
ಬೆಂಗಳೂರು (ಮಾ. 09) ಪಿಯು ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದಿದೆ. ಘಟನೆಯಲ್ಲಿ ಓರ್ವ ವಿದ್ಯಾರ್ಥಿ ಮೃತಪಟ್ಟಿದ್ದಾಮನೆ.
ವಿದ್ಯಾರ್ಥಿಯನ್ನು ಚಾಕು ಇರಿದು ಹತ್ಯೆ ಮಾಡಲಾಗಿದೆ. ಬೆಂಗಳೂರಿನ ಯಶವಂತಪುರದಲ್ಲಿ ಘಟನೆ ನಡೆದಿದೆ. ಫೈಯಾಜ್ (16) ಕೊಲೆಯಾದ ವಿದ್ಯಾರ್ಥಿ. ಯಶವಂತಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಅಪ್ಪಿಕೊಂಡು ಮುದ್ದಾಡುತ್ತಲೆ ಗರ್ಭಿಣಿ ಗರ್ಲ್ ಫ್ರೆಂಡ್ ಕತ್ತು ಸೀಳಿದ
ಸುಮಾರು ಐದು ಗಂಟೆಯ ಸಂದರ್ಭದಲ್ಲಿ ಕೊಲೆ ಮಾಡಲಾಗಿದೆ. ಕೆಲವು ಹುಡುಗರು ಒಬ್ಬ ಹುಡುಗನನ್ನುಅಟ್ಟಿಸಿಕೊಂಡು ಬಂದ್ರು.ಹುಡುಗ ಬಿಡುವಂತೆ ಕಿರಿಚಿದ್ರು ಕೂಡ ಬಿಡಲಿಲ್ಲ ಎಂದು ಸ್ಥಳೀಯರಾದ ಮಂಜೇಗೌಡ ಹೇಳಿದ್ದಾರೆ.
ಹುಡುಗಿ ವಿಚಾರಕ್ಕೆ ಕಿತ್ತಾಡಿಕೊಂಡಿರುವ ಶಂಕೆ. ವ್ಯಕ್ತವಾಗಿದೆ. ಇಬ್ಬರ ನಡುವಿನ ಕಿತ್ತಾಟದಲ್ಲಿ ಸಹಾಯಕ್ಕೆ ಬಂದ ಮೂರನೆಯವನಿಗೆ ಚಾಕುವಿನಿಂದ ಇರಿಯಲಾಗಿದೆ. ಖಾಸಗಿ ಕಾಲೇಜಿನಲ್ಲಿ ಪ್ರಥಮ ಪಿ.ಯು ವ್ಯಾಸಾಂಗ ಮಾಡುತ್ತಿದ್ದ ಫೈಯಾಜ್ ಹತ್ಯೆಯಾಗಿದ್ದಾನೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ