
ರಾಮನಗರ, (ಜೂನ್.21): ಜಿಲ್ಲೆಯ ಅವ್ವೇರಹಳ್ಳಿ ರೆಸಾರ್ಟ್ವೊಂದರಲ್ಲಿ ಕೋವಿಡ್ 19 ನಿಯಮ ಉಲ್ಲಂಘಿಸಿ ರಾತ್ರಿ ಪಾರ್ಟಿ ಮಾಡುತ್ತಿದ್ದ 26 ಮಂದಿಯನ್ನು ರಾಮನಗರ ಗ್ರಾಮಾಂತ ಪೊಲೀಸರು ಬಂಧಿಸಿದ್ದಾರೆ.
ರಾಮನಗರದ ಅವ್ವೇರಹಳ್ಳಿ ರೆಸಾರ್ಟ್ನಲ್ಲಿ ಬೆಂಗಳೂರು ಮೂಲದ 6 ಮಂದಿ ಯುವತಿಯರು ಮತ್ತು 19 ಯುವಕರು ಮದ್ಯ ಸೇವಿಸಿ ಮೋಜು ಮಸ್ತಿ ಮಾಡುತ್ತಿದ್ದರು.
ಉದ್ಯಮಿ ಅಂತ ಬಿಲ್ಡಪ್ ಕೊಟ್ಟು ಯುವತಿಯರ ಸ್ನೇಹ ಬೆಳೆಸ್ತಿದ್ದ ಆಸಾಮಿಯ ಅಸಲಿ ಮುಖ ಬಯಲು
ಈ ಖಚಿತ ಮಾಹಿತಿ ಮೇರೆಗೆ ಶನಿವಾರ ತಡರಾತ್ರಿ ಪೊಲೀಸರು ಮೇಲೆ ದಾಳಿ ಮಾಡಿದ್ದು, ರೆಸಾರ್ಟ್ ಮಾಲೀಕ ಸೇರಿದಂತೆ 26 ಜನರನ್ನು ಬಂಧಿಸಿ ಮುಂದಿನ ಕ್ರಮಕೈಗೊಂಡಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಐಸಿಸಿ 188,269 ಮತ್ತು ಡಿಎಂ ಆಕ್ಟ್-2005 ಅಡಿಯಲ್ಲಿ ದೂರು ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ