ಕಲಬುರಗಿ: ದಾರಿ ಹೋಕನಿಗೆ ಚಾಕುವಿನಿಂದ ಮನಬಂದಂತೆ ಇರಿದ ರೌಡಿಶೀಟರ್‌

Kannadaprabha News   | Asianet News
Published : Sep 09, 2020, 03:38 PM IST
ಕಲಬುರಗಿ: ದಾರಿ ಹೋಕನಿಗೆ ಚಾಕುವಿನಿಂದ ಮನಬಂದಂತೆ ಇರಿದ ರೌಡಿಶೀಟರ್‌

ಸಾರಾಂಶ

ದಾರಿಹೋಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ರೌಡಿಶೀಟರ್‌| ಕಲಬುರಗಿ ನಗರದ ಜೇವರ್ಗಿ ರಸ್ತೆಯ ಪಂಚಶೀಲ ನಗರದಲ್ಲಿ ನಡೆದ ಘಟನೆ|  ಲಕ್ಷ್ಮಿ ನಗರದ ನಿವಾಸಿ ವಿಶಾಲ್‌ ಗುತ್ತೆದಾರ ಹಲ್ಲೆಗೆ ಒಳಗಾದ ವ್ಯಕ್ತಿ| ರೌಡಿಶೀಟರ್‌ ಛೋಟ್ಯಾ ಹಲ್ಲೆ ಮಾಡಿದ ವ್ಯಕ್ತಿ| 

ಕಲಬುರಗಿ(ಸೆ.09): ದಾರಿಹೋಕನ ಮೇಲೆ ರೌಡಿಶೀಟರ್‌ನೋರ್ವ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಘಟನೆ ಹಳೆ ಜೇವರ್ಗಿ ರಸ್ತೆಯ ಪಂಚಶೀಲ ನಗರದಲ್ಲಿ ನಡೆದಿದೆ.

ಲಕ್ಷ್ಮಿ ನಗರದ ನಿವಾಸಿ ವಿಶಾಲ್‌ ಗುತ್ತೆದಾರ ಹಲ್ಲೆಗೆ ಒಳಗಾದ ವ್ಯಕ್ತಿ. ರೌಡಿಶೀಟರ್‌ ಛೋಟ್ಯಾ ಹಲ್ಲೆ ಮಾಡಿದ ವ್ಯಕ್ತಿ. ವಿಶಾಲ್‌ ಕಿರಾಣಿ ಖರೀದಿಗೆಂದು ನಡೆದುಕೊಂಡು ಹೊರಟಿದ್ದಾಗ ಏಕಾಏಕಿ ದಾಳಿ ನಡೆಸಿದ ಛೋಟ್ಯಾ, ಹೊಟ್ಟೆ ಮತ್ತು ಕೈಗೆ ಚಾಕುವಿನಿಂದ ಮನಬಂದಂತೆ ಇರಿದಿದ್ದಾನೆ. ಹಲ್ಲೆಗೆ ಕಾರಣ ತಿಳಿದು ಬಂದಿಲ್ಲ.

ಗ್ಯಾಂಗ್‌ರೇಪ್‌ ಮತ್ತು ಕೊಲೆ ಆರೋಪಿಗಳು ಠಾಣೆಯಿಂದ ಎಸ್ಕೇಪ್!

ಗಾಯಾಳು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಪಂಚಶೀಲ ನಗರದ ಛೋಟ್ಯಾ ರೌಡಿಶೀಟರ್‌ ಪಟ್ಟಿಯಲ್ಲಿದ್ದಾನೆ. ಹಲವಾರು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವ ಆತ, ಈ ಹಿಂದೆ ಪೊಲೀಸರ ಮೇಲೆಯೇ ಹಲ್ಲೆ ಮಾಡಿ ಪರಾರಿಯಾಗಿದ್ದ. ಸ್ಟೇಷನ್‌ ಬಜಾರ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ರೌಡಿಯ ಬಂಧನಕ್ಕೆ ಜಾಲ ಬೀಸಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಶಿಕ್ಷಕನಿಗೆ ಪೋಷಕರಿಂದ ಧರ್ಮದೇಟು!
ಬೆಂಗಳೂರಲ್ಲಿ ಹೊಟ್ಟೆಪಾಡಿಗೆ ಕಳ್ಳತನ ಮಾಡ್ತಿದ್ದ ಕಳ್ಳನನ್ನೇ ರಾಬರಿ ಮಾಡಿದ ಖತರ್ನಾಕ್ ಕಿತಾಪತಿಗಳು!