ಗುಂಡ್ಲುಪೇಟೆ: ರೌಡಿ ಶೀಟರ್‌ ಸಿದ್ದರಾಜು ಆಲಿಯಾಸ್‌ ಕನಕ ಗಡಿಪಾರು..!

Published : Apr 10, 2024, 01:51 PM IST
ಗುಂಡ್ಲುಪೇಟೆ: ರೌಡಿ ಶೀಟರ್‌ ಸಿದ್ದರಾಜು ಆಲಿಯಾಸ್‌ ಕನಕ ಗಡಿಪಾರು..!

ಸಾರಾಂಶ

ಗುಂಡ್ಲುಪೇಟೆ ತಾಲೂಕಿನ ಹೊಣಪುರಪುರ ಗ್ರಾಮದ ನಿವಾಸಿ ಹಾಗೂ ರೌಡಿ ಶೀಟರ್‌ ಸಿದ್ದರಾಜು ಆಲಿಯಾಸ್‌ ಕನಕನನ್ನು ಬೀದರ್‌ ಜಿಲ್ಲೆಗೆ ಗಡಿ ಪಾರು ಮಾಡಿ ಆದೇಶಿಸಿದ ಉಪ ವಿಭಾಗಾಧಿಕಾರಿ ಶಿವಮೂರ್ತಿ.ಎಂ 

ಗುಂಡ್ಲುಪೇಟೆ(ಏ.10): ತಾಲೂಕಿನ ಹೊಣಪುರಪುರ ಗ್ರಾಮದ ನಿವಾಸಿ ಹಾಗೂ ರೌಡಿ ಶೀಟರ್‌ ಸಿದ್ದರಾಜು ಆಲಿಯಾಸ್‌ ಕನಕನನ್ನು ಬೀದರ್‌ ಜಿಲ್ಲೆಗೆ ಗಡಿ ಪಾರು ಮಾಡಿ ಉಪ ವಿಭಾಗಾಧಿಕಾರಿ ಶಿವಮೂರ್ತಿ ಎಂ ಆದೇಶಿಸಿದ್ದಾರೆ. ಕರ್ನಾಟಕ ಪೊಲೀಸ್‌ ಕಾಯ್ದೆ ೧೯೬೩ ಕಲಂ ೫೫ ರ ರೀತ್ಯಾ ಚಾಮರಾಜನಗರ ಜಿಲ್ಲೆಯಿಂದ ಗಡಿಪಾರು ಮಾಡುವ ಅಧಿಕಾರವನ್ನು ಪ್ರತ್ಯಾಯಿಸಿರುವ ಸಂಬಂಧ ಪ್ರದತ್ತವಾದ ಅಧಿಕಾರದ ಮೇರೆಗೆ ಬೇಗೂರು ಪೊಲೀಸ್‌ ಠಾಣಾ ವ್ಯಾಪ್ತಿಯ ಹೊಣಕನಪುರ ಗ್ರಾಮದ ಸಿದ್ದರಾಜು ಆಲಿಯಾಸ್‌ ಕನಕ ಇತನನ್ನು ಕೊಳ್ಳೇಗಾಲ ಉಪ ವಿಭಾಗದ ಸರಹದ್ದಿನಿಂದ ಏ.೮ ರಿಂದ(ಇಂದಿನಿಂದ) ಜೂ.೬ ರ ವರೆಗೆ ಬೀದರ್‌ ಜಿಲ್ಲೆಗೆ ಗಡಿಪಾರು ಮಾಡಿ ಆದೇಶವನ್ನು ಏ.೮ ರ ಸೋಮವಾರ ಹೊರಡಿಸಲಾಗಿದೆ.

ಈ ಆದೇಶವನ್ನು ತಕ್ಷಣ ಅನುಷ್ಠಾನಕ್ಕೆ ತರಲು ಹಾಗೂ ಸದರಿ ಆದೇಶ ಉಲ್ಲಂಘಿಸಿದರೆ ಕರ್ನಾಟಕ ಪೊಲೀಸ್‌ ಕಾಯ್ದೆ ೧೯೬೩ ರ ಕಲಂ ೬೧ ರ ಪ್ರಕಾರ ಕ್ರಮ ಜರುಗಿಸಲು ಬೇಗೂರು ಆರಕ್ಷಕ ಉಪ ನಿರೀಕ್ಷಕರಿಗೆ ನಿರ್ದೇಶಿಸಿದ್ದು ಸದರಿ ಅಪಾಧಿತರನ್ನು ಬೀದರ್‌ ಜಿಲ್ಲೆಗೆ ಸ್ಥಳಾಂತರಿಸಲು ಸೂಚಿಸಿದೆ ಹಾಗೂ ಸದರಿ ಗಡಿಪಾರು ಆದೇಶದ ಅವಧಿಯಲ್ಲಿ ಆಪಾದಿತನನ್ನು ಹಿಂದಕ್ಕೆ ಕರೆಯಿಸಿಕೊಳ್ಳಬೇಕಾದಲ್ಲಿ ನ್ಯಾಯಾಲಯ ಅನುಮತಿ ಪಡೆಯತಕ್ಕದ್ದು ಎಂದು ಉಪ ವಿಭಾಗಾಧಿಕಾರಿ ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.

ಕಲಬುರಗಿ: ವೀಸಾ ಕೊಡಿಸುವುದಾಗಿ ಹೇಳಿ 1.80 ಲಕ್ಷ ಪಡೆದು ಮೋಸ

ರೌಡಿ ಶೀಟರ್‌ ಪೇರೇಡ್‌ ಏಕಿಲ್ಲ!:

ರೌಡಿ ಶೀಟರ್‌ ಗಳಲ್ಲಿ ಒಂದಿಬ್ಬರು ಅರ್ಭಟ ಪೊಲೀಸರಿಗೆ ಗೊತ್ತಿದ್ದರೂ ಗಡಿಪಾರಿಗೆ ಶಿಪಾರಸ್ಸು ಮಾಡಿಲ್ಲ. ಕನಿಷ್ಠ ಪೊಲೀಸ್‌ ಠಾಣೆಯಲ್ಲಿ ಪೇರೇಡ್‌ ಕೂಡ ಮಾಡಿಸಿಲ್ಲ! ರೌಡಿ ಶೀಟರ್‌ ಗಳನ್ನು ಸಾರ್ವಜನಿಕರ ಎದುರು ಪೇರೇಡ್‌ ಮಾಡಿದರೆ ಜನರ ಎದುರು ಮಾನ, ಮಾರ್ಯಾದೆ ಹೋಗುತ್ತದೆ ಎಂದು ಅರ್ಭಟ ಮಾಡುವುದು ತಪ್ಪಲಿದೆ ಆ ಕೆಲಸವನ್ನು ಗುಂಡ್ಲುಪೇಟೆ ಪೊಲೀಸರು ಮಾಡುತ್ತಿಲ್ಲ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬಾಲಿವುಡ್ ನಿರ್ದೇಶಕ ವಿಕ್ರಂ ಭಟ್, ಪತ್ನಿ ಶ್ವೇತಾಂಬರಿ ಭಟ್ ಬಂಧನ; ಅಂತಿಂಥ ವಂಚನೆ ಕೇಸಲ್ಲ ಇದು ಅಂತೀರಾ?!
ಕೊಪ್ಪಳ: ಹಸೆಮಣೆ ಏರಬೇಕಿದ್ದ ಜೋಡಿ ಮಸಣಕ್ಕೆ - ಪ್ರಿ-ವೆಡ್ಡಿಂಗ್ ಶೂಟಿಂಗ್ ಮುಗಿಸಿ ವಾಪಸಾಗುವಾಗ ಭೀಕರ ದುರಂತ!