ತಂಗಿ ಮನೆಯಲ್ಲಿ ಕರೆಂಟ್ ‌ಇಲ್ಲ, ಅಣ್ಣ ಸುಸೈಡ್, ಗರ್ಲ್‌ಫ್ರೆಂಡ್ ನಾಪತ್ತೆ! ಯಾವ ಥ್ರಿಲ್ಲರ್‌ಗೂ ಕಡಿಮೆ ಇಲ್ಲ

By Suvarna NewsFirst Published Nov 23, 2020, 3:40 PM IST
Highlights

ಯಾವ ಬಾಲಿವುಡ್ ಥ್ರಿಲ್ಲರ್  ಅಪರಾಧ ಸ್ಟೋರಿಗೂ ಕಡಿಮೆ ಇಲ್ಲ/  ತಂಗಿ ಮನೆಯಲ್ಲಿ ಕರೆಂಟ್ ಇಲ್ಲ ಎಂದು ಗೆಳತಿಯ ಜತೆ ಫ್ಲಾಟ್ ಗೆ ಬಂದು ಆತ್ಮಹತ್ಯೆ ಮಾಡಿಕೊಂಡ/  ಇದ್ದಕ್ಕಿದ್ದಂತೆ ಗೆಳತಿ ನಾಪತ್ತೆ/ ಪೊಲೀಸರಿಗೆ ದೊಡ್ಡ ತಲೆನೋವಾದ ಪ್ರಕರಣ

ಗಾಜಿಯಾಬಾದ್(ನ. 23) ಕನಸು ಕಟ್ಟಿಕೊಂಡು ಮಹಾನಗರಕ್ಕೆ ಬಂದ ಆತ ಗೆಳತಿಯೊಂದಿಗೆ ವಾಸವಿರಲು ಯೋಚನೆ ಮಾಡಿದ್ದ. ಆದರೆ ಇದ್ದಕ್ಕಿದ್ದಂತೆ ಆತ್ಮಹತ್ಯೆ ಮಾಡಿಕೊಂಡ. ಗೆಳತಿ ಈಗ ನಾಪತ್ತೆಯಾಗಿದ್ದಾಳೆ. ಪ್ರಕರಣ ಪೊಲೀಸರಿಗೆ ದೊಡ್ಡ ತಲೆನೋವಾಗಿದೆ.

ಡೆಹ್ರಾಡೂನ್‌ನ ಅಜಯ್ ದಾಂಡಿಯಾಲ್ (24) ದೆಹಲಿ ಬಳಿಯ ಗಾಜಿಯಾಬಾದ್‌ನ ಇಂದಿರಾಪುರಂನಲ್ಲಿರುವ ತನ್ನ ಸಹೋದರಿಯ ಫ್ಲ್ಯಾಟ್‌ಗೆ ತೆರಳಿದ್ದ. ಕಳೆದ ಎರಡೂವರೆ ತಿಂಗಳಿನಿಂದ ಖಾಲಿಯಾಗಿದ್ದ ಫ್ಲಾಟ್ ನಲ್ಲಿ ವಿದ್ಯುತ್ ಸಂಪರ್ಕ ಕಟ್ ಆಗಿತ್ತು. ಈ ಕಾರಣಕ್ಕೆ ಅಜಯ್ ಮತ್ತು ಗೆಳತಿ ಅಲ್ಲಿಂದ ಗುರುಗ್ರಾಮಕ್ಕೆ   ವಾಪಸ್ ಬರುವ ತೀರ್ಮಾನ ಮಾಡಿದ್ದರು.

ವೋಟರ್ ಐಡಿ ಹೇಳಿದ ಮಂಡ್ಯದ ಮರ್ಡರ್ ಸ್ಟೋರಿ

ಕರೆಂಟ್ ಬಿಲ್ ಕಟ್ಟದ ಕಾರಣಕ್ಕೆ ಅಣ್ಣ-ತಂಗಿಯ ನಡುವೆ ವಾಗ್ವಾದ ಆಗಿತ್ತು. ಇತ್ತ ಗುರುಗ್ರಾಮಕ್ಕೆ ಬಂದ ಅಜಯ್ ನೇಣು  ಹಾಕಿಕೊಂಡಿದ್ದಾನೆ. ಬೆಳಗ್ಗೆ ಅಜಯ್ ನೇತಾಡುತ್ತಿದ್ದುದ್ದನ್ನು ಆತನ ಗೆಳತಿ ನೋಡಿದ್ದಾಳೆ.

ಅವನನ್ನು ಕೆಳಕ್ಕೆ ಇಳಿಸಿ ನೋಡಿದಾಗ  ಅವನು ಇನ್ನೂ ಉಸಿರಾಡುತ್ತಿದ್ದ. ಗೆಳತಿ ಅಜಯ್ ನನ್ನು ಆಸ್ಪತ್ರೆಗೆ ಸೇರಿಸಲು ಮುಂದಾಗಿದ್ದಾಳೆ. ಕ್ಯಾಬ್ ನಲ್ಲಿ ಕರೆದುಕೊಂಡು ಹೋಗುವ ವೇಳೆ ಅಜಯ್ ಸಹೋದರಿ ಅರ್ಚನಾಗೂ ಕರೆ ಮಾಡಿ ವಿಷಯ ತಿಳಿಸಿದ್ದಾಳೆ.  ಅವಳು ನಾನು  ಕೂಡ ಬರುತ್ತಿದ್ದೇನೆ ಎಂದಿದ್ದಾಳೆ. ಆದರೆ ಅಜಯ್ ದಾರಿಯಲ್ಲಿಯೇ ಸಾವನ್ನಪ್ಪಿದ್ದಾನೆ.

ಏನೂ ಮಾಡಲು ತೋಚದ ಗೆಳತಿ ವಾಪಸ್ ಫ್ಲಾಟ್ ಗೆ  ಬಂದಿದ್ದಾಳೆ. ಅಜಯ್ ಕುಡಿದಿದ್ದಾನೆ ಸಹಾಯ ಮಾಡಿ ಎಂದು ಸೆಕ್ಯೂರಿಟಿ ಗಾರ್ಡ್ ಬಳಿ ನೆರವು ಪಡೆದುಕೊಂಡು ಶವವನ್ನು ಫ್ಲಾಟ್ ಗೆ ತಂದು ಹಾಕಿ ಅಲ್ಲಿಂದ ಎಸ್ಕೇಪ್ ಆಗಿದ್ದಾಳೆ.

ಅನುಮಾನಗೊಂಡ ಸೆಕ್ಯೂರಿಟಿಯವರು ಇವರು ವಾಸವಿದ್ದ ಫ್ಲಾಟ್ ಬಾಗಿಲು ತೆರೆದು ನೋಡಿದಾಗ ಅಜಯ್ ಶವ ಪತ್ತೆಯಾಗಿದೆ. ಯಾವ ಕಾರಣಕ್ಕೆ ಗರ್ಲ್ ಫ್ರೆಂಡ್  ಹೀಗೆ  ಮಾಡಿದಳು? ನಿಜಕ್ಕೂ ಅಂದು ಏನು ನಡೆಯಿತು ಎಂದು ಪೊಲೀಸರು ತಲೆ ಕೆಡಿಸಿಕೊಂಡು ಕೂತಿದ್ದಾರೆ. 

click me!