ಬೆಳಗಾವಿ: ಲಾರಿ ಹರಿದು 25ಕ್ಕೂ ಅಧಿಕ ಕುರಿಗಳ ಮಾರಣಹೋಮ!

Published : Feb 11, 2024, 06:05 PM ISTUpdated : Feb 11, 2024, 06:43 PM IST
ಬೆಳಗಾವಿ: ಲಾರಿ ಹರಿದು 25ಕ್ಕೂ ಅಧಿಕ ಕುರಿಗಳ ಮಾರಣಹೋಮ!

ಸಾರಾಂಶ

ರಸ್ತೆ ಮೇಲೆ ಹೋಗುತ್ತಿದ್ದ ಕುರಿಗಳ ಮೇಲೆ ಲಾರಿ ಹರಿದು 25ಕ್ಕೂ ಅಧಿಕ ಕುರಿಗಳು ದುರ್ಮರಣಕ್ಕೀಡಾದ ಘಟನೆ ಬೆಳಗಾವಿ ತಾಲೂಕಿನ ಹಲಗಾ ಗ್ರಾಮದ ಬಳಿಯ ಫುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಚಿಕ್ಕೋಡಿ ತಾಲೂಕಿನ ಅಮಲಗೇರಿ ಗ್ರಾಮದ ಕುರಿಗಾಹಿ ರಾಮಪ್ಪ ಪೂಜಾರಿ ಎಂಬುವವರಿಗೆ ಸೇರಿದ ಕುರಿಗಳು.

ಬೆಳಗಾವಿ (ಫೆ.11): ರಸ್ತೆ ಮೇಲೆ ಹೋಗುತ್ತಿದ್ದ ಕುರಿಗಳ ಮೇಲೆ ಲಾರಿ ಹರಿದು 25ಕ್ಕೂ ಅಧಿಕ ಕುರಿಗಳು ದುರ್ಮರಣಕ್ಕೀಡಾದ ಘಟನೆ ಬೆಳಗಾವಿ ತಾಲೂಕಿನ ಹಲಗಾ ಗ್ರಾಮದ ಬಳಿಯ ಫುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಚಿಕ್ಕೋಡಿ ತಾಲೂಕಿನ ಅಮಲಗೇರಿ ಗ್ರಾಮದ ಕುರಿಗಾಹಿ ರಾಮಪ್ಪ ಪೂಜಾರಿ ಎಂಬುವವರಿಗೆ ಸೇರಿದ ಕುರಿಗಳು. ಇಂದು ಹಲಗಾ ಗ್ರಾಮದ ಜಮೀನಿನಲ್ಲಿ ತಂಗಲು ಕುರಿಗಳ ಸಮೇತ ಆಗಮಿಸಿದ್ದ ರಾಮಪ್ಪ ಪೂಜಾರಿ. ರಸ್ತೆ ಪಕ್ಕ ಹೊರಟಿದ್ದ ಕುರಿಗಳ ಹಿಂಡಿನ ಮೇಲೆ ಲಾರಿ ಹರಿದಿದೆ. ಲಾರಿಯು ಡಿಕ್ಕಿಯಾದ ರಭಸಕ್ಕೆ ರಸ್ತೆ ಮೇಲೆಯೇ ವಿಲವಿಲ ಒದ್ದಾಡಿ ಪ್ರಾಣಬಿಟ್ಟಿರೋ ಕುರಿಗಳು. ಕುರಿಗಳ ಮೇಲೆ ಲಾರಿ ಹರಿಸಿದ ಬಳಿಕ ಲಾರಿ ಸ್ಥಳದಲ್ಲೇ ಬಿಟ್ಟು ಪರಾರಿಯಾಗಿರುವ ಚಾಲಕ.

ಬೆಂಗಳೂರು ಹೊಸಕೋಟೆ ಹೆದ್ದಾರಿಯಲ್ಲಿ ಭೀಕರ ಅಪಘಾತ, ಮೊಬೈಲ್ ಹಿಡಿದುಕೊಂಡೇ ಪ್ರಾಣಬಿಟ್ಟ ಯುವಕ!

ಕುರಿಗಳ ಮಾರಣಹೋಮದಿಂದ ರಸ್ತೆ ರಕ್ತಸಿಕ್ತವಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಎಲ್ಲೆಂದರಲ್ಲೇ ಕುರಿಗಳು ಸತ್ತುಬಿದ್ದಿದ್ದರಿಂದ ಕೆಲಹೊತ್ತು ಸಂಚಾರ ಸ್ಥಗಿತವಾಗಿತ್ತು. ಘಟನೆ ಬಳಿಕ ಸ್ಥಳಕ್ಕೆ ಹಿರೇಬಾಗೇವಾಡಿ ಠಾಣೆ ಪೊಲೀಸರು ಭೇಟಿ ನೀಡಿ, ಮೃತ ಕುರಿಗಳ ತೆರವು ಕಾರ್ಯಾಚರಣೆ ಮಾಡಲಾಯಿತು. ಬೆಳಗಾವಿ ತಾಲೂಕಿನ ‌ಹಿರೇಬಾಗೇವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ

ವೇಗವಾಗಿ ಹಂಪ್‌ ಎಗರಿದ ಬೈಕ್‌: ತಲೆಗೆ ಪೆಟ್ಟು ಬಿದ್ದು ಸವಾರ ಸಾವು!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರು ವಿಜಯ್ ಗುರೂಜಿ ಗ್ಯಾಂಗ್ ಸಮೇತ ಅರೆಸ್ಟ್; ಟೆಕ್ಕಿಗೆ ಲೈಂಗಿಕ ಶಕ್ತಿ ಹೆಚ್ಚಿಸೋದಾಗಿ ₹40 ಲಕ್ಷ ವಂಚನೆ!
ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಶಿಕ್ಷಕನಿಗೆ ಪೋಷಕರಿಂದ ಧರ್ಮದೇಟು!