
ಹಾಸನ (ಫೆ.22): ಸಕಲೇಶಪುರ ತಾಲೂಕಿನ ಕ್ಯಾನಹಳ್ಳಿ ಗ್ರಾಮದಲ್ಲಿ ಕಾಫಿ ಎಸ್ಟೇಟ್ನಲ್ಲಿ ಕೆಲಸ ಮಾಡುತ್ತಿದ್ದ ಅಸ್ಸಾಂನ ಕುಟುಂಬವೊಂದು ತಮ್ಮ ಮಾನಸಿಕ ಅಸ್ವಸ್ಥ ಮಗುವನ್ನು ಕೊಠಡಿಯೊಂದರಲ್ಲಿ ಕೂಡಿ ಹಾಕಿ, ಆತನ ಕಾಲುಗಳನ್ನು ಸರಪಳಿಯಿಂದ ಕಟ್ಟಿ ಹಾಕಿರುವ ಘಟನೆ ವರದಿಯಾಗಿದೆ.
ಬುಧವಾರ ಕೊಠಡಿಯಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದ ಬಾಲಕ ರಸ್ತೆಬದಿಯಲ್ಲಿ ನಿಂತಾಗ ಘಟನೆ ಬೆಳಕಿಗೆ ಬಂದಿದೆ.
ಮಾಹಿತಿ ಮೇರೆಗೆ ಸಕಲೇಶಪುರ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಧಾವಿಸಿ ಬಾಲಕನನ್ನು ರಕ್ಷಿಸಿದ್ದಾರೆ. ಉಮೇಶ್ ಎಂಬುವರಿಗೆ ಸೇರಿದ ಕಾಫಿ ಎಸ್ಟೇಟ್ನಲ್ಲಿ ಅಸ್ಸಾಂ ಮೂಲದ ದಂಪತಿ ಕಳೆದೆರಡು ತಿಂಗಳಿಂದ ಕೆಲಸ ಮಾಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕ್ಷುಲ್ಲಕ ಕಾರಣಕ್ಕೆ ತುಂಬು ಗರ್ಭಿಣಿ ಮೇಲೆ ಹಲ್ಲೆ ನಡೆಸಿದ ಪಾಪಿಗಳು; ಮಗು ಹೊಟ್ಟೆಯೊಳಗೇ ಸಾವು!
ದಂಪತಿ ತಮ್ಮ ದಿನನಿತ್ಯದ ಕೆಲಸಕ್ಕೆ ಹೊರಡುವ ಮುನ್ನ ಹುಡುಗನನ್ನು ಸರಪಳಿಯಲ್ಲಿ ಕಟ್ಟಿಹಾಕುತ್ತಿದ್ದರು ಮತ್ತು ಅವನಿಗೆ ಆಹಾರ ನೀಡಿದ ನಂತರ ಕೊಠಡಿಯಲ್ಲಿ ಕೂಡಿ ಹಾಕುತ್ತಿದ್ದರು. ಕಾಫಿ ಎಸ್ಟೇಟ್ ಮಾಲೀಕ ಉಮೇಶ್ ಹಲವು ಬಾರಿ ಎಚ್ಚರಿಕೆ ನೀಡಿದರೂ ದಂಪತಿ ಅದೇ ಅಭ್ಯಾಸ ಮುಂದುವರಿಸಿದ್ದರು ಎನ್ನಲಾಗಿದೆ.
ಪೊಲೀಸರು ಹಾಸನದ ಶಿಶುಪಾಲನಾ ಮತ್ತು ರಕ್ಷಣಾ ಕೇಂದ್ರ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಅವರು ಅಪ್ರಾಪ್ತ ಬಾಲಕನನ್ನು ವೈದ್ಯಕೀಯ ಪರೀಕ್ಷೆಗಾಗಿ ಕ್ರೌಫೋರ್ಡ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ದಂಪತಿ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಮಂಡ್ಯ: ವಿಚಾರಣೆ ನೆಪದಲ್ಲಿ ಠಾಣೆಗೆ ಕರೆತಂದು ಮಹಿಳೆಗೆ ಹಿಗ್ಗಾಮುಗ್ಗಾ ಥಳಿಸಿದ ಪೊಲೀಸರು!
ಈ ಬಗ್ಗೆ ಬಾಲಕ ಏನನ್ನೂ ಬಹಿರಂಗಪಡಿಸದ ಕಾರಣ ಆತನನ್ನು ಹಾಸನದ ಶಿಶುಪಾಲನಾ ಮತ್ತು ರಕ್ಷಣಾ ಕೇಂದ್ರಕ್ಕೆ ಕಳುಹಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ