
ಮುಂಬೈ ( ಜು. 17): ಭಾರತದ ಮಾಜಿ ಕ್ರಿಕೆಟಿಗ ಮತ್ತು ಬ್ಯಾಟಿಂಗ್ ಮಾಂತ್ರಿಕ ಸಚಿನ್ ತೆಂಡೂಲ್ಕರ್ (Sachin Tendulkar)ಅವರ ಖಾಸಗಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿರುವ 32 ವರ್ಷದ ವ್ಯಕ್ತಿಯೊಬ್ಬರು ಆನ್ಲೈನ್ ಹಗರಣಕ್ಕೆ (Online Scam) ಬಲಿಯಾಗಿ 18,200 ರೂ.ಗಳನ್ನು ಕಳೆದುಕೊಂಡಿದ್ದಾರೆ. ಭದ್ರತಾ ಸಿಬ್ಬಂದಿ ದೂರಿನ ಆಧಾರದ ಮೇಲೆ ಜುಲೈ 14 ರಂದು ಬಾಂದ್ರಾ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಎಫ್ಐಆರ್ (FIR) ದಾಖಲಿಸಲಾಗಿದೆ.
ದೂರುದಾರರ ಪ್ರಕಾರ, ಜುಲೈ 13 ರಂದು ಬೆಳಿಗ್ಗೆ 10 ಗಂಟೆ ಸುಮಾರಿಗೆ ಕೋಟಕ್ ಮಹೀಂದ್ರಾ ಬ್ಯಾಂಕ್ನ (Kotak Mahindra bank) ಎಕ್ಸಿಕ್ಯೂಟಿವ್ ಎಂದು ಹೇಳಿಕೊಂಡು ವಂಚಕರೊಬ್ಬರು ತಮ್ಮ ಮೊಬೈಲ್ ಫೋನ್ ಸಂಖ್ಯೆಗೆ ಕರೆ ಮಾಡಿ ಸಾಲದ ಅಗತ್ಯವಿದೆಯೇ ಎಂದು ಕೇಳಿದರು. ಸೆಕ್ಯೂರಿಟಿ ಗಾರ್ಡ್ ಗೆ ಹಣದ ಅವಶ್ಯಕತೆ ಇದ್ದ ಕಾರಣ ಸಾಲ ಪಡೆಯಲು ಒಪ್ಪಿಗೆ ನೀಡಿದ್ದಾರೆ.
ಸೈಬರ್ ವಂಚಕನು (Cyber Fraud) ತನ್ನ ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ಡೆಬಿಟ್ ಕಾರ್ಡ್ ಮತ್ತು ಕ್ರೆಡಿಟ್ ಕಾರ್ಡ್ನ ವಿವರಗಳನ್ನು ವಾಟ್ಸಾಪ್ ಸಂಖ್ಯೆಗೆ ಕಳುಹಿಸಲು ಕೇಳಿದ್ದ. ಅದರಂತೆ, ದೂರುದಾರರು ವಂಚಕ ಕೇಳಿದ ಎಲ್ಲಾ ವಿವರಗಳನ್ನು ಕಳುಹಿಸಿದ್ದಾರೆ.
ಇದನ್ನೂ ಓದಿ: ಕೆಲಸ ಕೊಡಿಸುವ ನೆಪದಲ್ಲಿ ಲಕ್ಷಾಂತರ ರೂ. ವಂಚನೆ: ಆನ್ಲೈನ್ ದೋಖಾ ಮಾಡುತ್ತಿದ್ದ ಮೂವರು ಅರೆಸ್ಟ್
ವಂಚಕರು ನಂತರ ಅವರಿಗೆ 10,000 ರೂಪಾಯಿಗಳನ್ನು ಕಳುಹಿಸಿದ್ದಾರೆ ಮತ್ತು ಭದ್ರತಾ ಸಿಬ್ಬಂದಿಯ ಕ್ರೆಡಿಟ್ ಕಾರ್ಡ್ (Credi Card) ವಿವರಗಳನ್ನು ಬಳಸಿ, ಅವರ ಖಾತೆಯಿಂದ 18,200 ರೂಪಾಯಿಗಳನ್ನು ಡೆಬಿಟ್ ಮಾಡಲು ಓಟಿಪಿಯನ್ನು ಜನರೇಟ್ ಮಾಡಿದ್ದಾರೆ. ನಂತರ ದೂರುದಾರರು ವಂಚಕ ಕೇಳಿದಂತೆ ಓಟಿಪಿಯನ್ನು ಹಂಚಿಕೊಂಡಿದ್ದು ಅವರ ಬ್ಯಾಂಕ್ ಖಾತೆಯಿಂದ 18,200 ರೂ.ಗಳನ್ನು ಡೆಬಿಟ್ ಮಾಡಲಾಗಿದೆ. ಬಳಿಕ ತಾನು ವಂಚನೆಗೊಳಗಾಗುತ್ತಿರುವುದನ್ನು ಅರಿತು ಭದ್ರತಾ ಸಿಬ್ಬಂದಿ ಸಹಾಯಕ್ಕಾಗಿ ಬಾಂದ್ರಾ ಪೊಲೀಸರನ್ನು ಸಂಪರ್ಕಿಸಿದ್ದಾರೆ.
ಆನ್ಲೈನ್ ಮೋಸದಿಂದ ಪಾರಾಗೋದು ಹೇಗೆ?: ಇತ್ತೀಚಿನ ದಿನಗಳಲ್ಲಿ ಆನ್ಲೈನ್ ವಂಚನೆ ಪ್ರಕರಣಗಳು ಹೆಚ್ಚುತ್ತಿವೆ. ಆನ್ಲೈನ್ನಲ್ಲಿ ಹೆಚ್ಚಿನ ಸಮಯ ಕಳೆಯಲು ಪ್ರಾರಂಭಿಸುತ್ತಿದ್ದಂತೆ ವಂಚಕರು ಹೊಸ ವಿಧಾನಗಳ ಮೂಲಕ ಜನರನ್ನು ವಂಚಿಸುತ್ತಿದ್ದಾರೆ. ಹೀಗಾಗಿ ಆನ್ಲೈನ್ ವ್ಯವಹಾರ ನಡೆಸೋವಾಗ ನಮ್ಮ ಹಣದ ಸುರಕ್ಷತೆ ದೃಷ್ಟಿಯಿಂದ ಕೆಲವು ಕ್ರಮಗಳನ್ನು ಅನುಸರಿಸೋದು ಅಗತ್ಯ.
ಇದನ್ನೂ ಓದಿ: ಆನ್ಲೈನ್ನಲ್ಲಿ ಕರೆಂಟ್ ಬಿಲ್ ಪೇ ಮಾಡ್ತಿರಾದ್ರೆ ಹುಷಾರ್!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ