
ಬೆಂಗಳೂರು(ಜ.08): ಸ್ಯಾಂಡಲ್ವುಡ್ ನಟಿ ರಾಗಿಣಿಗೆ ಜಾಮೀನು ವಿಚಾರದಲ್ಲಿ ಮತ್ತೆ ನಿರಾಸೆಯಾಗಿದೆ. ರಾಗಿಣಿ ಪ್ರಕರಣದಲ್ಲಿ ವಿಚಾರಣೆಯನ್ನು ಮುಂದಿನ ವಾರಕ್ಜೆ ಮುಂದೂಡಲಾಗಿದೆ.
ಡ್ರಗ್ಸ್ ಮಾರಾಟ ಜಾಲದೊಂದಿಗೆ ನಂಟು ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಬಂಧನಕ್ಕೊಳಗಾಗಿರುವ ನಟಿ ರಾಗಿಣಿ ದ್ವಿವೇದಿ ಅವರು ಸುಪ್ರೀಂ ಕೋರ್ಟಿಗೆ ಸಲ್ಲಿಸಿರುವ ಜಾಮೀನು ಅರ್ಜಿಯ ವರ್ಚುವಲ್ ವಿಚಾರಣೆ ಶುಕ್ರವಾರ ನಡೆಯುವುದಿತ್ತು.
ರಾಗಿಣಿಗೆ ಮದ್ವೆ ಪ್ರಪೋಸ್ ಮಾಡಿದ್ದು ನಿಜ; ಆರೋಪಿ ಶಿವಪ್ರಕಾಶ್ ಸ್ಪಷ್ಟನೆ!
ಇದೇ ವೇಳೆ ಯಾವುದೇ ಕಾರಣಕ್ಕೂ ರಾಗಿಣಿಗೆ ಜಾಮೀನು ನೀಡದಂತೆ ಬೆಂಗಳೂರಿನ ಕ್ರೈಮ್ ಬ್ರಾಂಚ್ ಪೊಲೀಸರು ಕೋರ್ಟಿಗೆ ಆಕ್ಷೇಪಣಾ ಅರ್ಜಿಯನ್ನೂ ಸಲ್ಲಿಸಿದ್ದಾರೆ. ಪ್ರಕರಣದ ಆರೋಪಿಗಳಾದ ಶಿವಪ್ರಕಾಶ್, ಈರಪ್ಪ ಅವರ ಅರ್ಜಿ ವಿಚಾರಣೆಯೂ ಶುಕ್ರವಾರವೇ ನಡೆಯುವುದರಲ್ಲಿತ್ತು.
ಮಾದಕ ದ್ರವ್ಯ ಪೂರೈಕೆ ಜಾಲದೊಂದಿಗೆ ನಂಟು ಹೊಂದಿರುವ ಹಿನ್ನೆಲೆಯಲ್ಲಿ ಸೆ.4ರಂದು ಬಂಧನಕ್ಕೊಳಗಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ರಾಗಿಣಿ ದ್ವಿವೇದಿ ಹೈಕೋರ್ಟಿನಲ್ಲಿ ಜಾಮೀನು ಸಿಗದೆ ಸುಪ್ರೀಂ ಕೋರ್ಟಿಗೆ ಮೊರೆ ಹೋಗಿದ್ದರು. ವಿಚಾರಣೆ ಕೈಗೆತ್ತಿಕೊಂಡಿದ್ದ ನ್ಯಾ.ಎಲ್.ನಾಗೇಶ್ವರ ರಾವ್ ಅವರ ನೇತೃತ್ವದ ತ್ರಿಸದಸ್ಯ ಪೀಠ ಸಿಸಿಬಿ ಪೊಲೀಸರಿಗೆ ಪ್ರಕರಣಕ್ಕೆ ಸಂಬಂಧಿಸಿ ವರದಿ ನೀಡುವಂತೆ ನೋಟಿಸ್ ಸಲ್ಲಿಸಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ