ಬೆಂಗಳೂರು: ಮನೆಗಳ್ಳನನ್ನು ಹಿಡಿದು ಕೊಟ್ಟ ಸೇಫ್‌ ಸಿಟಿ ಎಚ್‌ಡಿ ಕ್ಯಾಮೆರಾ!

Published : Jul 03, 2024, 07:57 AM ISTUpdated : Jul 03, 2024, 10:12 AM IST
ಬೆಂಗಳೂರು: ಮನೆಗಳ್ಳನನ್ನು ಹಿಡಿದು ಕೊಟ್ಟ ಸೇಫ್‌ ಸಿಟಿ ಎಚ್‌ಡಿ ಕ್ಯಾಮೆರಾ!

ಸಾರಾಂಶ

ಕೆಲ ದಿನಗಳ ಹಿಂದೆ ವಿಜ್ಞಾನ ನಗರ ಸಮೀಪ ಹಗಲು ಹೊತ್ತಿನಲ್ಲೇ ಮನೆಯೊಂದರಲ್ಲಿ ಕಳ್ಳತನ ನಡೆದಿತ್ತು. ಈ ಬಗ್ಗೆ ತನಿಖೆಗಿಳಿದ ಪೊಲೀಸರು, ಸುತ್ತಮುತ್ತಲ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಸೀಲಿಸಿದರು. ಆಗ ವಿಜ್ಞಾನ ನಗರದಲ್ಲಿ ಸೇಫ್ ಸಿಟಿ ಯೋಜನೆಯಡಿ ಅಳವಡಿಸಿದ್ದ ಎಚ್‌ಡಿ ಗುಣಮಟ್ಟದ ಕ್ಯಾಮೆರಾದಲ್ಲಿ ಆರೋಪಿ ಮುಖ ಚಹರೆ ಪತ್ತೆಯಾಯಿತು. ಈ ಸುಳಿವು ಆಧರಿಸಿ ಕಾರ್ಯಾಚರಣೆಗಿಳಿದ ಖದೀಮ ಪುಟ್ಟ ಸಿಕ್ಕಿಬಿದ್ದ ಎಂದು ಪೊಲೀಸರು ಹೇಳಿದ್ದಾರೆ.

ಬೆಂಗಳೂರು(ಜು.03):  ಸೇಫ್ ಸಿಟಿ ಯೋಜನೆಯಡಿ ಅಳವಡಿಸಿರುವ ಅತ್ಯಾಧುನಿಕ ಸಿಸಿಟಿವಿ ಕ್ಯಾಮೆರಾಗಳಿಂದ ಖದೀಮನೊಬ್ಬ ಎಚ್‌ಎಎ ಠಾಣೆ ಪೊಲೀಸರ ಬಲೆಗೆ ಬಿದ್ದಿದ್ದಾನೆ.

ನೆಲ್ಲೂರಪುರದ ಮಲ್ಲಿಕಾರ್ಜುನ ಅಲಿಯಾಸ್ ಪುಟ್ಟ ಬಂಧಿತನಾಗಿದ್ದು, ಆರೋಪಿಯಿಂದ 25 ಗ್ರಾಂ ಚಿನ್ನ ಹಾಗೂ ಇತರೆ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಕೆಲ ದಿನಗಳ ಹಿಂದೆ ವಿಜ್ಞಾನ ನಗರ ಸಮೀಪ ಹಗಲು ಹೊತ್ತಿನಲ್ಲೇ ಮನೆಯೊಂದರಲ್ಲಿ ಕಳ್ಳತನ ನಡೆದಿತ್ತು. ಈ ಬಗ್ಗೆ ತನಿಖೆಗಿಳಿದ ಪೊಲೀಸರು, ಸುತ್ತಮುತ್ತಲ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಸೀಲಿಸಿದರು. ಆಗ ವಿಜ್ಞಾನ ನಗರದಲ್ಲಿ ಸೇಫ್ ಸಿಟಿ ಯೋಜನೆಯಡಿ ಅಳವಡಿಸಿದ್ದ ಎಚ್‌ಡಿ ಗುಣಮಟ್ಟದ ಕ್ಯಾಮೆರಾದಲ್ಲಿ ಆರೋಪಿ ಮುಖ ಚಹರೆ ಪತ್ತೆಯಾಯಿತು. ಈ ಸುಳಿವು ಆಧರಿಸಿ ಕಾರ್ಯಾಚರಣೆಗಿಳಿದ ಖದೀಮ ಪುಟ್ಟ ಸಿಕ್ಕಿಬಿದ್ದ ಎಂದು ಪೊಲೀಸರು ಹೇಳಿದ್ದಾರೆ.

ಕಡಿಮೆ ಬೆಲೆ ಅಂತಾ ಸೆಕೆಂಡ್ ಹ್ಯಾಂಡ್ ಬೈಕ್ ಕೊಳ್ಳುವ ಮುನ್ನ ಎಚ್ಚರ ಎಚ್ಚರ!

ಪುಟ್ಟ ವೃತ್ತಿಪರ ಕಳ್ಳನಾಗಿದ್ದು, ಆತನ ಮೇಲೆ ನಗರದ ವಿವಿಧ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ. ಹಗಲು ಹೊತ್ತಿನಲ್ಲೇ ಆತ ಮನೆಗಳಿಗೆ ಕನ್ನ ಹಾಕುವುದಕ್ಕೆ ಕುಖ್ಯಾತಿ ಪಡೆದಿದ್ದಾನೆ. ಅದೇ ರೀತಿ ವಿಜ್ಞಾನ ನಗರದಲ್ಲಿ ಕೂಡ ಆತ ಮನೆಗಳ್ಳತನ ಮಾಡಿದ್ದ. ಈಗ ಪುಟ್ಟನ ಬಂಧನದಿಂದ ನಾಲ್ಕು ಮನೆಗಳ್ಳತನ ಕೃತ್ಯಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ನಗರ ವ್ಯಾಪ್ತಿ ಸೇಫ್ ಸಿಟಿ ಯೋಜನೆಯಡಿ ₹400 ಕೋಟಿ ವೆಚ್ಚದಲ್ಲಿ 600ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಈ ಕ್ಯಾಮೆರಾಗಳಿಂದ ಸಮಾಜಘಾತುಕ ವ್ಯಕ್ತಿಗಳ ಮೇಲೆ ನಿಗಾವಹಿಸಲಾಗಿದೆ. ವಿಜ್ಞಾನ ನಗರದ ಕ್ಯಾಮೆರಾಗಳ ನೆರವಿನಿಂದ ಮನೆಗಳ್ಳತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರು ವಿಜಯ್ ಗುರೂಜಿ ಗ್ಯಾಂಗ್ ಸಮೇತ ಅರೆಸ್ಟ್; ಟೆಕ್ಕಿಗೆ ಲೈಂಗಿಕ ಶಕ್ತಿ ಹೆಚ್ಚಿಸೋದಾಗಿ ₹40 ಲಕ್ಷ ವಂಚನೆ!
ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಶಿಕ್ಷಕನಿಗೆ ಪೋಷಕರಿಂದ ಧರ್ಮದೇಟು!