ಇನ್ನೊಂದು ಟ್ವಿಸ್ಟ್; ಹೈಕೋರ್ಟ್ ಮೆಟ್ಟಿಲೇರಿದ ಸಿಡಿ, ಅರ್ಜಿ ಹಾಕಿದ್ದು ಬೇರೆಯವರು!

Published : Mar 29, 2021, 07:06 PM ISTUpdated : Mar 29, 2021, 07:08 PM IST
ಇನ್ನೊಂದು ಟ್ವಿಸ್ಟ್; ಹೈಕೋರ್ಟ್ ಮೆಟ್ಟಿಲೇರಿದ ಸಿಡಿ, ಅರ್ಜಿ ಹಾಕಿದ್ದು ಬೇರೆಯವರು!

ಸಾರಾಂಶ

ಹೈಕೋರ್ಟ್ ಮೆಟ್ಟಿಲೇರಿದ ಮಾಜಿ ಸಚಿವರ ಖಾಸಗಿ ವಿಡಿಯೋ ಸಿ.ಡಿ ಪ್ರಕರಣ/ ವಿಶೇಷ ತನಿಖಾ ತಂಡದ ರದ್ದು ಕೋರಿ ಪಿಐಎಲ್ / ವಕೀಲೆ ಗೀತಾ ಮಿಶ್ರಾ ರಿಂದ ಪಿಐಎಲ್ ಸಲ್ಲಿಕೆ/ ಹಿರಿಯ ವಕೀಲ ಜಿ.ಆರ್ ಮೋಹನ್ ಮೂಲಕ ಅರ್ಜಿ ಸಲ್ಲಿಕೆ/ ಪೊಲೀಸ್ ಕಮಿಷನರ್ ರಚಿಸಿರುವ ಎಸ್ಐಟಿ ಕಾನೂನಿಗೆ ವಿರುದ್ದವಾಗಿದೆ

ಬೆಂಗಳೂರುಮಾ.  29) ಸಿಡಿ ಸ್ಫೋಟ ಪ್ರಕರಣ  ಹೈಕೋರ್ಟ್ ಮೆಟ್ಟಿಲೇರಿದೆ.  ಮಾಜಿ ಸಚಿವರ ಖಾಸಗಿ ವಿಡಿಯೋ ಸಿ.ಡಿ ಪ್ರಕರಣಕ್ಕೆ ಸಂಬಂಧಿಸಿ ನೇಮಕವಾಗಿರುವ ವಿಶೇಷ ತನಿಖಾ ತಂಡ ರದ್ದು ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.

ವಕೀಲೆ ಗೀತಾ ಮಿಶ್ರಾ ರಿಂದ ಪಿಐಎಲ್ ಸಲ್ಲಿಕೆ ಮಾಡಿದ್ದಾರೆ. ಹಿರಿಯ ವಕೀಲ ಜಿ.ಆರ್ ಮೋಹನ್ ಮೂಲಕ ಅರ್ಜಿ ಸಲ್ಲಿಕೆಯಾಗಿದೆ. ಪೊಲೀಸ್ ಕಮಿಷನರ್ ರಚಿಸಿರುವ ಎಸ್ಐಟಿ ಕಾನೂನಿಗೆ ವಿರುದ್ದವಾಗಿದೆ. ಕಬ್ಬನ್ ಪಾರ್ಕ್ ಪೊಲೀಸ್ರಿಂದಲೇ ತನಿಖೆ ಮಾಡಲು ಆದೇಶಿಸಬೇಕು  ಎಂದು ಅರ್ಜಿಯಲ್ಲಿ ವಕೀಲೆ ಗೀತಾ ಮಿಶ್ರಾ ಮನವಿ ಮಾಡಿಕೊಂಡಿದ್ದಾರೆ.

ಜಾರಕಿಹೊಳಿ ಬ್ರದರ್ಸ್ ಹೈ ಅಲರ್ಟ್;  ಬಿಜೆಪಿ ನಾಯಕರೊಂದಿಗೂ ಮಾತುಕತೆ

ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಬಿಡುಗಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಎಸ್ ಐಟಿ ರಚನೆ ಮಾಡಿದ್ದು ಪ್ರಕರಣ ಕುರಿತು ಎಸ್ ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ಗಂಟೆಗೆ ಒಂದು ತಿರುವು ಪಡೆದುಕೊಳ್ಳುತ್ತಿರುವ ಪ್ರಕರಣ ಎಲ್ಲಿಂದ ಎಲ್ಲಿಗೆ ಬಂದು ನಿಂತಿದೆ ಎಂಬುದನ್ನು ಸರಳವಾಗಿ ಹೇಳಲು ಸಾಧ್ಯವಿಲ್ಲ. ಅನೇಕ  ಗೋಜಲು ಮತ್ತು ಗೊಂದಲ ಎದುರಾಗುತ್ತಿದ್ದು ಸಿಡಿ ಲೇಡಿ ಹಾಜರಾದ ಮೇಲೆ ಮಾತ್ರ ಸ್ಪಷ್ಟನೆ ಸಿಗಲು ಸಾಧ್ಯ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಭದ್ರಾವತಿ: ಜೈ ಭೀಮ್ ನಗರದಲ್ಲಿ ಪ್ರೇಮಿಗಳ ವಿಚಾರಕ್ಕೆ ರಕ್ತಪಾತ: ಇಬ್ಬರು ದುರ್ಮರಣ!
ಕಾರವಾರ: ಉಂಡ‌ ಮನೆಗೆ ದ್ರೋಹ; ಮನೆ ಕೆಲಸದವನಿಂದಲೇ ಲಕ್ಷಾಂತರ ರೂಪಾಯಿ ಕದ್ದವನ ಬಂಧನ