ಚಾಮರಾಜನಗರ: ತಪ್ಪಿಸಿಕೊಂಡಿದ್ದ ಕೈದಿ ಪರ್ಸ್‌ ದೋಚಿ ಸಿಕ್ಕಿ ಬಿದ್ದ..!

Published : Aug 06, 2023, 11:00 PM IST
ಚಾಮರಾಜನಗರ: ತಪ್ಪಿಸಿಕೊಂಡಿದ್ದ ಕೈದಿ ಪರ್ಸ್‌ ದೋಚಿ ಸಿಕ್ಕಿ ಬಿದ್ದ..!

ಸಾರಾಂಶ

ಚಾಮರಾಜನಗರ ತಾಲೂಕಿನ ಮೇಗಲಹುಂಡಿ ಸುರೇಶ್‌ ಪೊಲೀಸರ ಕೈಗೆ ಸಿಕ್ಕಿಬಿದ್ದ ವಿಚಾರಣಾ ಕೈದಿ. ಪೊಲೀಸರಿಂದ ತಪ್ಪಿಸಿಕೊಂಡ 24 ತಾಸಲ್ಲೇ ಮತ್ತೆ ಖಾಕಿ ಬಲೆಗೆ ಬಿದ್ದಿದ್ದಾನೆ.

ಚಾಮರಾಜನಗರ(ಆ.06):  ನ್ಯಾಯಾಲಯಕ್ಕೆ ಹಾಜರುಪಡಿಸಲು ಕರೆದೊಯ್ಯುತ್ತಿದ್ದಾಗ ತಪ್ಪಿಸಿಕೊಂಡಿದ್ದ ವಿಚಾರಣಾ ಕೈದಿ ಮಹಿಳೆಯರ ಪರ್ಸ್‌ ಕದಿಯಲು ಹೋಗಿ ಸಿಕ್ಕಿ ಬಿದ್ದಿರುವ ಘಟನೆ ಚಾಮರಾಜನಗರ ಸಮೀಪದ ಕೌಲಂದೆ ರೈಲ್ವೆ ನಿಲ್ದಾಣದಲ್ಲಿ ಶನಿವಾರ ನಡೆದಿದೆ. ಚಾಮರಾಜನಗರ ತಾಲೂಕಿನ ಮೇಗಲಹುಂಡಿ ಸುರೇಶ್‌(30) ಪೊಲೀಸರ ಕೈಗೆ ಸಿಕ್ಕಿಬಿದ್ದ ವಿಚಾರಣಾ ಕೈದಿ. ಪೊಲೀಸರಿಂದ ತಪ್ಪಿಸಿಕೊಂಡ 24 ತಾಸಲ್ಲೇ ಮತ್ತೆ ಖಾಕಿ ಬಲೆಗೆ ಬಿದ್ದಿದ್ದಾನೆ.

ಏನಿದು ಘಟನೆ?

ಸುರೇಶ್‌ ವಿರುದ್ಧ ಕಳ್ಳತನ ಹಾಗೂ ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಹಾಗೂ ತಮಿಳುನಾಡಿನ ಹಲವು ಠಾಣೆಗಳಲ್ಲಿ ಪ್ರಕರಣ ದಾಖಲಾಗಿವೆ. ಈ ಸಂಬಂಧ ಕೆಲ ದಿನಗಳ ಹಿಂದೆ ಚಾಮರಾಜನಗರ ಗ್ರಾಮಾಂತರ ಠಾಣೆ ಪೊಲೀಸರು ಸುರೇಶ್‌ನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸತ್ಯಮಂಗಲಂನ ನ್ಯಾಯಾಲಯಕ್ಕೆ ಶುಕ್ರವಾರ ವಿಚಾರಣೆಗೆ ಕರೆದೊಯ್ಯುವಾಗ ಆಸನೂರಿನ ಹೋಟೆಲ್‌ ಬಳಿ ಸುರೇಶ್‌ ಪೊಲೀಸರನ್ನು ನೂಕಿ ಪರಾರಿಯಾಗಿದ್ದನು. ಆ ವೇಳೆ ಪೊಲೀಸ್‌ ಸಿಬ್ಬಂದಿ ಶಿವಾಜಿ ಅವರ ಕಿರು ಬೆರಳು ಮುರಿದು, ಕಾಲುಗಳಿಗೆ ಗಾಯವಾಗಿತ್ತು. ವೀರಭದ್ರ ಎಂಬುವರಿಗೆ ತರಚಿದ ಗಾಯಗಳಾಗಿತ್ತು. ಪೊಲೀಸರಿಂದ ತಪ್ಪಿಸಿಕೊಂಡ ಈತ ಪೊದೆಗಳ ಒಳಕ್ಕೆ ನುಗ್ಗಿ ಕಣ್ತಪ್ಪಿಸಿಕೊಂಡಿದ್ದ. ಬಳಿಕ ಆಸನೂರು ಬಳಿ ಕಲ್ಲಿನಿಂದ ಜಜ್ಜಿಕೊಂಡು ಕೈ ಬೇಡಿಯನ್ನು ಕಳಚಿಕೊಂಡು, ವಸ್ತ್ರ ಬದಲಾಯಿಸಿ ಚಾಮರಾಜನಗರಕ್ಕೆ ಬಂದಿದ್ದಾನೆ ಎನ್ನಲಾಗಿದೆ.

Bengaluru: ಯೂಟ್ಯೂಬ್‌ ಚಾನಲ್‌ ಆರಂಭಿಸಿ ದಂಧೆ, ಮಾಂಸದಂಗಡಿಗಳಲ್ಲಿ ಹಫ್ತಾ ವಸೂಲಿ: 4 ಪತ್ರಕರ್ತರ ಸೆರೆ

ಚಾಮರಾಜನಗರದಿಂದ ನಂಜನಗೂಡಿಗೆ ಶುಕ್ರವಾರ ರಾತ್ರಿ ರೈಲಿನಲ್ಲಿ ಹೋಗಿದ್ದ ಈತ ಶನಿವಾರ ನಂಜನಗೂಡಿನಿಂದ ವಾಪಸ್‌ ಚಾಮರಾಜನಗರಕ್ಕೆ ಬರುವಾಗ ಮಹಿಳಾ ಬೋಗಿಯನ್ನು ಏರಿ ಪರ್ಸ್‌ ಕದಿಯಲು ಯತ್ನಿಸಿದ್ದಾನೆ ಎನ್ನಲಗಿದೆ. ಈ ವೇಳೆ ಅಲ್ಲೇ ಇದ್ದ ಸಹ ಪ್ರಯಾಣಿಕರು ಈತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಚಾಮರಾಜನಗರ ಗ್ರಾಮಾಂತರ ಠಾಣಾ ಪೊಲೀಸರು ಸುರೇಶ್‌ನ ಆರೋಗ್ಯ ತಪಾಸಣೆಗೊಳಿಸಿ ಸತ್ಯಮಂಗಲಂ ನ್ಯಾಯಾಲಯ ವಶಕ್ಕೆ ಕೊಡಲು ತೆರಳಿದ್ದಾರೆ.

2 ಪೊಲೀಸರ ಅಮಾನತು

ವಿಚಾರಣಾ ಕೈದಿ ತಪ್ಪಿಸಿಕೊಂಡಿದ್ದ ಹಿನ್ನೆಲೆ ಮೀಸಲು ಪಡೆಯ ವೀರಭದ್ರ ಹಾಗೂ ಶಿವಾಜಿ ಎಂಬವರನ್ನು ಅಮಾನತುಗೊಳಿಸಿ ಚಾಮರಾಜನಗರ ಎಸ್ಪಿ ಆದೇಶ ನೀಡಿದ್ದಾರೆ. ಕರ್ತವ್ಯ ಲೋಪ ಹಿನ್ನೆಲೆ ಇಬ್ಬರ ಪೊಲೀಸ್‌ ಸಿಬ್ಬಂದಿಯನ್ನು ಅಮಾನತುಗೊಳಿಸಿ ಇಲಾಖಾ ವಿಚಾರಣೆಗೆ ಸೂಚಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

The Devil Movie: ಕಾಲವೇ ಸತ್ಯ ಹೇಳುತ್ತದೆ. ಸಮಯವೇ ಉತ್ತರಿಸುತ್ತದೆ-ಜೈಲಿನಿಂದಲೇ Darshan ಮೆಸೇಜ್
ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು