
ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಗಂಡನೇ ಹೆಂಡತಿಯನ್ನು ಕೊಲೆಗೈದಿರುವ ಘಟನೆ ರಾಜಧಾನಿ ಬೆಂಗಳೂರಿನ ಎಚ್ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹೆಂಡತಿಯನ್ನು ಕೊಲೆಗೈದ ಬಳಿಕ ಪತಿಯೂ ಸಾವಿಗೆ ಶರಣಾಗಿದ್ದಾನೆ.
ಮೃತ ದುರ್ವೈವಿಗಳನ್ನು ಶೃತಿ (30), ರಾಘವೇಂದ್ರ (36) ಎಂದು ಗುರುತಿಸಲಾಗಿದೆ. ರೀಲ್ಸ್ ನೋಡುವ ವಿಚಾರಕ್ಕೆ ತಡರಾತ್ರಿ ಪತಿ ಮತ್ತು ಪತ್ನಿ ಮಧ್ಯೆ ಗಲಾಟೆ ಶುರುವಾಗಿದ್ದು, ಈ ಸಂದರ್ಭದಲ್ಲಿ ಕೋಪದ ಕೈಗೆ ಬುದ್ದಿ ಕೊಟ್ಟ ಪತಿ, ಬಿಯರ್ ಬಾಟೆಲ್ನಿಂದ ಹೆಂಡತಿಯ ತಲೆಗೆ ಹೊಡೆದು ಕೊಲೆಗೈದಿರುವ ಆರೋಪ ಕೇಳಿ ಬಂದಿದೆ. ಹೆಂಡತಿಯನ್ನು ಕೊಲೆಗೈದ ಬಳಿಕ ಪತಿಯೂ ಕೂಡ ನೇಣಿಗೆ ಶರಣಾಗಿದ್ದಾನೆ.
ಘಟನೆ ಸಂಬಂಧ ಹೆಚ್ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಭೇಟಿ ನೀಡಿದ ಪೊಲಿಸರು ಮೃತದೇಹಗಳ ಮರಣೋತ್ತರ ಪರೀಕ್ಷಗೆ ರವಾನೆ ಮಾಡಿದ್ದಾರೆ. ಮೃತ ದಂಪತಿ ಮೂಲತಃ ದಾವಣಗೆರೆ ಮೂಲದವರು ಎಂದು ತಿಳಿದು ಬಂದಿದ್ದು, ಪತಿ ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದರೆ, ಪತ್ನಿ ಸ್ಥಳೀಯ ಅಪಾರ್ಟ್ಮೆಂಟ್ನಲ್ಲಿ ಮನೆಕೆಲಸ ಮಾಡುತ್ತಾ ಜೀವನ ನಡೆಸುತ್ತಿದ್ದರು.
ಇನ್ನು, ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಮಕ್ಕಳನ್ನು ಅಜ್ಜನ ಮನೆಯಲ್ಲಿ ಬಿಟ್ಟಿದ್ದ ದಂಪತಿ ಬೆಂಗಳೂರಿಗೆ ಬಂದು HAL ಪೊಲೀಸ್ ಠಾಣೆ ವ್ಯಾಪ್ತಿಯ ವಿಭೂತಿಪುರದಲ್ಲಿ ಪ್ರತ್ಯೇಕವಾಗಿ ಜೀವನ ನಡೆಸುತ್ತಿದ್ದರು. ಈ ಹಿಂದೆಯೂ ದಂಪತಿ ನಡುವೆ ಮೊಬೈಲ್ ನೋಡುವ ವಿಚಾರಕ್ಕೆ ಗಲಾಟೆ ನಡೆದಿತ್ತು ಎನ್ನಲಾಗಿದ್ದು, ನಿನ್ನೆ ತಡರಾತ್ರಿ ಕೂಡ ಪತ್ನಿ ಮೊಬೈಲ್ ನಲ್ಲಿ ರೀಲ್ಸ್ ನೋಡುತ್ತಿದ್ದನ್ನು ಪ್ರಶ್ನಿಸಿದ್ದ ಪತಿ, ಯಾವಾಗಲೂ ಮೊಬೈಲ್ ನಲ್ಲಿ ರೀಲ್ಸ್ ನೋಡ್ತಿಯಾ ಅಂತ ಬಿಯರ್ ಬಾಟಲಿಯಿಂದ ಹೊಡೆದು ಕೊಲೆ ಮಾಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಸದ್ಯ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ