ಕೊಲೆಗೆ ಮುನ್ನ ರೌಡಿ ಅಟ್ಟಾಡಿಸಿದ ವಿಡಿಯೋ ವೈರಲ್‌: ಬೆಚ್ಚಿಬಿದ್ದ ಜನತೆ

Kannadaprabha News   | Asianet News
Published : Sep 15, 2021, 10:10 AM IST
ಕೊಲೆಗೆ ಮುನ್ನ ರೌಡಿ ಅಟ್ಟಾಡಿಸಿದ ವಿಡಿಯೋ ವೈರಲ್‌:  ಬೆಚ್ಚಿಬಿದ್ದ ಜನತೆ

ಸಾರಾಂಶ

*   ಸೆ.12ರಂದು ನಡೆದಿದ್ದ ರೌಡಿ ಕೊಲೆ *   ಹಂತಕರಿಂದ ತಪ್ಪಿಸಿಕೊಳ್ಳಲು ಫುಟ್ಬಾಲ್‌ ಕ್ರೀಡಾಂಗಣಕ್ಕೆ ನುಗ್ಗಿದ್ದ ರೌಡಿ *   ಬಾಗಿಲು ಮುರಿದು ಒಳ ನುಗ್ಗಿ ಹತ್ಯೆ​ಗೈ​ದಿ​ದ್ದ ಹಂತ​ಕರು   

ಬೆಂಗಳೂರು(ಸೆ.15):  ಕಳೆದ ಮೂರು ದಿನಗಳ ಹಿಂದೆ (ಸೆ.12) ಕೊಲೆಯಾದ ರೌಡಿಶೀಟರ್‌ ಅರವಿಂದ್‌ನನ್ನು(30), ಹತ್ಯೆಗೂ ಮೊದಲು ಆರೋಪಿಗಳು ಅಟ್ಟಾಡಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಹಂತಕರಿಂದ ತಪ್ಪಿಸಿಕೊಳ್ಳಲು ಅರವಿಂದ್‌ ಫುಟ್ಬಾಲ್‌ ಕ್ರೀಡಾಂಗಣಕ್ಕೆ ನುಗ್ಗಿದ್ದು, ಹೆಲ್ಮೆಟ್‌ ಧರಿಸಿರುವ ಹಂತಕರು ಓಡಿಸಿಕೊಂಡು ಹೋಗಿರುವ ವಿಡಿಯೋ ಭಯ ಹುಟ್ಟಿಸುವಂತಿದೆ. ಮತ್ತೊಂದೆಡೆ ಹಂತಕರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದು, ಎಲ್ಲೆಡೆ ಹುಡುಕಾಟ ನಡೆಸುತ್ತಿದ್ದಾರೆ. ಕೊಲೆಗೆ ಹಳೇ ದ್ವೇಷ ಕಾರಣ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ. ಕೆಲ ದಿನ​ಗ​ಳ ಹಿಂದಷ್ಟೇ ಕೊಲೆಯಾದ ಅರ​ವಿಂದ್‌, ಸುಭಾಷ್‌ ಎಂಬಾ​ತನ ಮೇಲೆ ಹಲ್ಲೆ ನಡೆ​ಸಿದ್ದ. ಈ ದ್ವೇಷದ ಹಿನ್ನೆ​ಲೆ​ಯಲ್ಲಿ ಹತ್ಯೆ​ಗೈ​ದಿ​ರುವ ಸಾಧ್ಯ​ತೆ​ಯಿದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಫುಟ್ಬಾಲ್‌ ಮೈದಾನದಲ್ಲಿ ಅಟ್ಟಾಡಿಸಿ ರೌಡಿಶೀಟರ್‌ ಹತ್ಯೆ

ಸಿಸಿ ಕ್ಯಾಮೆ​ರಾ​ದಲ್ಲಿ ಏನಿ​ದೆ?

ಆರಂಭ​ದಲ್ಲಿ ಹಲ್ಲೆ​ಗೊ​ಳ​ಗಾ​ಗಿದ್ದ ಅರ​ವಿಂದ್‌​ ಪ್ರಾಣ ಉಳಿ​ಸಿ​ಕೊ​ಳ್ಳಲು ಫುಟ್ಬಾಲ್‌ ಮೈದಾ​ನಕ್ಕೆ ಓಡಿ​ದ್ದಾನೆ. ಆಗ ನಾಲ್ವರು ಮಾರ​ಕಾ​ಸ್ತ್ರ​ಗ​ಳನ್ನು ಹಿಡಿದು ಮೈದಾ​ನಕ್ಕೆ ನುಗ್ಗಿ​ದ್ದಾರೆ. ಮೈದಾ​ನದ ಒಳಾಂಗ​ಣದಲ್ಲಿ ಹಂತ​ಕರು ಹುಡು​ಕಾಟ ನಡೆ​ಸು​ತ್ತಿ​ರುವ ದೃಶ್ಯ ಸೆರೆ​ಯಾ​ಗಿದೆ. ಹಂತಕರು ಮುಖ ಚಹರೆ ಗೊತ್ತಾಗಬಾರದು ಎಂಬ ಕಾರಣಕ್ಕೆ ಹೆಲ್ಮೆಟ್‌ ಧರಿಸಿದ್ದಾರೆ. ಮತ್ತೊಬ್ಬ ಟೋಪಿ ಹಾಕಿ, ಮಾಸ್ಕ್‌ ಧರಿಸಿದ್ದ. ದುಷ್ಕರ್ಮಿಗಳು ಮಾರಕಾಸ್ತ್ರ ಹಿಡಿದು ಓಡುವ ದೃಶ್ಯ ಸಾರ್ವಜನಿಕ ವಲಯದಲ್ಲಿ ಬೆಚ್ಚಿ ಬೀಳುವಂತೆ ಮಾಡಿದೆ.

ಭಾರತಿನಗರ ಮತ್ತು ಡಿ.ಜೆ.ಹಳ್ಳಿ ಠಾಣೆಯ ರೌಡಿಶೀಟರ್‌ ಆಗಿದ್ದ ಅರವಿಂದ್‌ ಮೇಲೆ ಕೊಲೆ ಯತ್ನ, ದರೋಡೆ ಸೇರಿದಂತೆ ಹಲವು ಅಪರಾಧ ಪ್ರಕರಣಗಳಿತ್ತು. ಭಾರತಿನಗರ ಠಾಣೆಯ ರೌಡಿಶೀಟರ್‌ ಕೂಡ ಆಗಿದ್ದ. ಭಾರತಿನಗರ ಪೊಲೀಸರು ಗೂಂಡಾ ಕಾಯ್ದೆಯಡಿ ಬಂಧಿಸಿ ಅರವಿಂದ್‌ನನ್ನು ಜೈಲಿಗೆ ಕಳುಹಿಸಿದ್ದರು. ಎರಡು ತಿಂಗಳ ಹಿಂದಷ್ಟೇ ಜಾಮೀನು ಪಡೆದು ಹೊರಬಂದಿದ್ದ ಅರವಿಂದ್‌, ಪುಟ್ಬಾಲ್‌ ತಂಡವೊಂದರ ವ್ಯವಸ್ಥಾಪಕನಾಗಿ ಕೆಲಸ ಮಾಡುತ್ತಿದ್ದ. ಸೆ.12ರಂದು ಸಂಜೆ ತನ್ನ ಕೆಡಿ​ಎ​ಫ್‌ ತಂಡದ ಜತೆ ಆಟವಾಡುತ್ತಿ​ದ್ದಾಗ ಅರ​ವಿಂದ್‌ ಮೇಲೆ ನಾಲ್ವರು ಮಾರ​ಕಾಸ್ತ್ರ ಬೀಸಿ​ದ್ದಾರೆ. ಅಲ್ಲಿಂದ ತಪ್ಪಿ​ಸಿ​ಕೊಂಡ ಅರ​ವಿಂದ್‌, ಮೈದಾ​ನಕ್ಕೆ ನುಗ್ಗಿದ್ದಾನೆ. ಬಳಿಕ ರೆಫ್ರಿ ಕೊಠ​ಡಿಗೆ ತೆರಳಿ ಲಾಕ್‌ ಮಾಡಿ​ಕೊಂಡಿ​ದ್ದಾನೆ. ಆದರೂ ಬಿಡದ ಹಂತ​ಕರು ಬಾಗಿಲು ಮುರಿದು ಒಳ ನುಗ್ಗಿ ಹತ್ಯೆ​ಗೈ​ದಿ​ದ್ದಾ​ರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು
ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ