ರಾಗಿಣಿ ರಿಲೀಸ್, ಸ್ವಾಗತಕ್ಕೆ ಅಭಿಮಾನಿಗಳಿಂದ ಭಾರೀ ಸಿದ್ಧತೆ!

Published : Jan 25, 2021, 08:47 PM ISTUpdated : Jan 25, 2021, 09:29 PM IST
ರಾಗಿಣಿ ರಿಲೀಸ್, ಸ್ವಾಗತಕ್ಕೆ ಅಭಿಮಾನಿಗಳಿಂದ ಭಾರೀ ಸಿದ್ಧತೆ!

ಸಾರಾಂಶ

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ/ ಜೈಲಿನಿಂದ ರಾಗಿಣಿ ಬಿಡುಗಡೆ/  145 ದಿನಗಳ ಜೈಲುವಾಸ ಕೊನೆ/ ಜತೆಯಾಗಿ ನಿಂತ ಕುಟುಂಬದವರಿಗೆ ಮತ್ತು ಸ್ನೇಹಿತರಿಗೆ ಧನ್ಯವಾದ

ನವದೆಹಲಿ(ಜ.25): ಡ್ರಗ್ಸ್ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟಿ ರಾಗಿಣಿಗೆ ಕೊನೆಗೂ ರಿಲೀಫ್ ಸಿಕ್ಕಿದ್ದು ಜೈಲುವಾಸ ಕೊನೆಯಾಗಿದೆ.  145 ದಿನಗಳ ಜೈಲುವಾಸ ಕೊನೆಯಾಗಿದ್ದು ಬಿಡುಗಡೆಯಾಗಿದ್ದಾರೆ. ರಾಗಿಣಿ  ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದ್ದು ರಾಗಿಣಿ ಆಗಮನಕ್ಕೆ ಅಭಿಮಾನಿಗಳು ಸಿದ್ಧತೆ ಮಾಡಿಕೊಂಡಿದ್ದಾರೆ. ಪಟಾಕಿ ಸಿಡಿಸಲು ಅಭಿಮಾನಿಗಳು ಮುಂದಾಗಿದ್ದಾರೆ.

ಇಬ್ಬರು ನಟಿಯರು ಸ್ಯಾಂಡಲ್ ವುಡ್ ಡ್ರಗ್ಸ್ ಕೇಸಿನಲ್ಲಿ ಜೈಲು ಪಾಲಾಗಿದ್ದರು. ನಟಿ ಸಂಜನಾ ಅವರಿಗೆ ಆರೋಗ್ಯ ಸಮಸ್ಯೆ ಕಾರಣ ಇದಕ್ಕೂ ಮೊದಲೇ ಜಾಮೀನು ಸಿಕ್ಕಿತ್ತು.  ನಟಿ ರಾಗಿಣಿ ಪಾರ್ಟಿಯಲ್ಲಿ ಡ್ರಗ್ಸ್ ಸೇವಿಸಿರಬಹುದು. ಆದರೆ ಮನೆಯಲ್ಲಿ ಡ್ರಗ್ಸ್ ಸಿಕ್ಕಿಲ್ಲ ಎಂದು ವಕೀಲರು ವಾದ ಮಂಡಿಸಿದ್ದು ಸುಪ್ರೀಂ ಕೋರ್ಟ್ ಜಾಮೀನು ನೀಡಿತ್ತು.

ನನಗೆ ಸಮಯ ಕೊಡಿ..ಮಾತನಾಡಲು ಸಾಕಷ್ಟು ಸಮಯ ಇದೆ.  ಸುದ್ದಿಗೋಷ್ಠಿ ನಡೆಸಿ ಎಲ್ಲವನ್ನು ತಿಳಿಸಸುತ್ತೇನೆ ಎಂದು ತುಪ್ಪದ ಬೆಡಗಿ ಹೇಳಿದರು. 

ಸೆ. 04, 2020 ರಂದು ರವಿಶಂಕರ್ ಹೇಳಿಕೆ ಆಧರಿಸಿ ರಾಗಿಣಿಯನ್ನು ಬಂಧಿಸಲಾಗಿತ್ತು. ಅಂದಿನಿಂದ ರಾಗಿಣಿ ಪರಪ್ಪನ ಅಗ್ರಹಾರ ಜೈಲಿನಲ್ಲೇ ಇದ್ದರು. ಅನೇಕ ಬಾರಿ ಜಾಮೀನು ಪಡೆಯಲು ಅರ್ಜಿ ಸಲ್ಲಿಸಿದ್ದರಾದರೂ ಯಾವುದೇ ಪ್ರಯೋಜನವಾಗಿರಲಿಲ್ಲ.

ಏನಿದು ಪ್ರಕರಣ?:

ಡ್ರಗ್ಸ್‌ ಜಾಲ ಪ್ರಕರಣದ ಸಂಬಂಧ ಸಿಸಿಬಿ ಪೊಲೀಸರು ಸೆ.4 ರಂದು ರಾಗಿಣಿ ಮತ್ತು ಸೆ.8ರಂದು ಸಂಜನಾರನ್ನು ಬಂಧಿಸಿದ್ದರು. ಪೊಲೀಸ್‌ ಕಸ್ಟಡಿ ಮುಗಿದ ಬಳಿಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದ ಎನ್‌ಡಿಪಿಎಸ್‌ ವಿಶೇಷ ನ್ಯಾಯಾಲಯ, ಸೆ.28ರಂದು ಜಾಮೀನು ಅರ್ಜಿ ವಜಾಗೊಳಿಸಿತ್ತು.

ಇದರಿಂದ, ರಾಗಿಣಿ ಮತ್ತು ಸಂಜನಾ ಜಾಮೀನು ಕೋರಿ ಹೈಕೋರ್ಟ್‌ ಮೊರೆ ಹೋಗಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್‌, ಅರ್ಜಿದಾರರ ವಿರುದ್ಧ ಡ್ರಗ್ಸ್‌ ಪೂರೈಕೆ, ಮಾರಾಟ ಹಾಗೂ ಸೇವನೆಯಂಥಹ ಗಂಭೀರ ಆರೋಪಗಳಿದ್ದು, ಎನ್‌ಡಿಪಿಎಸ್‌ ಕಾಯ್ದೆ ಅಡಿ ಪ್ರಕರಣ ದಾಖಲಾಗಿತ್ತು. 

 

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರಾಜ್ಯದಲ್ಲಿ ಕೈ ಮೀರಿದ ಕಳ್ಳರ ಹಾವಳಿ, ಕಾನೂನು ವ್ಯವಸ್ಥೆ ಸಂಪೂರ್ಣ ವಿಫಲ? ಪೊಲೀಸರ ಮನೆಗಳನ್ನೇ ಬಿಡುತ್ತಿಲ್ಲ ಖದೀಮರು!
ಹುನುಗುಂದದಲ್ಲಿ ಮಂಕಿ ಕ್ಯಾಪ್ ಗ್ಯಾಂಗ್: ಒಂದೇ ರಾತ್ರಿ, 9 ಮನೆ ಕಳವು, ಪೋಲಿಸರ ಮನೆಗಳನ್ನೇ ಬಿಡದ ಖದೀಮರು!