
ರಾಯಚೂರು(ಏ. 09) ಕೊರೋನಾ ಅಟ್ಟಹಾಸದ ನಡುವೆ ಈ ಕುಟುಂಬಕ್ಕೆ ಮತ್ತೊಂದು ಅರಗಿಸಿಕೊಳ್ಳಲಾಗದ ಸುದ್ದಿ ಬಂದೆರಗಿದೆ. ನೀರು ತುಂಬಲು ಹೋದ ಮೂವರು ಮಕ್ಕಳು ನೀರು ಪಾಲಾಗಿದ್ದಾರೆ. ರಾಯಚೂರು ಜಿಲ್ಲೆ ಸಿಂಧನೂರು ತಾಲುಕಿನ ರೌಡಕುಂದಾ ಗ್ರಾಮದಲ್ಲಿ ದುರ್ಘಟನೆ ಸಂಭವಿಸಿದೆ.
ನಾಗರಾಜ್ (10),ಕಾರ್ತಿಕ (8) ಹಾಗೂ ರವಿಕುಮಾರ್ (7) ಕೆರೆಯಲ್ಲಿ ಕಾಲು ಜಾರಿಬಿದ್ದು ಮಕ್ಕಳು ಅಸುನೀಗಿದ್ದಾರೆ. ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದಾರೆ.
ಕ್ಷುಲ್ಲಕ ಕಾರಣಕ್ಕೆ ಅಕ್ಕನ ಮಗಳನ್ನೇ ಕೊಂದ ತಂಗಿ
ಲಾಕ್ ಡೌನ್ ಕಾರಣ ಎಲ್ಲರೂ ಮನೆಯಲ್ಲೇ ಇದ್ದರೂ ಏನು ಮಾಡಲಾಗದ ಸ್ಥಿತಿ ನಿರ್ಮಾಣವಾಗಿದೆ. ಗುರುವಾರ ಈ ಕುಟುಂಬದ ಮಟ್ಟಿಗೆ ಮಾತ್ರ ಕರಾಳ ದಿನವಾಗಿ ಮಾರ್ಪಟ್ಟಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ