ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಅರ್ಚಕ ಚಿಕಿತ್ಸೆ ಫಲಿಸದೆ ಸಾವು

Kannadaprabha News, Ravi Janekal |   | Kannada Prabha
Published : Oct 27, 2025, 08:02 AM IST
Priest death in road accident Bengaluru Jalasuru highway kr pete

ಸಾರಾಂಶ

ಕೆ.ಆರ್.ಪೇಟೆ ತಾಲೂಕಿನ ಹರಿಹರಪುರದಲ್ಲಿ ಬೆಂಗಳೂರು-ಜಲಸೂರು ಹೆದ್ದಾರಿಯಲ್ಲಿ ನಡೆದ ಬೈಕ್ ಅಪಘಾತದಲ್ಲಿ ಅರ್ಚಕರೊಬ್ಬರು ಮೃತಪಟ್ಟಿದ್ದಾರೆ. ಅವೈಜ್ಞಾನಿಕ ರಸ್ತೆ ನಿರ್ಮಾಣವೇ ಅಪಘಾತಕ್ಕೆ ಕಾರಣವೆಂದು ಆರೋಪಿಸಿರುವ ಗ್ರಾಮಸ್ಥರು, ಸರ್ವೀಸ್ ರಸ್ತೆ ಮತ್ತು ವೇಗ ನಿಯಂತ್ರಕಗಳ ಅಳವಡಿಕೆಗೆ ಆಗ್ರಹಿಸಿದ್ದಾರೆ.

ಕೆ.ಆರ್.ಪೇಟೆ (ಅ.27): ಕಳೆದ ಕೆಲ ದಿನಗಳ ಹಿಂದೆ ಬೆಂಗಳೂರು- ಜಲಸೂರು ರಾಜ್ಯ ಹೆದ್ದಾರಿಯ ತಾಲೂಕಿನ ಹರಿಹರಪುರ ಗ್ರಾಮದ ವ್ಯಾಪ್ತಿಯಲ್ಲಿ ಬೈಕ್ ಅಪಘಾತದಲ್ಲಿ ತಲೆಗೆ ತೀವ್ರ ಪೆಟ್ಟು ಬಿದ್ದು ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಬೆಂಗಳೂರು-ಜಲಸೂರು ಹೆದ್ದಾರಿಯಲ್ಲಿ ಬೈಕ್ ಅಪಘಾತ:

ತಾಲೂಕು ವೈಷ್ಣವ ಸಂಘದ ಅಧ್ಯಕ್ಷ ಹಾಗೂ ಬೊಮ್ಮೆನಹಳ್ಳಿ ಮುತ್ತುರಾಯಸ್ವಾಮಿ ದೇವಸ್ಥಾನದ ಅರ್ಚಕ ಹರಿಹರಪುರದ ಎಚ್.ವಿ.ಕೃಷ್ಣಮೂರ್ತಿ ಮೃತಪಟ್ಟವರು. ಬೈಕ್ ಅಪಘಾತದಿಂದ ತಲೆಗೆ ತೀವ್ರ ಪೆಟ್ಟು ಬಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಅಮೃತಪಟ್ಟಿದ್ದು, ಮೃತರ ಅಂತ್ಯಕ್ರಿಯೆ ವೈಷ್ಣವ ವಿಧಿ ವಿಧಾನಂತೆ ಅವರ ಜಮೀನಿನಲ್ಲಿ ಭಾನುವಾರ ನೆರವೇರಿತು.ಶಾಸಕ ಎಚ್.ಟಿ.ಮಂಜು, ಆರ್.ಟಿ.ಓ ಮಲ್ಲಿಕಾರ್ಜುನ್, ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಸೇರಿದಂತೆ ಹಲವರು ಮೃತರ ಅಂತಿಮ ದರ್ಶನ ಪಡೆದು ಸಂತಾಪ ಸೂಚಿಸಿದರು.

ಗ್ರಾಮಸ್ಥರ ಆಕ್ರೋಶ:

ಹರಿಹರಪುರ ಗ್ರಾಮದ ಮೂಲಕ ಹಾದು ಹೋಗಿರುವ ಬೆಂಗಳೂರು-ಜಲಸೂರು ರಾಜ್ಯ ಹೆದ್ದಾರಿ ವೈಜ್ಞಾನಿಕವಾಗಿದೆ. ರಸ್ತೆ ನಿರ್ಮಾಣ ಮಾಡಿರುವ ಕೆಶಿಪ್ ಎಂಜಿನಿಯರುಗಳು ಗ್ರಾಮ ವ್ಯಾಪ್ತಿಯಲ್ಲಿ ಅಗತ್ಯ ಸುರಕ್ಷಾ ಕ್ರಮಗಳನ್ನು ರೂಪಿಸಿಲ್ಲ. ನಿಯಮಾನುಸಾರ ರಾಜ್ಯ ಹೆದ್ದಾರಿ ಎರಡೂ ಬದಿಗಳಲ್ಲಿ ಸರ್ವೀಸ್ ರಸ್ತೆ ನಿರ್ಮಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಗ್ರಾಮ ವ್ಯಾಪ್ತಿಯಲ್ಲಿ ದ್ವಿಪಥ ರಸ್ತೆ ನಿರ್ಮಿಸಿದರೆ ಅಥವಾ ವೈಜ್ಞಾನಿಕವಾಗಿ ರಸ್ತೆ ಉಬ್ಬುಗಳನ್ನು ಅಳವಡಿಸಿದರೆ ಅತಿವೇಗವಾಗಿ ಬರುವ ವಾಹನಮಗಳನ್ನು ನಿಯಂತ್ರಿಸಬಹುದು. ಗ್ರಾಮೀಣ ಪ್ರದೇಶದಲ್ಲಿ ರಾಜ್ಯ ಹೆದ್ದಾರಿಗೆ ವೇಗ ಮಿತಿ ನಿಗಧಿಗೊಳಿಸಿಲ್ಲ. ಇದರ ಪರಿಣಾಮ ಗ್ರಾಮ ವ್ಯಾಪ್ತಿಯಲ್ಲಿ ಹಲವು ಅಪಘಾತಗಳಿಂದ ಜನರು ಸಾವನ್ನಪ್ಪುತ್ತಿದ್ದಾರೆ. ಕೆಶಿಪ್ ಅಧಿಕಾರಿಗಳು ಆಗಾಗ್ಗೆ ಆಗುತ್ತಿರುವ ಅಪಘಾತಗಳನ್ನು ತಪ್ಪಿಸಿ ಜನರ ಜೀವ ಉಳಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬಾಲಿವುಡ್ ನಿರ್ದೇಶಕ ವಿಕ್ರಂ ಭಟ್, ಪತ್ನಿ ಶ್ವೇತಾಂಬರಿ ಭಟ್ ಬಂಧನ; ಅಂತಿಂಥ ವಂಚನೆ ಕೇಸಲ್ಲ ಇದು ಅಂತೀರಾ?!
ಕೊಪ್ಪಳ: ಹಸೆಮಣೆ ಏರಬೇಕಿದ್ದ ಜೋಡಿ ಮಸಣಕ್ಕೆ - ಪ್ರಿ-ವೆಡ್ಡಿಂಗ್ ಶೂಟಿಂಗ್ ಮುಗಿಸಿ ವಾಪಸಾಗುವಾಗ ಭೀಕರ ದುರಂತ!