ಶಿರಸಿ: ದ್ವಿತೀಯ ಪಿಯುಸಿ ಪರೀಕ್ಷೆ ರದ್ದು, ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

Suvarna News   | Asianet News
Published : Jun 13, 2021, 08:30 AM IST
ಶಿರಸಿ: ದ್ವಿತೀಯ ಪಿಯುಸಿ ಪರೀಕ್ಷೆ ರದ್ದು, ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

ಸಾರಾಂಶ

* ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದಲ್ಲಿ ನಡೆದ ಘಟನೆ * ಕಾಲೇಜಿಗೆ ಪ್ರಥಮ ರ‍್ಯಾಂಕ್ ಬರಬೇಕೆಂಬ ಆಸೆ ಹೊತ್ತಿದ್ದ ಧನ್ಯ ಆಚಾರಿ  * ವರ್ಷಪೂರ್ತಿ ಓದಿರೋದು ವ್ಯರ್ಥವಾಯ್ತು ಎಂಬುದನ್ನು ಮನಸ್ಸಿಗೆ ಹಚ್ಕೊಂಡಿದ್ದ ವಿದ್ಯಾರ್ಥಿನಿ

ಕಾರವಾರ(ಜೂ.13): ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆ ರದ್ದಾದ ಹಿನ್ನೆಲೆಯಲ್ಲಿ ಮನನೊಂದು ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯಶಿರಸಿ ತಾಲೂಕಿನ ಯಡಳ್ಳಿ ಸಮೀಪದ‌ ಸಹಸ್ರಳ್ಳಿಯಲ್ಲಿ ನಿನ್ನೆ(ಶನಿವಾರ) ನಡೆದಿದೆ.

ಧನ್ಯ ಆಚಾರಿ (18) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿಯಾಗಿದ್ದಾಳೆ. ವರ್ಷಪೂರ್ತಿ ಓದಿರೋದು ವ್ಯರ್ಥವಾಯ್ತು ಎಂಬುದನ್ನು ಮನಸ್ಸಿಗೆ ಹಚ್ಕೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಮೃತ ಧನ್ಯ ಆಚಾರಿ ಶಿರಸಿ ನಗರದ ಮಾರಿಕಾಂಬಾ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಅಧ್ಯಯನ ಮಾಡುತ್ತಿದ್ದಳು ಎಂದು ತಿಳಿದು ಬಂದಿದೆ. 

ಶಿರಸಿ-ಸಿದ್ದಾಪುರ; ಪ್ರಿಯಕರನ ನಿರ್ಲಕ್ಷ್ಯ, ಯುವತಿ ಆತ್ಮಹತ್ಯೆ

ಧನ್ಯ ಆಚಾರಿ ಕಾಲೇಜಿಗೆ ಪ್ರಥಮ ರ‍್ಯಾಂಕ್ ಬರಬೇಕೆಂಬ ಆಸೆ ಹೊತ್ತಿದ್ದಳು. ಪರೀಕ್ಷೆ ರದ್ದಾಗಿ ಪ್ರಥಮ ಪಿಯು ಆಧಾರದ ಮೇಲೆ ಅಂಕ‌ ನೀಡುವ ಘೋಷಣೆಯಿಂದ ಚಿಂತೆಗೀಡಾಗಿದ್ದಳು. ಪರೀಕ್ಷೆ ರದ್ದಾದ ಕಾರಣ ನೋವಿನಿಂದ ಯುವತಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಹೇಳಲಾಗುತ್ತಿದೆ. ಈ ಸಂಬಂಧ ಶಿರಸಿ ಗ್ರಾಮಿಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!
ಬೆಂಗಳೂರು ವಿಜಯ್ ಗುರೂಜಿ ಗ್ಯಾಂಗ್ ಸಮೇತ ಅರೆಸ್ಟ್; ಟೆಕ್ಕಿಗೆ ಲೈಂಗಿಕ ಶಕ್ತಿ ಹೆಚ್ಚಿಸೋದಾಗಿ ₹40 ಲಕ್ಷ ವಂಚನೆ!