
ಗಜೇಂದ್ರಗಡ(ಅ.02): ಪಬ್ಜಿ ಗೇಮ್ಗೆ ಮಾರಹೋದ ವಿದ್ಯಾರ್ಥಿಯೊಬ್ಬ ನೇಣಿಗೆ ಶರಣಾಗಿದ್ದಾನೆ ಎನ್ನುವ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ಗುರುವಾರ ಸಂಭವಿಸಿದೆ.
ಸ್ಥಳೀಯ ರೇಬಜಾರ ಬಡಾವಣೆಯ ಮನೆಯಲ್ಲಿ 17 ವರ್ಷದ ಕಾರ್ತಿಕ ಬಲಿ ಬೆಳಗ್ಗೆ 9.30ರ ಸುಮಾರಿಗೆ ನೇಣು ಹಾಕಿಕೊಂಡಿದ್ದಾನೆ. ಮೃತ ಕಾರ್ತಿಕ್ ದ್ವಿತೀಯ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.
ಸಾಲಬಾಧೆ ತಾಳಲಾರದೆ ರೈತರಿಬ್ಬರು ಆತ್ಮಹತ್ಯೆ
ಆನ್ಲೈನ್ ಕ್ಲಾಸ್ ನೆಪದಲ್ಲಿ ಪಬ್ಜಿ ಗೇಮ್ ಆಡುತ್ತಿದ್ದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಓದಿನ ಕಡೆ ಗಮನ ನೀಡು ಎಂದು ಮೂಬೈಲ್ ಕಸಿದುಕೊಂಡಿದ್ದರಿಂದ ಬೇಸರಗೊಂಡು ಕಾರ್ತಿಕ್ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ ಎನ್ನಲಾಗಿದೆ. ಇದ್ದ ಒಬ್ಬನೆ ಮಗನನ್ನು ಕಳೆದುಕೊಂಡು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು ಗಜೇಂದ್ರಗಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ