್ವನನ್ನು ಬಂಧಿಸಲಾಗಿದೆ. ಮತ್ತೋರ್ವನ ಬಂಧನಕ್ಕಾಗಿ ಬಲೆ ಬೀಸಲಾಗಿದೆ. 

ಇಬ್ಬರ ಅಮಾನತು 

ಮಹಿಳೆಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪ ಕೇಳಿಬಂದ ಬೆನ್ನಲ್ಲೇ ಆ ಇಬ್ಬರು ಪೊಲೀಸರನ್ನು ಅಮಾನತು ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ಡಾ. ಶೋಭಾರಾಣಿ ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

The Devil Movie: ಕಾಲವೇ ಸತ್ಯ ಹೇಳುತ್ತದೆ. ಸಮಯವೇ ಉತ್ತರಿಸುತ್ತದೆ-ಜೈಲಿನಿಂದಲೇ Darshan ಮೆಸೇಜ್
ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು