ಒಡಹುಟ್ಟಿದವನ್ನು ಹೊಲಕ್ಕೆ ಕರೆದು ಕೊಡಲಿಯಿಂದ ಕೊಚ್ಚಿ ಕೊಂದ ಸಹೋದರರು!

Published : Jun 30, 2023, 08:36 PM IST
ಒಡಹುಟ್ಟಿದವನ್ನು ಹೊಲಕ್ಕೆ ಕರೆದು ಕೊಡಲಿಯಿಂದ ಕೊಚ್ಚಿ ಕೊಂದ ಸಹೋದರರು!

ಸಾರಾಂಶ

ಗದಗ ಜಿಲ್ಲೆಯ ರೋಣ ಪಟ್ಟಣದಲ್ಲಿ ಆಸ್ತಿ ವಿಚಾರಕ್ಕೆ ಆರಂಭವಾದ ಗಲಾಟೆ ಸಹೋದರನ ಹತ್ಯೆಯಲ್ಲಿ ಅಂತ್ಯವಾಗಿದೆ.

ಗದಗ (ಜೂ.30): ಆಸ್ತಿ ವಿಚಾರಕ್ಕೆ ಆರಂಭವಾದ ಗಲಾಟೆ ಸಹೋದರನ ಹತ್ಯೆಯಲ್ಲಿ ಅಂತ್ಯವಾಗಿದೆ.. ರೋಣ ಪಟ್ಟಣದ ಹೊರ ವಲಯದ ಜಿಗಳೂರು ರಸ್ತೆಯ ಜಮೀನಲ್ಲಿ ನಡೆದ ಸಹೋದರರ ಗಲಾಟೆಯಲ್ಲಿ ಶೇಕಪ್ಪ ನವಲಗುಂದ (35) ಎಂಬಾತನನ್ನ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಪಟ್ಟಣದ ಹೊರವಲಯದಲ್ಲಿರೋ ಏಳು ಎಕರೆ ಆಸ್ತಿ ವಿಚಾರವಾಗಿ ಶೇಕಪ್ಪ ಹಾಗೂ ಸಹೋದರರಾದ ಲೋಕಪ್ಪ, ರೇಣುಕಪ್ಪ, ಬಸಪ್ಪ ಮಧ್ಯೆ ಗಲಾಟೆ ಇತ್ತು. ತಿಂಗಳ ಹಿಂದೆಯೇ ಕಿರಿಯ ಸಹೋದರ ಶೇಕಪ್ಪ ಹಾಗೂ ಲೋಕಪ್ಪ ಮಧ್ಯೆ ಜಗಳ ಆಗಿತ್ತಂತೆ. ನಾಲ್ವರು ಸಹೋದರರು ಮಧ್ಯೆ ಹಣ, ಜಮೀನು ವಿಷಯವಾಗಿ ನಿನ್ನೆಯೂ ಗಲಾಟೆ ನಡೆದಿದೆ.

ನೇತ್ರಾವತಿ ಪೀಕ್ ಸ್ಪಾಟ್ ಚಾರಣ ಹೋಗಿದ್ದ ಮೈಸೂರು ಯುವಕ ಹೃದಯಘಾತದಿಂದ ಸಾವು

ಆಸ್ತಿ ವಿಷಯವಾಗಿ ಮಾತ್ನಾಡೋಣ ಅಂತಾ ಜಮೀನಿಗೆ ಕರೆದಿದ್ದ ಲೋಕಪ್ಪ, ಸಹೋದರನನ್ನ ಹತ್ಯೆ ಮಾಡಿದ್ದಾನೆ.  ಜಮೀನು, ಸೈಟ್ ವಿಷಯವಾಗಿ ಆಗಾಗ ಗಲಾಟೆ ನಡೀತಿತ್ತು. ಮಾತ್ನಾಡೊಣ ಅಂತಾ ಕರೆದು ಲೋಕಪ್ಪ, ರೇಣುಕಪ್ಪ, ಬಸಪ್ಪ ಕೊಲೆ ಮಾಡಿದ್ದಾರೆ ಅಂತಾ ಮೃತ ಶೇಕಪ್ಪ ಪತ್ನಿ ವಿದ್ಯಾ ಆರೋಪಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರೋ ರೋಣ ಪೊಲೀಸರು, ತನಿಖೆ ನಡೆಸಿದ್ದಾರೆ.. ತಲೆ ಮರೆಸಿಕೊಂಡಿರೋ ಆರೋಪಿಗಳಿಗಾಗಿ ಶೋಧ ನಡೆಸಿದ್ದಾರೆ.

ಹೊಸಪೇಟೆ ಬಳಿ ಭೀಕರ ಅಪಘಾತ: ಬಳ್ಳಾರಿ ಕೌಲ್‌ಬಜಾರ್‌ನ ನಾಲ್ವರು ಸಾವು

ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ವ್ಯಕ್ತಿಯ ಕೊಲೆಗೈದು ಪರಾರಿ
ಬೆಂಗಳೂರು: ವ್ಯಕ್ತಿಯೊಬ್ಬನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ದುಷ್ಕರ್ಮಿಗಳು ಹತ್ಯೆಗೈದು ಪರಾರಿಯಾಗಿರುವ ಘಟನೆ ತಲಘಟ್ಟಪುರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತನ ಹೆಸರು ಪತ್ತೆಯಾಗಿಲ್ಲ. ಆತನ ವಯಸ್ಸು 28-30 ವರ್ಷವಾಗಿದ್ದು, ಸೊಂಟಕ್ಕೆ ಕಪ್ಪು ಧಾರ ಕಟ್ಟಿಕೊಂಡಿದ್ದಾನೆ. ನೈಸ್‌ ರಸ್ತೆಯ ಸೋಂಪುರ ಸಮೀಪ ಹೆಮ್ಮಿಗೆಪುರಕ್ಕೆ ಸಾಗುವ ದಾರಿಯಲ್ಲಿ ಗುರುವಾರ ಬೆಳಗ್ಗೆ 6.50ರಲ್ಲಿ ರಕ್ತಸಿಕ್ತವಾಗಿ ಬಿದ್ದಿದ್ದ ಅಪರಿಚಿತನ ಮೃತದೇಹ ಕಂಡು ಪೊಲೀಸರಿಗೆ ಸಾರ್ವಜನಿಕರು ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ತೆರಳಿದ ಪೊಲೀಸರು, ಮೃತ ದೇಹವನ್ನು ಪರಿಶೀಲಿಸಿದ್ದಾರೆ. ಆದರೆ ಆತನ ಗುರುತು ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. ವೈಯಕ್ತಿಕ ದ್ವೇಷದ ಹಿನ್ನಲೆಯಲ್ಲಿ ಹೆಮ್ಮಿಗೆಪುರ ರಸ್ತೆಗೆ ಕರೆತಂದು ಕೊಲೆ ಮಾಡಿರಬಹುದು ಎಂದು ಶಂಕಿಸಿರುವ ಪೊಲೀಸರು, ಈ ಕೃತ್ಯ ನಸುಕಿನ 2ರಿಂದ 4 ಗಂಟೆಯೊಳಗೆ ನಡೆದಿದೆ ಎಂದು ಹೇಳಿದ್ದಾರೆ. ತಲಘಟ್ಟಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ನನ್ನ ಜೊತೆಗೂ ಬಾ: ಗೆಳೆಯನ ಗರ್ಲ್‌ಫ್ರೆಂಡ್‌ಗೆ ಸಂದೇಶ: ಪ್ರಶ್ನಿಸಿದ್ದಕ್ಕೆ ಸ್ನೇಹಿತನನ್ನೇ ಕೊಂದು ಪೀಸ್ ಪೀಸ್ ಮಾಡಿದ
The Devil Movie: ಕಾಲವೇ ಸತ್ಯ ಹೇಳುತ್ತದೆ. ಸಮಯವೇ ಉತ್ತರಿಸುತ್ತದೆ-ಜೈಲಿನಿಂದಲೇ Darshan ಮೆಸೇಜ್