
ಬೆಂಗಳೂರು [ಡಿ. 10]: ಮೈಸೂರಿನ ಮಸಾಜ್ ಕೇಂದ್ರದಲ್ಲಿ ವೇಶ್ಯಾವಾಟಿಕೆ ನಡೆಸಿದ ಆರೋಪದಕ್ಕೆ ನಟ ಸಾಧು ಕೋಕಿಲಾಗೆ ಹೈ ಕೋರ್ಟಿನಿಂದ ರಿಲೀಫ್ ಸಿಕ್ಕಿದೆ.
ಮೈಸೂರಿನ ಮಸಾದ್ ಕೇಂದ್ರದಲ್ಲಿ ನಟ ಸಾಧು ಕೋಕಿಲಾ ಹಾಗೂ ಇನ್ನೋರ್ವ ನಟ ಮಂಡ್ಯ ರಮೇಶ್ ವಿರುದ್ಧ ವೇಶ್ಯಾವಾಟಿಕೆಯಲ್ಲಿ ಪಾಲ್ಗೊಂಡ ಆರೋಪ ಎದುರಾಗಿತ್ತು.
ಈ ಸಂಬಂಧ ಮೈಸೂರಿನ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪ ಪಟ್ಟಿಯಲ್ಲಿ ಸಾಧುಕೋಕಿಲ ಹೆಸರು ಸೇರಿಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದರು.
'ಕುಚ್ಚಿಕು' ಸಾಂಗ್ ರೀಮೆಕ್; ಡಿ-ಬಾಸ್ಗೆ ಜೋಡಿಯಾಗಿ ಟೈಗರ್!...
ಈ ನಿಟ್ಟಿನಲ್ಲಿ ಪ್ರಕರಣದಿಂದ ತಮ್ಮನ್ನು ಕೈಬಿಡುವಂತೆ ಕೋರಿ ಸ್ಯಾಂಡಲ್ ವುಡ್ ನಟ ಸಾಧುಕೋಕಿಲಾ ಹೈ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ದೂರಿನ ಅನ್ವಯ ಪ್ರಕರಣ ವಿಚಾರಣೆ ನಡೆಸಿದ ಹೈ ಕೋರ್ಟ್ ಸಾಧುಕೋಕಿಲಾ ವಿರುದ್ಧ ಮುಂದಿನ ಕ್ರಮಕ್ಕೆ ತಡೆಯಾಜ್ಞೆ ನೀಡಲಾಗಿದೆ.
ಇದರಿಂದ ಇವರ ವಿರುದ್ಧ ಪ್ರಕರಣ ಸಂಬಂಧ ಇದೀಗ ಸಾಧು ಕೋಕಿಲಾಗೆ ರಿಲೀಫ್ ಸಿಕ್ಕಂತಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ