
ಬೆಂಗಳೂರು(ಜ.08): ತಮ್ಮ ಪರಿಚಿತ ಯುವತಿಗೆ ಬಲವಂತದಿಂದ ಮದ್ಯ ಕುಡಿಸಿ ಅತ್ಯಾಚಾರ ಎಸಗಿದ ಆರೋಪದ ಮೇರೆಗೆ ಹಾಸನ ಜಿಲ್ಲೆ ಸಕಲೇಶಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡರೊಬ್ಬರ ಮೇಲೆ ಅಶೋಕನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಯನಗರದ ನಿವಾಸಿ ಸೋಮಶೇಖರ್ ಅಲಿಯಾಸ್ ಜಿಮ್ ಸೋಮನ ಮೇಲೆ ಆರೋಪ ಕೇಳಿ ಬಂದಿದ್ದು, ಕೃತ್ಯ ಬೆಳಕಿಗೆ ಬಂದ ಬಳಿಕ ತಲೆಮರೆಸಿಕೊಂಡಿರುವ ಆರೋಪಿ ಪತ್ತೆಗಾಗಿ ಪೊಲೀಸರು ಹುಡುಕಾಡುತ್ತಿದ್ದಾರೆ.
ಮಹಿಳೆಯ ಮೇಲೆ ಅತ್ಯಾಚಾರ, ಭಜರಂಗದಳದ ಮುಖಂಡನ ಬಂಧನ!
ಕೆಲ ತಿಂಗಳ ಹಿಂದೆ ಅಶೋ ಕನಗರ ಸಮೀಪದ ಹೋಟೆಲ್ಗೆ ಸಂತ್ರಸ್ತೆಯನ್ನು ಮಾತುಕತೆ ನೆಪದಲ್ಲಿ ಕರೆಸಿ ಸೋಮ ಈ ಕೃತ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಹಲವು ದಿನಗಳ ಹಿಂದೆ ತನ್ನ ಸ್ನೇಹಿತೆ ಮೂಲಕ ಜಿಮ್ ಸೋಮನಿಗೆ ಗೆ ಸಂತ್ರಸ್ತೆ ಪರಿಚಯವಾಗಿದ್ದಳು. ಈ ಸ್ನೇಹದಲ್ಲಿ ತನ್ನ ಮದುವೆಗೆ ಸುಮಾರು 6 ಲಕ್ಷ ರು. ಸಾಲ ಕೇಳಲು ಸೋಮನನ್ನು ಭೇಟಿಯಾಗಿದ್ದಳು. ಆಗ ಮದುವೆಗೆ ಸಹಾಯ ಮಾಡುವುದಾಗಿ ಹೇಳಿ ಯುವತಿ ಜತೆ ಆತ ಸಲುಗೆ ಬೆಳೆಸಿದ್ದಾನೆ. ನಂತರ ಕೆಲ ದಿನಗಳ ಹಿಂದೆ ಅಶೋಕನಗರ ಸಮೀಪದ ಹೋಟೆಲ್ ಗೆ ಮಾತುಕತೆ ನೆಪದಲ್ಲಿ ಕರೆಸಿದ್ದಾನೆ. ಈ ಆಹ್ವಾನದ ಮೇರೆಗೆ ಹೋಟೆಲ್ಗೆ ತೆರಳಿ ಸಂತ್ರಸ್ತೆಗೆ ಬಲವಂತ ವಾಗಿ ಮದ್ಯ ಕುಡಿಸಿ ಜಿಮ್ ಸೋಮ ಅತ್ಯಾಚಾರ ಎಸಗಿದ್ದಾನೆ ಎಂದು ದೂರಿನಲ್ಲಿ ಸಂತ್ರಸ್ತೆ ಆರೋಪಿಸಿದ್ದಾರೆ ಎನ್ನಲಾಗಿದೆ.
ಮೃತದೇಹದ ಜೊತೆ ಲೈಂಗಿಕ ಕ್ರಿಯೆ ಅಪರಾಧ ಅಲ್ಲ: ರೇಪ್ ಆರೋಪಿಯ ಖುಲಾಸೆ ಮಾಡಿದ ಹೈಕೋರ್ಟ್
ಸಕಲೇಶಪುರ ಕ್ಷೇತ್ರದಲ್ಲಿ ಸ್ಪರ್ಧಿಸಿ ಪರಾಜಿತನಾಗಿದ್ದ
ಬಡ್ಡಿ ಹಾಗೂ ರಿಯಲ್ ಎಸ್ಟೇಟ್ ಸೇರಿ ಇತರೆ ವ್ಯವಹಾರಗಳಲ್ಲಿ ತೊಡಗಿದ್ದ ಜಿಮ್ ಸೋಮ, ರಾಜಕೀಯದಲ್ಲೂ ಸಕ್ರಿಯವಾಗಿದ್ದ. 2018ರಲ್ಲಿ ಸಕಲೇಶಪುರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಅಲ್ಪ ಮತಗಳಿಂದ ಆತ ಪರಾಜಿತನಾಗಿದ್ದ. ಅಲ್ಲದೆ 2019ರಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಕೆಡವಲು ಸಂಚು ರೂಪಿಸಿದ್ದ ಆರೋಪಕ್ಕೆ ಜಿಮ್ ಸೋಮ ತುತ್ತಾಗಿದ್ದ. ಆಗ ರಾಜಕೀಯ ವಲಯದಲ್ಲಿ ಆತನ ಹೆಸರು ಭಾರೀ ಚರ್ಚೆಗೆ ಬಂದಿತ್ತು. ನಂತರ ನೇಪಥ್ಯಕ್ಕೆ ಸೇರಿದ್ದ ಜಿಮ್ ಸೋಮ್ ಮತ್ತೆ ಅತ್ಯಾಚಾರ ಆರೋಪ ಹೊತ್ತು ಸದ್ದು ಮಾಡಿದ್ದಾನೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ