ಡ್ರಗ್ಸ್ ಪ್ರಕರಣ; ಆದಿತ್ಯ ಆಳ್ವಾ ಅರ್ಜಿ ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್!

Published : Dec 17, 2020, 10:55 PM IST
ಡ್ರಗ್ಸ್ ಪ್ರಕರಣ; ಆದಿತ್ಯ ಆಳ್ವಾ ಅರ್ಜಿ ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್!

ಸಾರಾಂಶ

ಸ್ಯಾಂಡಲ್‌ವುಡ್ ಡ್ರಗ್ಸ್ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ನಟಿ ಸಂಜನಾ ಗಲ್ರಾಣಿ ಇದೀಗ ಜಾಮೀನಿನ ಮೇಲೆ ಹೊರಬಂದಿದ್ದಾರೆ. ಇತ್ತ ಬಂಧನಕ್ಕೂ ಮುನ್ನವೇ ಪರಾರಿಯಾದ ಡ್ರಗ್ಸ್ ಆರೋಪಿ ಆದಿತ್ಯ ಆಳ್ವಾ ಬಂಧನದಿಂದ ತಪ್ಪಿಸಿಕೊಳ್ಳಲು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. 

ನವದೆಹಲಿ(ಡಿ.17):  ಸ್ಯಾಂಡಲ್‌ವುಡ್ ಡ್ರಗ್ಸ್ ಪ್ರಕರಣ ಇದೀಗ ಮತ್ತೆ ಸದ್ದು ಮಾಡುತ್ತಿದೆ. ನಟಿ ಸಂಜನಾ ಗಲ್ರಾಣಿ ಬೇಲ್ ಮೂಲಕ ಹೊರಬಂದ ಬೆನ್ನಲ್ಲೇ ಇದೀಗ ಡ್ರಗ್ಸ್ ಪ್ರಕರಣ ಮತ್ತೆ ಸಂಚಲನ ಮೂಡಿಸುತ್ತಿದೆ. ಇದರ ಬೆನಲ್ಲೇ ಡ್ರಗ್ಸ್ ಪ್ರಕರಣದ ಆರೋಪಿ ಆದಿತ್ಯ ಆಳ್ವಾ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲು ನಿರಾಕರಿಸಿದೆ.

ಬೆಂಗಳೂರು ಡ್ರಗ್ಸ್ ಜಾಲದ ಆರನೇ ಆರೋಪಿಯಾಗಿರುವ ಆದಿತ್ಯ ಆಳ್ವಾ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದಾನೆ. ತನ್ನ ಬಂಧನ ಖಚಿತವಾಗುತ್ತಿದ್ದಂತೆ ಆದಿತ್ಯ ಆಳ್ವಾ ನೇರವಾಗಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ತನಗೆ ನಿರೀಕ್ಷಣಾ ಜಾಮೀನು ನೀಡುವಂತೆ ಅರ್ಜಿ ಸಲ್ಲಿಸಿದ್ದರು. 

ಅದಿತ್ಯ ಆಳ್ವಾ ಅರ್ಜಿ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಇಷ್ಟೇ ಅಲ್ಲ ಹೈಕೋರ್ಟ್‌ಗೆ ತೆರಳಿ ಅರ್ಜಿ ಸಲ್ಲಿಸುವಂತೆ ಸೂಚಿಸಿದ್ದಾರೆ. ಇಷ್ಟೇ ಅಲ್ಲ, ಸುಪ್ರೀಂ ಕೋರ್ಟ್ ಈ ರೀತಿ ಸಮಯ ವ್ಯರ್ಥ ಮಾಡುವುದಿಲ್ಲ ಎಂದು ಎಚ್ಚರಿಕೆ ಸಂದೇಶವನ್ನು ರವಾನಿಸಿದೆ. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬೆಂಗಳೂರು: ತಿಂಡಿ ಎಸೆದು ಪಾತ್ರೆಯಿಂದ ಹಲ್ಲೆ ಮಾಡಿದ ಪುಂಡರಿಗೆ ಕುದಿಯುವ ಎಣ್ಣೆ ಎರಚಿದ ವ್ಯಾಪಾರಿ!
ಅಪರೂಪದ ಕೋತಿ ಪ್ರಭೇದ ಬ್ಯಾಗ್‌ನಲ್ಲಿಟ್ಟು ವಿದೇಶದಿಂದ ಅಕ್ರಮ ಸಾಗಾಟ, ಬೆಂಗಳೂರು ಏರ್ಪೋರ್ಟ್‌ನಲ್ಲಿ ಸಿಕ್ಕಿಬಿದ್ದ ಪ್ರಯಾಣಿಕ!