ರೇಣುಕಾಚಾರ್ಯ ಅಣ್ಣನ ಮಗ ಚಂದ್ರು ದೇಹ ಕೊಳೆತ ಸ್ಥಿತಿಯಲ್ಲಿ ಕಾರಿನ ಹಿಂಬದಿ ಸೀಟಿನಲ್ಲಿ ಪತ್ತೆ

Published : Nov 03, 2022, 05:07 PM ISTUpdated : Nov 03, 2022, 05:23 PM IST
ರೇಣುಕಾಚಾರ್ಯ ಅಣ್ಣನ ಮಗ ಚಂದ್ರು ದೇಹ ಕೊಳೆತ ಸ್ಥಿತಿಯಲ್ಲಿ ಕಾರಿನ ಹಿಂಬದಿ ಸೀಟಿನಲ್ಲಿ ಪತ್ತೆ

ಸಾರಾಂಶ

Renukacharya's brother's son missing case: ಶಾಸಕ ರೇಣುಕಾಚಾರ್ಯ ಅಣ್ಣನ ಮಗ ಚಂದ್ರಶೇಖರ್ ಕಾರು ಭದ್ರಾ ಮೇಲ್ದಂಡೆ ನಾಲೆಯಲ್ಲಿ ಸಿಕ್ಕಿದೆ. ಜತೆಗೆ ಕಾರಿನಲ್ಲಿ ಶವವೊಂದು ಇರುವುದು ಖಾತರಿಯಾಗಿದೆ. ಕಾರಿನ ಹಿಂಬದಿ ಸೀಟಿನಲ್ಲಿ ಚಂದ್ರಶೇಖರ್‌ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ದಾವಣಗೆರೆ: ಶಾಸಕ, ಮಾಜಿ ಸಚಿವ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಅಣ್ಣನ ಮಗ ಚಂದ್ರಶೇಖರ್‌ ನಾಪತ್ತೆ ಪ್ರಕರಣದಲ್ಲಿ ಪ್ರಮುಖ ಸುಳಿವೊಂದು ಪೊಲೀಸರಿಗೆ ಸಿಕ್ಕಿದೆ. ಪೊಲೀಸ್‌ ಮೂಲಗಳ ಪ್ರಕಾರ ಚಂದ್ರಶೇಖರ್‌ ಕಾರು ನಾಲೆಯಲ್ಲಿ ಸಿಕ್ಕಿದೆ. ಕಾಲುವೆ ಬಳಿ ಕಾರಿನ ಬಿಡಿ ಭಾಗಗಳು ಪತ್ತೆಯಾಗಿದ್ದವು. ಇದೇ ಸುಳಿವನ್ನು ಹಿಂಬಾಲಿಸಿದ ಪೊಲೀಸರಿಗೆ ಕ್ರೆಟಾ ಕಾರು ಪತ್ತೆಯಾಗಿದೆ. ಕಾರಿನಲ್ಲಿ ಚಂದ್ರಶೇಖರ್‌ ಶವ ಕೂಡ ಪತ್ತೆಯಾಗಿದ್ದು, ದೇಹ ಕೊಳೆತು ಹೋಗಿದೆ. ಹಿಂಬದಿ ಸೀಟಿನಲ್ಲಿ ಶವ ಸಿಕ್ಕಿರುವುದು ಸಾಕಷ್ಟು ಸಂಶಯಗಳನ್ನು ಸೃಷ್ಟಿಸಿದೆ. ಅವರೇ ಆತ್ಮಹತ್ಯೆ ಮಾಡಿಕೊಂಡಿರಲು ಸಾಧ್ಯವಿಲ್ಲ. ಕೊಲೆ ಮಾಡಿ ನಂತರ ಚಂದ್ರಶೇಖರ್‌ನನ್ನು ಕಾರಿನಲ್ಲಿ ಕೂರಿಸಿ ನಾಲೆಗೆ ತಳ್ಳಿರುವ ಸಾಧ್ಯತೆಯಿದೆ.

ಚಂದ್ರಶೇಖರ್‌ ಭಾನುವಾರ ರಾತ್ರಿಯಿಂದ ಕಾಣೆಯಾಗಿದ್ದರು. ಶಿವಮೊಗ್ಗದ ಗೌರಿಗದ್ದೆಯಲ್ಲಿರುವ ವಿನಯ್‌ ಗುರೂಜಿ ಆಶ್ರಮಕ್ಕೆ ಭೇಟಿ ನೀಡಿ ವಾಪಸ್‌ ಹೊನ್ನಾಳಿಗೆ ಬಂದ ನಂತರ ಅವರು ಅಲ್ಲಿಂದ ನಾಪತ್ತೆಯಾಗಿದ್ದರು. ಇಂದು ಬೆಳಗ್ಗೆಯಷ್ಟೇ ಚಂದ್ರಶೇಖರ್‌ ಸ್ನೇಹಿತ ಕಿರಣ್‌ನನ್ನು ಪೊಲೀಸರು ಬಂಧಿಸಿದ್ದರು. ಮೂರು ದಿನಗಳಿಂದ ಕಿರಣ್‌ನನ್ನು ವಿಚಾರಣೆಗೊಳಪಡಿಸಲಾಗಿತ್ತು. 

ರೇಣುಕಾಚಾರ್ಯ ಅಣ್ಣನ ಮಗ ನಾಪತ್ತೆಯಾಗಿ ನಾಲ್ಕು ದಿನಗಳಾದರೂ ಇನ್ನೂ ಯಾವುದೇ ಕ್ಲೂ ಸಿಕ್ಕಿರಲಿಲ್ಲ. ಶಿವಮೊಗ್ಗಕ್ಕೆ ಹೋಗಿ ಬರುತ್ತೇನೆ ಎಂದು ಹೊರಟಿದ್ದ ಚಂದ್ರಶೇಖರ್‌ ವಾಪಸ್‌ ಮನೆ ತಲುಪಲೇ ಇಲ್ಲ. ಈ ಬಗ್ಗೆ ಪೊಲೀಸರು ವಿಶೇಷ ತಂಡ ರಚಿಸಿದ್ದಾರಾದರೂ ಇದುವರೆಗೂ ಯಾವುದೇ ಲೀಡ್‌ ಸಿಕ್ಕಿರಲಿಲ್ಲ. ಆದರೆ ಸ್ನೇಹಿತ ಕಿರಣ್‌ ಬಂಧನದ ನಂತರ ವಿಚಾರಣೆ ವೇಳೆ ಸುಳಿವು ಸಿಕ್ಕಿರುವ ಸಾಧ್ಯತೆಯಿದೆ. 

 

ರೇಣುಕಾಚಾರ್ಯ ತಮ್ಮ ಅಣ್ಣನ ಮಗ ಚಂದ್ರಶೇಖರ್‌ರನ್ನು ನೆನೆದು ಬಿಕ್ಕಿ ಬಿಕ್ಕಿ ಅಳುತ್ತಿದ್ದಾರೆ. ಎಲ್ಲರಂತಲ್ಲ ನನ್ನ ಮಗ, ತುಂಬಾ ಒಳ್ಳೆಯ ವ್ಯಕ್ತಿ ಎಂದು ಅವರು ನೋವು ತೊಂಡಿದ್ದಾರೆ. ಸುವರ್ಣ ನ್ಯೂಸ್‌ನೊಂದಿಗೆ ಮಾತನಾಡಿದ ಅವರು, ನಾನು ಬೇಗ ಸಿಟ್ಟಾಗಿ ಜಗಳವಾಡುತ್ತೇನೆ. ಆದರೆ ಅವನು ನನ್ನಂತಲ್ಲ. ತುಂಬಾ ತಾಳ್ಮೆ ಹೊಂದಿರುವ ವ್ಯಕ್ತಿ. ಆತ ನಾಪತ್ತೆಯಾದ ದಿನದಿಂದ ನೆಮ್ಮದಿಯಿಲ್ಲ. ಎಲ್ಲರೂ ಕರೆ ಮಾಡಿ ಮಗ ಸಿಗುತ್ತಾನೆ ಎಂಬ ಭರವಸೆ ನೀಡುತ್ತಿದ್ದಾರೆ. ಎಂದಿಗೂ ಈ ರೀತಿ ಹೇಳದೇ ಕೇಳದೇ ಹೋದವನಲ್ಲ ಎಂದು ತಮ್ಮ ಭಯವನ್ನು ವ್ಯಕ್ತಪಡಿಸಿದ್ದಾರೆ. 

ರೇಣುಕಾಚಾರ್ಯ ಮಾತಿನಲ್ಲೂ ಸ್ವಲ್ಪ ಗೊಂದಲಗಳಿವೆ. ರಾಜಕೀಯ ದ್ವೇಷದಿಂದ ಅಣ್ಣನ ಮಗನನ್ನು ಅಪಹರಿಸಲಾಗಿದೆಯಾ ಎಂಬ ಬಗ್ಗೆಯೂ ಅನುಮಾನಗಳು ಸೃಷ್ಟಿಯಾಗಿವೆ. ಶಿವಮೊಗ್ಗದ ವಿನಯ್‌ ಗುರೂಜಿ ಆಶ್ರಮಕ್ಕೆ ಭೇಟಿ ನೀಡಿ ವಾಪಸ್‌ ಹೊನ್ನಾಳಿಗೆ ಬಂದ ನಂತರ ಚಂದ್ರಶೇಖರ್‌ ನಾಪತ್ತೆಯಾಗಿದ್ದಾರೆ. ಇದರ ನಡುವೆ ಕಿರಣ್‌ ಎಂಬ ಸ್ನೇಹಿತನನ್ನು ಚಂದ್ರಶೇಖರ್‌ ಡ್ರಾಪ್‌ ಮಾಡಿದ್ದ. ನಂತರ ಹೊನ್ನಾಳಿಗೆ ವಾಪಸ್‌ ತಲುಪಿದ್ದ. ಹೊನ್ನಾಳಿ ತಲುಪಿದ ನಂತರವೂ ಇಬ್ಬರು ಸ್ನೇಹಿತರ ಜೊತೆ ಮಾತನಾಡಿದ್ದಾನೆ. ಅದಾದ ನಂತರ ಫೋನ್‌ ಸ್ವಿಚ್‌ ಆಫ್‌ ಆಗಿದೆ, ಆತ ಎಲ್ಲಿ ಹೋಗಿದ್ದಾನೆ ಎಂಬ ಕುರುಹೂ ಸಿಗುತ್ತಿಲ್ಲ. 

ಏನಿದು ಪ್ರಕರಣ?:

ಮಾಜಿ ಸಚಿವ, ಹೊನ್ನಾಳಿ ಕ್ಷೇತ್ರದ ಶಾಸಕ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಸಹೋದರ, ಹಿರಿಯ ಗುತ್ತಿಗೆದಾರ ಎಂ.ಪಿ.ರಮೇಶ್‌ರ ಪುತ್ರ ಎಂ.ಆರ್.ಚಂದ್ರಶೇಖರ ಎರಡು ದಿನಗಳಿಂದ ನಾಪತ್ತೆಯಾಗಿದ್ದು, ಇಡೀ ಶಾಸಕರ ಕುಟುಂಬ ಈಗ ತೀವ್ರ ಆತಂಕಕ್ಕೆ ಸಿಲುಕಿದೆ. 

ಶಿವಮೊಗ್ಗ ಜಿಲ್ಲೆಯ ಗೌರಿಗದ್ದೆಗೆ ಹೋಗಿ ಬರುವುದಾಗಿ ಅ.೩೦ರಂದು ರಾತ್ರಿ ೭.೩೦ಕ್ಕೆ ಹೋದ ಎಂ.ಆರ್.ಚಂದ್ರಶೇಖರ(ಚಂದ್ರು) ಈವರೆಗೆ ಮನೆಗೆ ಬಂದಿಲ್ಲ. ಹೊನ್ನಾಳಿಯಿಂದ ಮನೆ ಬಿಟ್ಟ ಸ್ವಲ್ಪ ಹೊತ್ತಿನಲ್ಲೇ ಚಂದ್ರು ಮೊಬೈಲ್ ಸ್ವಿಚ್ ಆ- ಆಗಿದ್ದು, ಎರಡು ದಿನವಾದರೂ ಮನೆಗೆ ಬರದಿದ್ದರಿಂದ, ಮೊಬೈಲ್ ಸ್ವಿಚ್ ಆ- ಆಗಿದ್ದರಿಂದ ಇಡೀ ಕುಟುಂಬ ಆತಂಕದಿಂದ ಗೌರಗದ್ದೆ ಶಿವಮೊಗ್ಗ, ಹೊನ್ನಾಳಿ ಇತರೆಡೆ ಎಲ್ಲಾ ಕಡೆ ವಿಚಾರಿಸಿದರೂ ಪ್ರಯೋಜನವಾಗದ್ದರಿಂದ ತೀವ್ರ ಆತಂಕಕ್ಕೀಡಾಗಿದೆ.

ಇದನ್ನೂ ಓದಿ: ರೇಣುಕಾಚಾರ್ಯ ಅಣ್ಣನ ಮಗ ನಾಪತ್ತೆ ಪ್ರಕರಣ: ಚಂದ್ರಶೇಖರ್‌ ಸ್ನೇಹಿತ ಕಿರಣ್‌ ಬಂಧನ

ಚಂದ್ರು ಸ್ನೇಹಿತರು, ಪರಿಚಯಸ್ಥರು, ಬಂಧು-ಬಳಗ ಹೀಗೆ ಎಲ್ಲರಿಗೂ ಸಂಪರ್ಕಿಸಿ, ಎಲ್ಲಾ ಕಡೆ ಹುಡುಕಾಡಿದರೂ ಮಗ ಪತ್ತೆಯಾಗದ ಹಿನ್ನೆಲೆಯಲ್ಲಿ ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಚಂದ್ರು ತಂದೆ, ಗುತ್ತಿಗೆದಾರರೂ ಆಗಿರುವ ಎಂ.ಪಿ.ರಮೇಶ್, ಶಾಸಕ ಎಂ.ಪಿ.ರೇಣುಕಾಚಾರ್ಯ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಹೊನ್ನಾಳಿ ಪೊಲೀಸರು ವೃತ್ತ ನಿರೀಕ್ಷಕ ಸಿದ್ದೇಗೌಡ ನೇತೃತ್ವದಲ್ಲಿ ನಾಪತ್ತೆಯಾಗಿರುವ ಚಂದ್ರಶೇಖರಗಾಗಿ ಶೋಧ ನಡೆಸಿದ್ದಾರಾದರೂ ಸದ್ಯಕ್ಕೆ ಯಾವುದೇ ಸುಳಿವು ಸಿಕ್ಕಿಲ್ಲ ಎನ್ನಲಾಗಿದೆ.

ಇದನ್ನೂ ಓದಿ: ಮಾಜಿ ಸಚಿವ ರೇಣುಕಾಚಾರ್ಯ ಅಣ್ಣನ ಮಗ ನಾಪತ್ತೆ: ಹುಡುಕಾಟಕ್ಕೆ ವಿಶೇಷ ತಂಡ ರಚನೆ

ಕುಟುಂಬದ ಹಿರಿಯ, ಮುದ್ದಿನ ಮಗ ನಾಪತ್ತೆಯಾದ ಹಿನ್ನೆಲೆಯಲ್ಲಿ ಶಾಸಕ ಎಂ.ಪಿ.ರೇಣುಕಾಚಾರ್ಯ ಎಲ್ಲಾ ಸಾರ್ವಜನಿಕ ಕಾರ್ಯಕ್ರಮಗಳನ್ನು ರದ್ಧುಪಡಿಸಿ, ಮಗನ ಹುಡುಕಾಟದಲ್ಲಿ ತೊಡಗಿದ್ದರು. ಮಗ ನಾಪತ್ತೆಯಾದ ಆತಂಕದಲ್ಲಿದ್ದರೂ ಸಹ ಹೊನ್ನಾಳಿ, ನ್ಯಾಮತಿ ತಾಲೂಕಿನಲ್ಲಿ 67ನೇ ಕನ್ನಡ ರಾಜ್ಯೋತ್ಸವ ಸಮಾರಂಭಗಳಲ್ಲಿ ಕೇವಲ ಒಂದು ಗಂಟೆ ಮಾತ್ರ ಪಾಲ್ಗೊಂಡು, ಸೀದಾ ಮನೆಗೆ ಬಂದವರೆ ಮನೆಯ ಮಗ ಚಂದ್ರಶೇಖರ ಪತ್ತೆ ಕಾರ್ಯದ ಬಗ್ಗೆ ಪೊಲೀಸ್ ಅಽಕಾರಿಗಳು, ಎಲ್ಲಾ ಕಡೆ ಹುಡುಕಾಟ ನಡೆಸಿರುವ ತಮ್ಮ ಬೆಂಬಲಿಗರು, ಆತ್ಮೀಯರ ಜೊತೆಗೆ ಮೊಬೈಲ್‌ನಲ್ಲಿ ಮಾಹಿತಿ ಪಡೆಯುತ್ತಿರುವುದು ಕಂಡು ಬಂದಿತು.

ಇದನ್ನೂ ಓದಿ: ಐದು ವರ್ಷದ ಕಂದನನ್ನು ಕೊಂದು ನೇಣಿಗೆ ಶರಣಾದ ತಂದೆ

ವಿಷಯ ತಿಳಿದ ಜನರೂ ಸಹ ಶಾಸಕರ ಮನೆ ಬಳಿ ಜಮಾಯಿಸುತ್ತಿದ್ದು, ಆ ಎಲ್ಲರಿಗಿಗೂ ಸಮಾಧಾನ ಮಾಡುತ್ತಾ, ಮನೆ ಮಂದಿಗೆಲ್ಲಾ ಧೈರ್ಯ ಹೇಳುತ್ತಿದ್ದರೂ ರೇಣುಕಾಚಾರ್ಯ ಸಹ ಮಗ ಎಲ್ಲಿದ್ದಾನೋ ಎಂಬ ಆತಂಕ ಸಹಜವಾಗಿತ್ತು. ಯಾರೂ ಆತಂಕ ಪಡಬೇಡಿ, ಚಂದ್ರು ಬರುತ್ತಾನೆಂದು ಮನೆ ಬಳಿ ಬಂದವರಿಗೆಲ್ಲಾ ರೇಣುಕಾಚಾರ್ಯ ಸಮಾಧಾನಪಡಿಸುತ್ತಿದ್ದರು. ಮತ್ತೊಂದು ಕಡೆ ಪೊಲೀಸರು ನಾಪತ್ತೆಯಾಗಿರುವ ಚಂದ್ರಶೇಖರನಿಗಾಗಿ ತೀವ್ರ ಶೋಧ ಕೈಗೊಂಡಿದ್ದು, ಪತ್ತೆಗಾಗಿ ವಿಶೇಷ ತಂಡವನ್ನೂ ತೊಡಗಿಸಿದ್ದಾರೆಂದು ಹೇಳಲಾಗಿದೆ.

ಇದನ್ನೂ ಓದಿ: Crime News: ಬ್ರೇಕಪ್ ಮಾಡಿದಳೆಂದು ಪ್ರೇಯಸಿಯನ್ನು ಕೊಂದ ವಿವಾಹಿತ

ಚಂದ್ರು ಕಳೆದ ಭಾನುವಾರ ಸಂಜೆ ಮನೆಯಿಂದ ಹೋದವನು ಮರಳಿ ಬಂದಿಲ್ಲ. ಆತನ ಮೊಬೈಲ್ ಸ್ವಿಚ್ ಆ- ಆಗಿದೆ. ಯಾವಾಗಲೂ ಎಲ್ಲಿಗೆ ಹೋಗಬೇಕೆಂದರು ಜೊತೆಗೆ ಸ್ನೇಹಿತರು ಇದ್ದೇ ಇರುತ್ತಿದ್ದರು. ಆದರೆ, ಭಾನುವಾರ ಮಾತ್ರ ಆತನ ಒಬ್ಬನೇ ಶಿವಮೊಗ್ಗದ ಗೌರಿಗದ್ದೆಗೆ ಹೋಗಿ ಬರುತ್ತೇನೆಂದು ಹೋಗಿದ್ದ. ಶಿವಮೊಗ್ಗದಲ್ಲಿ ತನ್ನ ಸ್ನೇಹಿತನನ್ನು ಎರಡು ದಿನಗಳ ಹಿಂದಷ್ಟೇ ಚಂದ್ರಶೇಖರ ಮಾತನಾಡಿಸಿಕೊಂಡು ಬಂದಿದ್ದ ಎಂದು ತಿಳಿದು ಬಂದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಪ್ರೆಗ್ನೆಂಟ್ ಮಾಡಿ ಗರ್ಭಪಾತ ಮಾಡಿಸಿದ, Sorry ಅಮ್ಮಾ ಸಾಯ್ತಿದ್ದೀನಿ: ಯುವತಿ ಆತ್ಮ*ಹತ್ಯೆ
Actor Dileep Case: ಖ್ಯಾತ ನಟಿ ಮೇಲಿನ ಅ*ತ್ಯಾಚಾರ ಆರೋಪ; 8 ವರ್ಷಗಳ ಹೋರಾಟ, ನಟ ದಿಲೀಪ್‌ಗೆ ನಿರಾಳ!