ಹೆಬ್ಬಾವಿನ ಮರಿಯೆಂದು  ವಿಷದ ಹಾವು ಹಿಡಿದು ಕಚ್ಚಿಸಿಕೊಂಡ ವ್ಯಕ್ತಿ ಸಾವು!

Published : Sep 14, 2024, 02:22 PM IST
ಹೆಬ್ಬಾವಿನ ಮರಿಯೆಂದು  ವಿಷದ ಹಾವು ಹಿಡಿದು ಕಚ್ಚಿಸಿಕೊಂಡ ವ್ಯಕ್ತಿ ಸಾವು!

ಸಾರಾಂಶ

ಹೆಬ್ಬಾವಿನ ಮರಿ ಎಂದು ವಿಷದ ಹಾವಿನ ಮರಿ ಹಿಡಿದು ಕಚ್ಚಿಸಿಕೊಂಡಿದ್ದ ವ್ಯಕ್ತಿ ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಬಜ್ಪೆ ಎಂಬಲ್ಲಿ ನಡೆದಿದೆ.

ಮಂಗಳೂರು (ಸೆ.14): ಹೆಬ್ಬಾವಿನ ಮರಿ ಎಂದು ವಿಷದ ಹಾವಿನ ಮರಿ ಹಿಡಿದು ಕಚ್ಚಿಸಿಕೊಂಡಿದ್ದ ವ್ಯಕ್ತಿ ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಬಜ್ಪೆ ಎಂಬಲ್ಲಿ ನಡೆದಿದೆ.

 ರಾಮಚಂದ್ರ ಪೂಜಾರಿ (58) ಮೃತ ದುರ್ದೈವಿ. ಮೂಲತಃ ಬಂಟ್ವಾಳವರಾದ ರಾಮಚಂದ್ರ ಪೂಜಾರಿ ಇಲ್ಲಿನ ಮರವೂರಿನ ಮನೆಯೊಂದರಲ್ಲಿ ಸೆಕ್ಯೂರಿಟಿ ಕೆಲಸ ಮಾಡಿಕೊಂಡು ಜೀವನ ಸಾಗಿಸಿದ್ದ. ಕಳೆದ ಸೆ.4ರಂದು ಮಧ್ಯಾಹ್ನ ವೇಳೆ ಮನೆಯ ಮೆಟ್ಟಿಲು ಸಮೀಪ ಹಾವಿನ ಮರಿಯೊಂದು ಕಾಣಿಸಿಕೊಂಡಿದೆ. ಅದು ವಿಷದ ಹಾವಿನ ಮರಿಯೆಂಬುದು ತಿಳಿಯದೆ ಹೆಬ್ಬಾವಿನ ಮರಿ ಎಂದು ಭಾವಿಸಿ ಬರಿಗೈಲಿ ಹಿಡಿದಿದ್ದ ರಾಮಚಂದ್ರ ಪೂಜಾರಿ.

 

ಮಂಗಳೂರು: ಶ್ರೀಮತಿ ಶೆಟ್ಟಿ ಬರ್ಬರ ಕೊ*ಲೆ ಪ್ರಕರಣ; ಮೂವರ ಕೃತ್ಯ ಸಾಬೀತು, ಸೆ.17ಕ್ಕೆ ಶಿಕ್ಷೆ ಪ್ರಮಾಣ ಪ್ರಕಟ

 ಹಾವಿನ ಮರಿ ಹಿಡಿಯುವ ಸಂದರ್ಭ ಕೈಗೆ ಕಚ್ಚಿತ್ತು. ಆದರೂ ಅದು ಹೆಬ್ಬಾವಿನ ಮರಿ ಕಚ್ಚಿದರೂ ಏನಾಗಲ್ಲ ಎಂಬ ನಂಬಿಕೆಯಲ್ಲಿ ಚಿಕಿತ್ಸೆ ಪಡೆಯದೇ ನಿರ್ಲಕ್ಷ್ಯ ಮಾಡಿದ್ದ ಪೂಜಾರಿ. ಆದರೆ ವಿಷ ದೇಹ ವ್ಯಾಪಿಸಿ ತೀವ್ರ ಅಸ್ವಸ್ಥಗೊಂಡ ಬಳಿಕ ಆಸ್ಪತ್ರೆಗೆ ದಾಖಲಾಗಿದ್ದ. ಆದರೆ ಆ ಹೊತ್ತಿಗಾಗಲೇ ಕೈಮೀರಿ ಹೋಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯ್ತಾದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮಿರ್ಜಾ ಇಸ್ಮಾಯಿಲ್ ಮೊಮ್ಮಗಳ ಹಂತಕನಿಗೆ ಜೈಲೇ ಗತಿ, ಏನಿದು ಪ್ರಕರಣ?
ಬೆಂಗಳೂರಿನ ಬಾಡಿಗೆ ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ