ರೇಣುಕಾಸ್ವಾಮಿ ಕೊಲೆ ಆರೋಪಿಗಳು 13ರಲ್ಲ 17 ಮಂದಿ, ನಾಪತ್ತೆಯಾದವರಿಗೆ ಶೋಧ

Published : Jun 12, 2024, 06:51 PM ISTUpdated : Jun 14, 2024, 11:18 AM IST
ರೇಣುಕಾಸ್ವಾಮಿ ಕೊಲೆ ಆರೋಪಿಗಳು 13ರಲ್ಲ 17 ಮಂದಿ, ನಾಪತ್ತೆಯಾದವರಿಗೆ ಶೋಧ

ಸಾರಾಂಶ

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ 13 ಅಲ್ಲ 17 ಮಂದಿ ಭಾಗಿಯಾಗಿರುವುದು ಸ್ಪಷ್ಟವಾಗಿದೆ. ನಾಲ್ವರು ತಲೆ ಮರೆಸಿಕೊಂಡಿದ್ದು ಹುಡುಕಾಟ ತೀವ್ರ ಗೊಂಡಿದೆ.

ಬೆಂಗಳೂರು (ಜೂ.11): ಬೆಂಗಳೂರಿನಲ್ಲಿ ಚಿತ್ರದುರ್ಗದ ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣ ಆರೋಪದ ಹಿನ್ನೆಲೆ ನಟ ದರ್ಶನ್ (Actor Darshan), ಆತನ ಎರಡನೇ ಪತ್ನಿ ಪವಿತ್ರಾ ಗೌಡ  (Darshan Second Wife Pavithra Gowda) ಸೇರಿ ಒಟ್ಟು 13 ಮಂದಿಯನ್ನುಈವರೆಗೆ ಬಂಧಿಸಲಾಗಿದ್ದು, 6 ದಿನಗಳ ಪೊಲೀಸ್ ಕಸ್ಟಡಿಯಲ್ಲಿದ್ದಾರೆ.  ಆದರೆ ಈಗ  ಈ ಕೊಲೆ ಪ್ರಕರಣದಲ್ಲಿ 13 ಅಲ್ಲ 17 ಮಂದಿ ಆರೋಪಿಗಳಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಪ್ರಕರಣದಲ್ಲಿ 4 ಮಂದಿ ತಲೆ ಮರೆಸಿಕೊಂಡಿದ್ದು, ಅವರಿಗಾಗಿ ತೀವ್ರ ಶೋಧ ನಡೆಯುತ್ತಿದೆ.

ಕೊಲೆ ಆರೋಪಿಗಳಾದ ದರ್ಶನ್, ಎರಡನೇ ಪತ್ನಿ ಪವಿತ್ರಾ ವಯಸ್ಸಿನ ಅಂತರದ ಬಗ್ಗೆ ಇನ್ನಿಲ್ಲದ ಹುಡುಕಾಟ!

ಈ ಭೀಭತ್ಸವಾದ ಕೊಲೆ ಪ್ರಕರಣದಲ್ಲಿ  33 ವರ್ಷದ ಪವಿತ್ರಾ ಗೌಡ ಮೊದಲ ಆರೋಪಿಯಾಗಿದ್ದರೆ, 47 ವರ್ಷದ ನಟ ದರ್ಶನ್ ಎರಡನೇ ಆರೋಪಿಯಾಗಿದ್ದರೆ. ಇದರಲ್ಲಿ ಎ6 ಆರೋಪಿಯಿಂದ ಹಿಡಿದು ಎ9 ರವರೆಗಿನ ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ. ಅಂದರೆ ಕ್ರಮವಾಗಿ ಜಗದೀಶ್​ ಅಲಿಯಾಸ್ ಜಗ್ಗ, ಅನು, ರವಿ ಹಾಗು ರಾಜು ತಲೆ ಮರೆಸಿಕೊಂಡಿದ್ದಾರೆ.

ಕೊಲೆಯಾದ ರೇಣುಕಾಸ್ವಾಮಿಗೆ ಖೆಡ್ಡಾ ತೋಡಲು ಪವಿತ್ರಾ ಮತ್ತು ದರ್ಶನ್ ಗ್ಯಾಂಗ್ ನಿಂದ ಖತರ್ನಾಕ್ ಪ್ಲಾನ್!

ಆರೋಪಿಗಳ ಪಟ್ಟಿ ಇಂತಿದೆ.
A1.ಪವಿತ್ರಾಗೌಡ, A2.ದರ್ಶನ್, A3.ಪವನ್ ಅಲಿಯಾಸ್ ಪುಟ್ಟಸ್ವಾಮಿ ,A4.ರಾಘವೇಂದ್ರ ,A5.ನಂದೀಶ್,A6.ಜಗದೀಶ್  ಅಲಿಯಾಸ್ ಜಗ್ಗ(ಸಿಕ್ಕಿಲ್ಲ), A7.ಅನು (ಸಿಕ್ಕಿಲ್ಲ), A8.ರವಿ (ಸಿಕ್ಕಿಲ್ಲ), A9.ರಾಜು (ಸಿಕ್ಕಿಲ್ಲ), A10.ವಿನಯ್, A11.ನಾಗರಾಜು, A12.ಲಕ್ಷ್ಮಣ್, A13.ದೀಪಕ್, A14.ಪ್ರದೋಶ್, A15.ಕಾರ್ತಿಕ್, A16.ಕೇಶವ ಮೂರ್ತಿ, A17.ನಿಖಿಲ್ ನಾಯಕ್.

ಇಂದು ಕೊಲೆ ಮಾಡಿರುವ ಜಾಗ ಪಟ್ಟಣಗೆರೆಯ ನಿರ್ಜನ ಪ್ರದೇಶದ ಶೆಡ್‌ ಗೆ ಈವರೆಗೆ ಬಂಧಿತರಾಗಿರುವ 13 ಆರೋಪಿಗಳು ಕರೆದುಕೊಂಡು ಹೋಗಿ ಸ್ಥಳ ಮಹಜರು ನಡೆಸಲಾಯ್ತು. ಬಿಗಿ ಪೊಲೀಸ್‌ ಭದ್ರತೆಯಲ್ಲಿ ಆರೋಪಿಗಳನ್ನು ಕರೆದೊಯ್ದು ಇಂಚಿಚು ಮಾಹಿತಿ ಕಲೆ ಹಾಕಲಾಯ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬಾಲಿವುಡ್ ನಿರ್ದೇಶಕ ವಿಕ್ರಂ ಭಟ್, ಪತ್ನಿ ಶ್ವೇತಾಂಬರಿ ಭಟ್ ಬಂಧನ; ಅಂತಿಂಥ ವಂಚನೆ ಕೇಸಲ್ಲ ಇದು ಅಂತೀರಾ?!
ಕೊಪ್ಪಳ: ಹಸೆಮಣೆ ಏರಬೇಕಿದ್ದ ಜೋಡಿ ಮಸಣಕ್ಕೆ - ಪ್ರಿ-ವೆಡ್ಡಿಂಗ್ ಶೂಟಿಂಗ್ ಮುಗಿಸಿ ವಾಪಸಾಗುವಾಗ ಭೀಕರ ದುರಂತ!