Belagavi; ಹೆತ್ತ ಮಗಳ ಮೇಲೆ ವೈದ್ಯ ತಂದೆಯಿಂದಲೇ ಪೈಶಾಚಿಕ ಕೃತ್ಯ!

Published : Jul 03, 2022, 05:08 PM ISTUpdated : Jul 03, 2022, 05:09 PM IST
Belagavi; ಹೆತ್ತ ಮಗಳ ಮೇಲೆ ವೈದ್ಯ ತಂದೆಯಿಂದಲೇ ಪೈಶಾಚಿಕ ಕೃತ್ಯ!

ಸಾರಾಂಶ

ವೃತ್ತಿಯಲ್ಲಿ RMP ವೈದ್ಯನಾಗಿರುವ ಪಾಪಿ ತಂದೆ ಕುಡಿದ ಮತ್ತಿನಲ್ಲಿ ಸ್ವಂತ ಮಗಳ ಮೇಲೆ ವಿಕೃತಿ ಮೆರೆದ ಘಟನೆ ಬೆಳಗಾವಿ ತಾಲೂಕಿನ ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬೆಳಗಾವಿ (ಜು.3): 4 ವರ್ಷದ ಮಗಳ ಕೆನ್ನೆ, ಎದೆ ಭಾಗಕ್ಕೆ ಕಚ್ಚಿ ಹೆತ್ತ ತಂದೆಯೇ ವಿಕೃತಿ ಮೆರೆದ ಘಟನೆ ಬೆಳಗಾವಿ ತಾಲೂಕಿನ ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವೃತ್ತಿಯಲ್ಲಿ RMP ವೈದ್ಯನಾಗಿರುವ ಪಾಪಿ ತಂದೆ ಕುಡಿದ ಮತ್ತಿನಲ್ಲಿ ಸ್ವಂತ ಮಗಳ ಮೇಲೆ ಈ ರೀತಿ ವಿಕೃತಿ ಮೆರೆಯಲು ಕಾರಣ ಏನು ಎಂಬುದು ತಿಳಿದು ಬಂದಿಲ್ಲ.

ಪತ್ನಿ ಖಾಸಗಿ ಆಸ್ಪತ್ರೆಯಲ್ಲಿ ಅಟೆಂಡರ್ ಆಗಿ ಕೆಲಸ ಮಾಡುತ್ತಿದ್ದು, ಪತ್ನಿ ಕೆಲಸಕ್ಕೆ ಹೋದ ವೇಳೆ ಈ ಮಗಳ ಕೆನ್ನೆಗೆ, ಎದೆ ಭಾಗಕ್ಕೆ ಕಚ್ಚಿ ಗಾಯಗೊಳಿಸಿದ್ದಾನೆ. ಸದ್ಯ ಗಾಯಾಳು ಮಗುವಿಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿ ತಂದೆಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಿದ್ದಾರೆ.

ಕಾಮುಕ ಶಿಕ್ಷಕ ಅರೆಸ್ಟ್, ಅಜುರುದ್ದೀನ್ ಕಾಮಪುರಾಣದ ಹಿಂದೆ ಲವ್‌ ಜಿಹಾದ್..! 

Yadgiri ಯಲ್ಲಿ ಬುದ್ದಿಮಾಂದ್ಯ ಮಹಿಳೆಯ ಮೇಲೆ ಅತ್ಯಾಚಾರವೆಸಗಿದ ಕಾಮುಕ: ಅತ್ಯಾಚಾರವೆಸಗಿ ಯುವತಿಯನ್ನು ಗರ್ಭಾವತಿ ಮಾಡಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.  ಯಾದಗಿರಿ ತಾಲೂಕಿನ ಹಳ್ಳಿಯೊಂದರಲ್ಲಿ 5 ತಿಂಗಳ ಹಿಂದೆ ಈ ಘಟನೆ ನಡೆದಿದ್ದು, ಸಂತ್ರಸ್ತೆ ಯುವತಿ ಗರ್ಭಿಣಿಯಾದ ಹಿನ್ನೆಲೆ ಕಾಣಿಸಿಕೊಂಡ ಹೊಟ್ಟೆ  ನೋವಿನಿಂದ  ಆರೋಪಿಯ ನಿಜಬಣ್ಣ ಬಯಲಾಗಿದೆ. 

ಸಂತ್ರಸ್ತೆ ಹೊಟ್ಟೆ ನೋವೆಂದು ಆಸ್ಪತ್ರೆಗೆ ತೆರಳಿದ್ದ ನಂತರ ಅತ್ಯಾಚಾರಕ್ಕೊಳಗಾದ ಯುವತಿ ಗರ್ಭಾವತಿಯಾಗಿದ್ದು ಪತ್ತೆಯಾಗಿದೆ.  ತಂದೆ ತಾಯಿಯನ್ನು ಕಳೆದುಕೊಂಡು ಯುವತಿ ಅಜ್ಜಿ ಮನೆಯಲ್ಲಿ ವಾಸವಿದ್ದಳು.  ಯುವತಿ ಜಮೀನಿಗೆ ತೆರಳುತ್ತಿರುವಾಗ ಆಕೆಯ ಮೇಲೆ ಕಾಮುಕ ಸಾಬಣ್ಣ ಎಂಬಾತ ಅತ್ಯಾಚಾರ ಎಸಗಿದ್ದ. ಇದೀಗ  ಐದು ತಿಂಗಳ ನಂತರ ಆರೋಪಿಯ ನೀಚ ಕೃತ್ಯ ಬೆಳಕಿಗೆ ಬಂದಿದೆ. 

ಕಾಮದ ತೀಟೆಗೆ ಮಹಿಳೆಯ ಗಂಡನನ್ನು ಕೊಂದ ಪ್ರಿಯಕರ, ಅಕ್ರಮ ಸಂಬಂಧದ ರಹಸ್ಯ ಬಯಲು

ಪ್ರಕರಣಕ್ಕೆ ಸಂಬಂಧಿಸಿ ಸೈದಾಪುರ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದ್ದು, ಸಾಬಣ್ಣನನ್ನು ಬಂಧಿಸಲಾಗಿದೆ. ಈ ಬಗ್ಗೆ ಯಾದಗಿರಿ ಎಸ್ಪಿ ಡಾ.ಸಿ.ಬಿ.ವೇದಮೂರ್ತಿ‌ ಪ್ರತಿಕ್ರಿಯೆ ನೀಡಿ 30 ವರ್ಷದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ.  ಹೆತ್ತವರಿಲ್ಲದ ಹಿನ್ನೆಲೆ ಸಂತ್ರಸ್ತೆಯು ಅಜ್ಜಿ  ಮನೆಯಲ್ಲಿ ವಾಸವಾಗಿದ್ದಳು. ಸಂತ್ರಸ್ತೆ ಯುವತಿಯು ಐದು ತಿಂಗಳ ಗರ್ಭಿಣಿಯಾಗಿದ್ದಾಳೆ. ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಗೆ ದಾಖಲಿಸಿದ ವೇಳೆ ಯುವತಿ ಗರ್ಭಿಣಿಯಾಗಿರುವ ವಿಚಾರ ಬಹಿರಂಗವಾಗಿದೆ. ಪೊಲೀಸರು ಈ ಕುರಿತು ಹೆಚ್ಚಿನ ತನೀಖೆ ನಡೆಸುತ್ತಿದ್ದಾರೆ ಎಂದು ಎಸ್ಪಿ ಡಾ.ಸಿ.ಬಿ.ವೇದಮೂರ್ತಿ ಮಾಹಿತಿ ನೀಡಿದ್ದಾರೆ.

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

The Devil Movie: ಕಾಲವೇ ಸತ್ಯ ಹೇಳುತ್ತದೆ. ಸಮಯವೇ ಉತ್ತರಿಸುತ್ತದೆ-ಜೈಲಿನಿಂದಲೇ Darshan ಮೆಸೇಜ್
ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು