ಬೆಂಗಳೂರು: ದೂರು ಕೊಡಲು ಬಂದವಳ ಜತೆಗೆ ಪೊಲೀಸಪ್ಪನ ಅನುಚಿತ ವರ್ತನೆ?

Published : Apr 11, 2023, 10:39 AM ISTUpdated : Apr 11, 2023, 10:48 AM IST
ಬೆಂಗಳೂರು: ದೂರು ಕೊಡಲು ಬಂದವಳ ಜತೆಗೆ ಪೊಲೀಸಪ್ಪನ ಅನುಚಿತ ವರ್ತನೆ?

ಸಾರಾಂಶ

ಘಟನೆಯಿಂದ ನಾನು ಮಾನಸಿಕವಾಗಿ ಆಘಾತಕ್ಕೆ ಒಳಗಾಗಿದ್ದೇನೆ. ಈ ಬಗ್ಗೆ ನಾನು ಏನು ಮಾಡಬೇಕು ಎಂಬುದು ಗೊತ್ತಾಗುತ್ತಿಲ್ಲ. ಈ ಸಂದರ್ಭವನ್ನು ನಾನು ಹೇಗೆ ನಿಭಾಯಿಸಬೇಕು ಎಂಬುದು ಹೊಳೆಯುತ್ತಿಲ್ಲ. ಈ ಬಗ್ಗೆ ಸಲಹೆ ನೀಡಿ ಅಂತ ಟ್ವಿಟರ್‌ನಲ್ಲಿ ಮನವಿ ಮಾಡಿದ ಮಹಿಳೆ. 

ಬೆಂಗಳೂರು(ಏ.11):  ಸ್ನೇಹಿತರ ವಿವಾಹ ವಿಚ್ಛೇದನ ಪ್ರಕರಣದಲ್ಲಿ ಹೇಳಿಕೆ ನೀಡಲು ಸುದ್ದಗುಂಟೆಪಾಳ್ಯ ಪೊಲೀಸ್‌ ಠಾಣೆಗೆ ತೆರಳಿದ್ದ ಮಹಿಳೆ ಜತೆಗೆ ಸಬ್‌ ಇನ್‌ಸ್ಪೆಕ್ಟರ್‌(ಪಿಎಸ್‌ಐ) ಅನುಚಿತವಾಗಿ ವರ್ತಿಸಿದ ಆರೋಪ ಕೇಳಿ ಬಂದಿದೆ.

ಸುದ್ದಗುಂಟೆಪಾಳ್ಯ ಠಾಣೆ ಪಿಎಸ್‌ಐ ಮಂಜುನಾಥ ವಿರುದ್ಧ ಮಹಿಳೆ ಅನುಚಿತ ವರ್ತನೆ ಆರೋಪ ಮಾಡಿದ್ದಾರೆ. ಈ ಸಂಬಂಧ ಟ್ವಿಟರ್‌ನಲ್ಲಿ ಬರೆದು ನಗರ ಪೊಲೀಸ್‌ ಆಯುಕ್ತರಿಗೆ ಟ್ಯಾಗ್‌ ಮಾಡಿದ್ದಾರೆ. ‘ಸ್ನೇಹಿತರ ವಿವಾಹ ವಿಚ್ಛೇದನ ಪ್ರಕರಣ ಸಂಬಂಧ ಹೇಳಿಕೆ ದಾಖಲಿಸಲು ಏ.8ರಂದು ಸುದ್ದಗುಂಟೆಪಾಳ್ಯ ಪೊಲೀಸ್‌ ಠಾಣೆಗೆ ತೆರಳಿದ್ದೆ. ಈ ವೇಳೆ ಪಿಎಸ್‌ಐ ಮಂಜುನಾಥ ಅವರು ಹೇಳಿಕೆ ದಾಖಲಿಸುವ ನೆಪದಲ್ಲಿ ನನ್ನ ಕೈ, ಸೊಂಟ ಮುಟ್ಟಿ ಅಸಭ್ಯವಾಗಿ ವರ್ತಿಸಿದರು. ಅಷ್ಟೇ ಅಲ್ಲದೆ, ತಡರಾತ್ರಿ ವಾಟ್ಸಾಪ್‌ನಲ್ಲಿ ಸಂದೇಶಗಳನ್ನು ಕಳುಹಿಸಿ ಕಿರುಕುಳ ನೀಡುತ್ತಿದ್ದಾರೆ’ ಎಂದು ಆರೋಪಿಸಿದ್ದಾರೆ.

ಬೆಂಗಳೂರು: ಕಳ್ಳನೆಂದು ಭಾವಿಸಿ ಪೈಶಾಚಿಕವಾಗಿ ವ್ಯಕ್ತಿಯ ಹತ್ಯೆ

‘ಈ ಘಟನೆಯಿಂದ ನಾನು ಮಾನಸಿಕವಾಗಿ ಆಘಾತಕ್ಕೆ ಒಳಗಾಗಿದ್ದೇನೆ. ಈ ಬಗ್ಗೆ ನಾನು ಏನು ಮಾಡಬೇಕು ಎಂಬುದು ಗೊತ್ತಾಗುತ್ತಿಲ್ಲ. ಈ ಸಂದರ್ಭವನ್ನು ನಾನು ಹೇಗೆ ನಿಭಾಯಿಸಬೇಕು ಎಂಬುದು ಹೊಳೆಯುತ್ತಿಲ್ಲ. ಈ ಬಗ್ಗೆ ಸಲಹೆ ನೀಡಿ’ ಆ ಮಹಿಳೆ ಟ್ವಿಟರ್‌ನಲ್ಲಿ ಮನವಿ ಮಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ
ಮಧುಗಿರಿ: ಕದ್ದ ಎಟಿಎಂ ಭಾರ ಇದೆ ಎಂದು ರಸ್ತೆಯಲ್ಲೇ ಬಿಟ್ಟು ಹೋದರು