
ಬೆಂಗಳೂರು, (ಸೆ.15): ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿ.ಡಿ. ಕೇಸ್ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಸೆ. 17ಕ್ಕೆ ಮುಂದೂಡಿದೆ.
ಪ್ರಕರಣದ ತನಿಖೆಗೆ ಎಸ್ಐಟಿ ರಚಿಸಿ ನಗರ ಪೊಲೀಸ್ ಆಯುಕ್ತರು ಹೊರಡಿಸಿದ ಆದೇಶ ಪ್ರಶ್ನಿಸಿ ವಕೀಲೆ ಗೀತಾ ಮಿಶ್ರಾ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾ. ಸತೀಶ್ ಚಂದ್ರ ಶರ್ಮ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆಗೆ ಕೈಗೆತ್ತುಕೊಂಡಿತು.
ಜಾರಕಿಹೊಳಿ ವಿರುದ್ಧ ಮತ್ತೊಂದು ಕೇಸ್ : ಹೊಸದಾಗಿ ವಿಚಾರಣೆಗೆ ಹೈಕೋರ್ಟ್ ಸೂಚನೆ
ವಾದ ಮಂಡನೆ ವೇಳೆ ಯುವತಿ ಪರ ಹಿರಿಯ ವಕೀಲೆ ಇಂದಿರಾ ಜೈಸಿಂಗ್ ಅವರು ಪದೇಪದೆ ಕೆಮ್ಮುತ್ತಿದ್ದನ್ನು ಗಮನಿಸಿದ ನ್ಯಾಯಪೀಠ, ನಿಮಗೆ ಹುಷಾರಿಲ್ಲವೇ? ಬೇಕಾದರೆ ಅರ್ಜಿ ವಿಚಾರಣೆಯನ್ನು ಮತ್ತೊಂದು ದಿನಕ್ಕೆ ನಿಗದಿಪಡಿಸೋಣ ಎಂದು ಹೇಳಿತು.
ಸ್ವಲ್ಪ ಆರೋಗ್ಯದ ಸಮಸ್ಯೆಯಿದ್ದು, ಒಂದು ದಿನ ವಿಚಾರಣೆ ಮುಂದೂಡಿದರೆ ಉತ್ತಮ ಎಂದು ಇಂದಿರಾ ಜೈಸಿಂಗ್ ತಿಳಿಸಿದರು. ಬಳಿಕ ಕೋರ್ಟ್ ಅರ್ಜಿ ವಿಚಾರಣೆಯನ್ನು ಸೆ.17ಕ್ಕೆ ಮುಂದೂಡಿತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ