ಬೆಂಗ್ಳೂರಲ್ಲಿ ಪ್ರಭಾವಿ ರಾಜಕಾರಣಿ ಪುತ್ರರ ರೇವ್ ಪಾರ್ಟಿ,ಯುವತಿಯರೊಂದಿಗೆ ಮೋಜು ಮಸ್ತಿ

By Ramesh BFirst Published Sep 16, 2022, 6:40 PM IST
Highlights

ಬೆಂಗಳೂರಿನ ಹೊರವಲಯದ ರೆಸಾರ್ಟ್‌ನಲ್ಲಿ ನಶೆ ಲೋಕ ರೇವ್ ಪಾರ್ಟಿ ನಡೆದಿದ್ದು, ಕಿಕ್ಕೇರಿಸೋ ರೇವ್ ಪಾರ್ಟಿಯಲ್ಲಿ ಪ್ರಭಾವಿ ರಾಜಕಾರಣಿಗಳು, ಉದ್ಯಮಿಗಳ ಪುತ್ರರು ಭಾಗಿಯಾಗಿದ್ರು ಎನ್ನಲಾಗಿದೆ. ಆದ್ರೆ, ಅವರನ್ನ ರಕ್ಷಿಸಲು ಪೊಲೀಸರು ಮುಂದಾಗಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.

ಬೆಂಗಳೂರು, (ಸೆಪ್ಟೆಂಬರ್.16): ಬೆಂಗಳೂರು ಹೊರವಲಯದ ಸಾದಹಳ್ಳಿ ಜೆಡಿ ಗಾರ್ಡನ್ ರೆಸಾರ್ಟ್ ನಲ್ಲಿ ಮತ್ತೇರಿಸೋ ರೇವ್ ಪಾರ್ಟಿ ಮೇಲೆ ಪೊಲೀಸರು ದಾಳಿ ನಡೆದಿದ್ದು, ಈ ನಶೆ ಲೋಕದ ಪಾರ್ಟಿಯಲ್ಲಿ ಬಳ್ಳಾರಿ ಗಣಿ ಉದ್ಯಮಿ ಪುತ್ರ ಸೇರಿದಂತೆ ಪ್ರಭಾವಿ ರಾಜಕಾರಣಿಗಳ ಪುತ್ರರು ಭಾಗಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಸೆಪ್ಟೆಂಬರ್ 6ರಂದು ಕೆಐಎಎಲ್ ಏರ್​ ಪೋರ್ಟ್ ಠಾಣಾ ವ್ಯಾಪ್ತಿಯಲ್ಲಿ ಜೆಡಿ ಗಾರ್ಡನ್ ರೆಸಾರ್ಟ್ ನಲ್ಲಿ ಪಾರ್ಟಿ ಆಯೋಜಿಸಿದ್ದರ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಎಫ್‌ ಐ ಆರ್‌ ದಾಖಲಾಗುತ್ತಿದ್ದಂತೆ ಪ್ರಕರಣವನ್ನು ಸಿಸಿಬಿಗೆ ಹಸ್ತಾಂತರ ಮಾಡಲಾಗಿದೆ. ಆದ್ರೆ, ಸಿಸಿಬಿ ಪೊಲೀಸರು ಪ್ರಭಾವಿಗಳ ಪುತ್ರರನ್ನು ರಕ್ಷಿಸಲು ಮುಂದಾಗಿದ್ದು, ಪ್ರಕರಣ ಮುಚ್ಚಿಹಾಕಲು ಪ್ಲಾನ್‌ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

Bengaluru ;ಬರೋಬ್ಬರಿ 928 ಕದ್ದ ಮೊಬೈಲ್ ಫೋನ್‌ಗ ಜಪ್ತಿ, 105 ಆರೋಪಿಗಳ ಬಂಧನ!

ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಲೀಕ ಶ್ರೀನಿವಾಸ್‌ ಸೇರಿ 9 ಮಂದಿ ಜನರ ವಿರುದ್ಧ ಎಫ್‌ ಐ ಆರ್‌ ದಾಖಲಾಗಿದೆ. ಪ್ರಭಾವಿ ರಾಜಕಾರಣಿ ಪುತ್ರರ ಹೆಸರು ನಾಪತ್ತೆಯಾಗಿದೆ.

ಹೊರ ದೇಶದ-ಹೊರ ರಾಜ್ಯದ ಯುವತಿಯರ ಕರೆ ತಂದು ವೇಶ್ಯಾವಾಟಿಕೆ ನಡೆದಿತ್ತು. ಆ ವೇಳೆ ಯುವತಿಯರು ವೀಸಾ-ಪಾಸ್ ಪೋರ್ಟ್ ಹಾಜರುಪಡಿಸಲು ನಿರಾಕರಿಸಿದ್ದಾರೆ. ಹಾಗಾಗಿ ಮಾನವ ಕಳ್ಳಸಾಕಣೆ ಕಾಯ್ದೆ ಅಡಿ ಎಫ್ ಐಆರ್ ದಾಖಲಾಗಿತ್ತು. ಜೆಡಿ ಗಾರ್ಡನ್ ಮಾಲೀಕ ಶ್ರೀನಿವಾಸ್ ಸುಬ್ರಮಣ್ಯ ಸೇರಿದಂತೆ 9 ಆರೋಪಿಗಳ ವಿರುದ್ದ ಮಾತ್ರ ಕೇಸ್ ದಾಖಲು ಮಾಡಿಕೊಳ್ಳಲಾಗಿದೆ.

40ಕ್ಕೂ ಹೆಚ್ಚು ಜನರ ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ದರು. ಆದ್ರೆ, ಕೇವಲ 9 ಜನರ ವಿರುದ್ದ ಕೇಸ್ ದಾಖಲಾಗಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಪ್ರಮುಖವಾಗಿ ಬಳ್ಳಾರಿ ಮೂಲದ ಗಣಿ ಉದ್ಯಮಿ ಪುತ್ರ ನಿತಿನ್ ಬಚಾವ್ ಮಾಡಲು ಯತ್ನಿಸಲಾಗುತ್ತಿದೆ ಎಂದು ತಿಳಿದುಬಂದಿದೆ.

click me!