ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದಿದ್ದಲ್ಲದೇ, ಮಹಿಳಾ ಐಪಿಎಸ್‌ಗೆ ನಿಂದಿಸಿದ ಬೈಕ್ ಸವಾರ!

Published : Jan 06, 2024, 11:44 AM IST
ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದಿದ್ದಲ್ಲದೇ, ಮಹಿಳಾ ಐಪಿಎಸ್‌ಗೆ ನಿಂದಿಸಿದ ಬೈಕ್ ಸವಾರ!

ಸಾರಾಂಶ

ಮಹಿಳಾ ಐಪಿಎಸ್ ಅಧಿಕಾರಿ ವಾಹನಕ್ಕೆ ಡಿಕ್ಕಿ ಹೊಡೆದ ಬೈಕ್ ಸವಾರ ನಂತರ ಅವರನ್ನು  ನಿಂದಿಸಿ, ಬೆದರಿಕೆ ಹಾಕಿರುವ ಘಟನೆ ತುಮಕೂರು ಮುಖ್ಯರಸ್ತೆ ಗೊರಗುಂಟೆ ಪಾಳ್ಯ ದಲ್ಲಿ ನಡೆದಿದೆ. ಆರೋಪಿ ಗೊರಗುಂಟೆಪಾಳ್ಯ ಜಂಕ್ಷನ್ ಬಳಿ ಐಪಿಎಸ್ ಅಧಿಕಾರಿ ಶೋಭಾರಾಣಿ ಅವರ ಸರ್ಕಾರಿ ವಾಹನಕ್ಕೆ ಅತಿವೇಗವಾಗಿ ಬಂದು ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ. 

ಬೆಂಗಳೂರು (ಜ.6): ಮಹಿಳಾ ಐಪಿಎಸ್ ಅಧಿಕಾರಿ ವಾಹನಕ್ಕೆ ಡಿಕ್ಕಿ ಹೊಡೆದ ಬೈಕ್ ಸವಾರ ನಂತರ ಅವರನ್ನು  ನಿಂದಿಸಿ, ಬೆದರಿಕೆ ಹಾಕಿರುವ ಘಟನೆ ತುಮಕೂರು ಮುಖ್ಯರಸ್ತೆ ಗೊರಗುಂಟೆ ಪಾಳ್ಯ ದಲ್ಲಿ ನಡೆದಿದೆ.

ಆರೋಪಿ ಗೊರಗುಂಟೆಪಾಳ್ಯ ಜಂಕ್ಷನ್ ಬಳಿ ಐಪಿಎಸ್ ಅಧಿಕಾರಿ ಶೋಭಾರಾಣಿ ಅವರ ಸರ್ಕಾರಿ ವಾಹನಕ್ಕೆ ಅತಿವೇಗವಾಗಿ ಬಂದು ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ. ವಾಹನವನ್ನು ರಸ್ತೆಬದಿಯಲ್ಲಿ ನಿಲ್ಲಿಸಿ, ಆಗಿರುವ ಡ್ಯಾಮೇಜ್ ಪರಿಶೀಲಿಸಲು ಅಧಿಕಾರಿ ಚಾಲಕನಿಗೆ ಹೇಳಿದರು.

ಈ ವೇಳೆ ಆರೋಪಿಗಳು ಅಧಿಕಾರಿಯ ಚಾಲಕನ ಮೇಲೆ ಕೂಗಾಡಲು ಪ್ರಾರಂಭಿಸಿದರು. ವಾಹನದಲ್ಲಿದ್ದ ಅಧಿಕಾರಿ ಕೆಳಗಿಳಿದು ತಮ್ಮ ಚಾಲಕನ ರಕ್ಷಣೆಗೆ ಬಂದಿದ್ದಾರೆ. ಆರೋಪಿಗಳು ಅಧಿಕಾರಿಯನ್ನು ಅಸಭ್ಯ ಭಾಷೆಯಲ್ಲಿ ನಿಂದಿಸಿ ಬೆದರಿಕೆ ಹಾಕಿದ್ದಾರೆ. 

ಕಿಲ್ಲರ್ ಬಿಎಂಟಿಸಿ ಬಸ್ ಗೆ ಮತ್ತೊಂದು ಬಲಿ; ವೊಲ್ವೋ ಬಸ್. ಡಿಕ್ಕಿಯಾಗಿ ಬೈಕ್ ಸವಾರ ದುರ್ಮರಣ!

ಅಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂಚಾರಿ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರು, ಆದರೆ ಅವರನ್ನೂ ಸವಾರ ನಿಂದಿಸಿದ್ದಾನೆ. ನಂತರ ಆರೋಪಿಯನ್ನು ಬೈಕ್ ಸಮೇತ ಆರ್‌ಎಂಸಿ ಯಾರ್ಡ್ ಪೊಲೀಸ್ ಠಾಣೆಗೆ ಕರೆತರಲಾಯಿತು. ಐಪಿಎಸ್ ಅಧಿಕಾರಿ ಶೋಭಾರಾಣಿ ಆತನ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದಾರೆ.

ಅಧಿಕಾರಿ ಡಾ ವಿಜೆ ಶೋಭಾ ರಾಣಿ ಅವರು ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಬೆಂಗಳೂರು ಮಹಾನಗರ ಕಾರ್ಯಪಡೆಯಲ್ಲಿ ಎಸ್ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬುಧವಾರ ಬೆಳಗ್ಗೆ 10.30ರಿಂದ 11ರ ನಡುವೆ ಈ ಘಟನೆ ನಡೆದಿದೆ. ಚಿಕ್ಕಬಾಣಾವರದ ಸಪ್ತಗಿರಿ ಲೇಔಟ್ ನಿವಾಸಿ ಜಿ ಅಭಿಷೇಕ್ (22) ವಿರುದ್ಧ ದೂರು ದಾಖಲಾಗಿದೆ. 

 

ರಸ್ತೆ ಅಪಘಾತದಲ್ಲಿ ರಂಗಭೂಮಿ ಕಲಾವಿದ ಗೌತಮ್ ಕುಲಾಲ್ ವಗ್ಗ ದುರ್ಮರಣ!

ಅಧಿಕಾರಿ ತನ್ನ ಮನೆಯಿಂದ ಸರ್ಕಾರಿ ಎಸ್‌ಯುವಿಯಲ್ಲಿ ತನ್ನ ಕಚೇರಿಗೆ ಹೋಗುತ್ತಿದ್ದರು. ಹಿಂದಿನಿಂದ ಬಂದ ಯುವಕ ಅವರ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾನೆ.  ಆತ ತಾನು ಪ್ರತಿಷ್ಠಿತ ಚಾರ್ಟರ್ಡ್ ಅಕೌಂಟೆಂಟ್ ಮಗನೆಂದು ಹೇಳಿಕೊಂಡು ಅಧಿಕಾರಿಗೆ ಬೆದರಿಕೆ ಹಾಕಿ ನಿಂದಿಸಿದ್ದಾನೆ, ತಮ್ಮ ತಂದೆ ಪ್ರಭಾವಿಯಾಗಿದ್ದು  ಹಲವು ಪ್ರಭಾವಿಗಳ ಜೊತೆ ಸಂಪರ್ಕ ಹೊಂದಿದ್ದಾರೆ ಎಂದು ಹೇಳಿದ್ದಾನೆ.

ಆರೋಪಿಯನ್ನು ಬಂಧಿಸಿದ ನಂತರ, ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು,  ನಂತರ  ಕೋರ್ಟ್ ಆತನಿಗೆ ಜಾಮೀನು ನೀಡಿದೆ ಎಂದು ತನಿಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.  ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಹೆಚ್ಚಿನ ತನಿಖೆಗಳು ನಡೆಯುತ್ತಿವೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು
ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ