ಬೆಂಗಳೂರು: ಹೋಟೆಲ್‌ ನುಗ್ಗಿದರೂ ಬಿಡದೆ ಅಟ್ಟಾಡಿಸಿ ರೌಡಿ ಕೊಚ್ಚಿ ಕೊಲೆ

Published : Dec 25, 2023, 04:07 AM IST
ಬೆಂಗಳೂರು: ಹೋಟೆಲ್‌ ನುಗ್ಗಿದರೂ ಬಿಡದೆ ಅಟ್ಟಾಡಿಸಿ ರೌಡಿ ಕೊಚ್ಚಿ ಕೊಲೆ

ಸಾರಾಂಶ

ಸುಮಾರು ಐದು ಮಂದಿ ಏಕಾಏಕಿ ಜಯಪ್ರಕಾಶ್‌ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಲು ಮುಂದಾಗಿದ್ದಾರೆ. ಈ ವೇಳೆ ತಪ್ಪಿಸಿಕೊಂಡು ಓಡಿದ ಜಯಪ್ರಕಾಶ್‌ ಸಮೀಪದಲ್ಲೇ ಇದ್ದ ವಿಜಯ ಸಾಗರ ಹೋಟೆಲ್‌ಗೆ ನುಗ್ಗಿದ್ದಾನೆ. ಅಷ್ಟರಲ್ಲಿ ಬೆನ್ನಟ್ಟಿ ಬಂದ ದುಷ್ಕರ್ಮಿಗಳು ಹೋಟೆಲ್‌ನೊಳಗೆ ನುಗ್ಗಿ ಜಯಪ್ರಕಾಶ್‌ನನ್ನು ಮನಬಂದಂತೆ ಕೊಚ್ಚಿ ಕೊಲೆಗೈದು ಪರಾರಿಯಾಗಿದ್ದಾರೆ.

ಬೆಂಗಳೂರು(ಡಿ.25):  ರೌಡಿಯೊಬ್ಬನನ್ನು ದುಷ್ಕರ್ಮಿಗಳು ಅಟ್ಟಾಡಿಸಿ ಬರ್ಬರವಾಗಿ ಕೊಚ್ಚಿ ಕೊಲೆಗೈದಿರುವ ಘಟನೆ ಭಾನುವಾರ ಸಂಜೆ ಆಡುಗೋಡಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಜಯಪ್ರಕಾಶ್‌ ಅಲಿಯಾಸ್‌ ನಾಯಿ ಅಪ್ಪಿ (33) ಕೊಲೆಯಾದ ರೌಡಿ. ಹನುಮ ಜಯಂತಿ ಪ್ರಯುಕ್ತ ಭಾನುವಾರ ಲಕ್ಕಸಂದ್ರ ಬಸ್‌ ನಿಲ್ದಾಣದ ಸಮೀಪದ ಆಂಜನೇಯ ದೇವಸ್ಥಾನದಲ್ಲಿ ಆಯೋಜಿಸಿದ್ದ ಅನ್ನದಾನ ಕಾರ್ಯಕ್ರಮದಲ್ಲಿ ಜಯಪ್ರಕಾಶ್‌ ಭಾಗಿಯಾಗಿದ್ದ. ಸಂಜೆ 6.45ರ ಸುಮಾರಿಗೆ ಸುಮಾರು ಐದು ಮಂದಿ ಏಕಾಏಕಿ ಜಯಪ್ರಕಾಶ್‌ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಲು ಮುಂದಾಗಿದ್ದಾರೆ. ಈ ವೇಳೆ ತಪ್ಪಿಸಿಕೊಂಡು ಓಡಿದ ಜಯಪ್ರಕಾಶ್‌ ಸಮೀಪದಲ್ಲೇ ಇದ್ದ ವಿಜಯ ಸಾಗರ ಹೋಟೆಲ್‌ಗೆ ನುಗ್ಗಿದ್ದಾನೆ. ಅಷ್ಟರಲ್ಲಿ ಬೆನ್ನಟ್ಟಿ ಬಂದ ದುಷ್ಕರ್ಮಿಗಳು ಹೋಟೆಲ್‌ನೊಳಗೆ ನುಗ್ಗಿ ಜಯಪ್ರಕಾಶ್‌ನನ್ನು ಮನಬಂದಂತೆ ಕೊಚ್ಚಿ ಕೊಲೆಗೈದು ಪರಾರಿಯಾಗಿದ್ದಾರೆ.

ಪದೇ ಪದೇ ಅಂದರ್ ಆಗ್ತಿದ್ದವ ಮರ್ಡರ್..! ಅವನ ಕೊಲೆಗೆ ಕಾರಣ ಆತ ಕದ್ದ ಮಾಲು..!

ಘಟನಾ ಸ್ಥಳಕ್ಕೆ ಆಡುಗೋಡಿ ಪೊಲೀಸರು, ಬೆಂಗಳೂರು ಆಗ್ನೇಯ ವಿಭಾಗದ ಡಿಸಿಪಿ ಸಿ.ಕೆ ಬಾಬಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಯಾದ ಜಯಪ್ರಕಾಶ್ 2006ರಲ್ಲಿ ಹತ್ಯೆ ಪ್ರಕರಣವೊಂದರಲ್ಲಿ ಜೈಲಿಗೆ ಹೋಗಿ ಬಂದಿದ್ದ. ಬಳಿಕ ಆಟೋ ಓಡಿಸಿಕೊಂಡಿದ್ದ. ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ.

ದುಷ್ಕರ್ಮಿಗಳ ಬಂಧನಕ್ಕೆ ಪೊಲೀಸರ ಐದು ತಂಡ ರಚಿಸಲಾಗಿದೆ. ಈ ಸಂಬಂಧ ಆಡುಗೋಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!
ಬೆಂಗಳೂರು ವಿಜಯ್ ಗುರೂಜಿ ಗ್ಯಾಂಗ್ ಸಮೇತ ಅರೆಸ್ಟ್; ಟೆಕ್ಕಿಗೆ ಲೈಂಗಿಕ ಶಕ್ತಿ ಹೆಚ್ಚಿಸೋದಾಗಿ ₹40 ಲಕ್ಷ ವಂಚನೆ!