
ಶಿವಮೊಗ್ಗ(ಏ. 06) ಸಿಡಿ ಕೇಸ್ ನಲ್ಲಿ ಎಸ್ಐಟಿ ರಚನೆ ಮಾಡಿದ ಉದ್ದೇಶ ಸ್ವತಂತ್ರ ತನಿಖೆ ನಡೆಸುವುದು. ಎಸ್ಐಟಿ ತನಿಖೆ ಬಗ್ಗೆ ಬೆಳಿಗ್ಗೆ, ಸಂಜೆ ಮತಾನಾಡಬಾರದು. ಎಸ್ಐಟಿಯವರು ಸ್ವತಂತ್ರ ವಾಗಿ ನಿಷ್ಪಕ್ಷಪಾತವಾಗಿ ಕಾನೂನಿನ ಪ್ರಕಾರ ತನಿಖೆ ನಡೆಸುತ್ತಾರೆ ಎಂದು ಡಿಜಿ ಪ್ರವೀಣ್ ಸೂದ್ ಹೇಳಿದ್ದಾರೆ.
ಎಸ್ಐಟಿ ಎನು ಕೆಲಸ ಮಾಡುತ್ತಾರೆ ಎಂದು ತನಿಖೆ ಮುಗಿದ ನಂತರ ಮಾತನಾಡಬೇಕು. ಪ್ರತಿದಿನ ಎಸ್ಐಟಿ ತನಿಖೆ ಬಗ್ಗೆ ಮಾತನಾಡಬಾರದು. ಪ್ರತಿದಿನ ಎಸ್ ಐಟಿ ತನಿಖೆ ಬಗ್ಗೆ ಮಾತನಾಡುವುದು ಸೂಕ್ತವಲ್ಲ. ಎಸ್ಐಟಿ ತನಿಖೆ ನಡೆಸಿ ನ್ಯಾಯಾಲಯಕ್ಕೆ ವರದಿ ನೀಡುತ್ತದೆ. ತನಿಖೆ ನಡೆಯುವಾಗ ಟೀಕೆ ಟಿಪ್ಪಣಿ ಮಾಡುವುದು ಸೂಕ್ತವಲ್ಲ, ಸರಿಯಲ್ಲ. ಎಸ್ಐಟಿ ತನಿಖೆ ಕುರಿತಂತೆ ನ್ಯಾಯಾಲಯಕ್ಕೆ ಮಾಹಿತಿ ನೀಡುತ್ತಾರೆ ಎಂದು ತಿಳಿಸಿದರು.
ಸಿಡಿ ಸ್ಫೋಟದ ಹಿಂದೆ ಯಾರಿದ್ದಾರೆ? ಯುವತಿ ಹೇಳಿಕೆಯಲ್ಲಿ ಸಿಕ್ಕ ಅಂಶ
ಶಿವಮೊಗ್ಗದ ಹುಣಸೋಡು ಸ್ಪೋಟ ಪ್ರಕರಣ ದ ಕುರಿತು ಶೀಘ್ರದಲ್ಲೇ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಲಾಗುತ್ತದೆ. ಶಿವಮೊಗ್ಗ ನಗರಕ್ಕೆ ಪೋಲಿಸ್ ಕಮಿಷನರೇಟ್ ಮಾಡುವ ಕುರಿತು ಸರ್ಕಾರದ ಹಂತದಲ್ಲಿ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ